ಗ್ರಾಮೀಣ ಕಲೆಗಳು ಜನರ ಉಸಿರಾಗಲಿ: ಅರುಣಕುಮಾರ

KannadaprabhaNewsNetwork |  
Published : Feb 16, 2024, 01:47 AM IST
ಫೋಟೊ ಶೀರ್ಷಿಕೆ: 11ಆರ್‌ಎನ್‌ಆರ್6ರಾಣಿಬೆನ್ನೂರಿನ ನೀಲಕಂಠೇಶ್ವರ ದೇವಸ್ಥಾನ ಆವರಣದ ಗಣೇಶೋತ್ಸವ ಮಂಟಪದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಜಾನಪದ ಉತ್ಸವ, ಬೃಹತ್ ರಕ್ತದಾನ ಶಿಬಿರ ಮತ್ತು ದೇಹ ದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ಉದ್ಘಾಟಿಸಿದರು. | Kannada Prabha

ಸಾರಾಂಶ

ಇಂದಿನ ಯುವ ಜನತೆ ಯಾಂತ್ರಿಕ ಜೀವನ ಶೈಲಿ ಬದಿಗಿಟ್ಟು ಜಾನಪದಕ್ಕೆ ಶೈಲಿಯ ಬದುಕನ್ನು ಕಟ್ಟಿಕೊಳ್ಳಬೇಕು.

ರಾಜ್ಯಮಟ್ಟದ ಜಾನಪದ ಉತ್ಸವ, ಬೃಹತ್ ರಕ್ತದಾನ ಶಿಬಿರ ಮತ್ತು ದೇಹ ದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ರಾಣಿಬೆನ್ನೂರು

ಇಂದಿನ ಯುವ ಜನತೆ ಯಾಂತ್ರಿಕ ಜೀವನ ಶೈಲಿ ಬದಿಗಿಟ್ಟು ಜಾನಪದಕ್ಕೆ ಶೈಲಿಯ ಬದುಕನ್ನು ಕಟ್ಟಿಕೊಳ್ಳಬೇಕು. ಜಾನಪದ ಕಲೆ ಜಾಗತೀಕರಣವಾಗಿದ್ದು, ಮಾನವೀಯ ಮೌಲ್ಯಗಳನ್ನ ಒತ್ತಿ ಹೇಳುತ್ತವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.

ನಗರದ ಎರೇಕುಪ್ಪಿ ರಸ್ತೆಯ ನೀಲಕಂಠೇಶ್ವರ ದೇವಸ್ಥಾನ ಆವರಣದ ಗಣೇಶೋತ್ಸವ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸೌರಭ ಜಾನಪದ ಕಲಾವೇದಿಕೆ ಮತ್ತು ಕಾಕಿ ಜನಸೇವಾ ಸಂಸ್ಥೆ ಸಹಯೋಗದಲ್ಲಿ ದಿ.ದೊಡ್ಡನಾಗಪ್ಪ ತಿರಕಪ್ಪ ಕಾಕಿ ಹಾಗೂ ದಿ.ಸಣ್ಣನಾಗಪ್ಪ ತಿರಕಪ್ಪ ಕಾಕಿ ಪುಣ್ಯ ಸ್ಮರಣೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಜಾನಪದ ಉತ್ಸವ, ಬೃಹತ್ ರಕ್ತದಾನ ಶಿಬಿರ ಮತ್ತು ದೇಹ ದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದಿನ ಗ್ರಾಮೀಣ ಕಲೆಗಳು ಜನರ ಉಸಿರಾಗಬೇಕು. ನಮ್ಮ ಸಂಸ್ಕೃತಿ, ಪರಂಪರೆ ಉಳಿವಿಗೆ ಸಂಘ-ಸಂಸ್ಥೆಗಳು ಮುಂದಾಗಬೇಕು ಎಂದರು.

ಸುಗಮ ಸಂಗೀತ, ಜನಪದ ಸಂಗೀತ, ಲಂಬಾಣಿ ನೃತ್ಯ, ಜೋಗತಿ ನೃತ್ಯ, ಭರತನಾಟ್ಯ, ಜನಪದ ಸಮೂಹ ನೃತ್ಯಗಳ ತಂಡಗಳು ಕಲಾ ಪ್ರದರ್ಶನ ನೀಡಿದರು.

ಕಾಕಿ ಜನಸೇವಾ ಸಂಸ್ಥೆ ಅಧ್ಯಕ್ಷ ಶ್ರೀನಿವಾಸ ಕಾಕಿ ಅಧ್ಯಕ್ಷತೆ ವಹಿಸಿದ್ದರು.

ಕುರುಹಿನಶೆಟ್ಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಹನುಮಂತಪ್ಪ ಅಮಾಸಿ, ಉಪಾಧ್ಯಕ್ಷ ಶಿವಾನಂದ ಸಾಲಗೇರಿ, ಮುಖಂಡರಾದ ಹನುಮಂತಪ್ಪ ಕಾಕಿ, ಕೆ.ಸಿ. ನಾಗರಜ್ಜಿ, ಸಣ್ಣಹನುಮಂತಪ್ಪ ಕಾಕಿ, ರೂಪಾ ಕಾಕಿ, ವೆಂಕಟೇಶ ಕಾಕಿ, ಪ್ರಭುಲಿಂಗಪ್ಪ ಹಲಗೇರಿ, ಕಲಾವಿದರಾದ ಶಿವಕುಮಾರ ಜಾಧವ, ಪರಶುರಾಮ ಬಣಕಾರ, ಗಂಗಮ್ಮ ಮೋಟೆಬೆನ್ನೂರ, ಮಣಿಕಂಠ ಬಣಕಾರ, ಉದಯರಾಜ ಕೊಳಜಿ, ರಾಜು ಸೂರ್ವೆ, ಚಂದ್ರಪ್ಪ ದೊಡ್ಡಮನಿ, ಗುಡ್ಡರಾಜ ಹಲಗೇರಿ, ರವಿಂದ್ರ ನಲವಾಗಲ, ಗಂಗಾ ಪೂಜಾರ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!