ಯೋಧರ ಬಲಿದಾನ ಯುವಜನತೆಗೆ ಪ್ರೆರಣೆಯಾಗಲಿ: ಜಗದೀಶ

KannadaprabhaNewsNetwork |  
Published : Jul 27, 2024, 12:53 AM IST
ಚಿತ್ರ 26ಬಿಡಿಆರ್4ಬೀದರ್‌ ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಎಬಿವಿಪಿಯಿಂದ ಶುಕ್ರವಾರ 25ನೇ ಕಾರ್ಗಿಲ್‌ ವಿಜಯೋತ್ಸವ ಆಚರಿಸಿ ನಿವೃತ್ತ ಸೈನಿಕ ಜಗದೀಶ ಸ್ವಾಮಿ ಅವರನ್ನು ಸನ್ಮಾನಿಸಿದರು. | Kannada Prabha

ಸಾರಾಂಶ

ಕಾರ್ಗಿಲ್‌ ವಿಜಯೋತ್ಸವ ಶೌರ್ಯ, ತ್ಯಾಗ, ಬಲಿದಾನದ ಸಂಕೇತವಾಗಿದೆ. ತಾರುಣ್ಯದಲ್ಲಿಯೇ ತಮ್ಮ ವೈಯಕ್ತಿಕ ಸುಖ ಭೋಗ ತ್ಯಜಿಸಿ ದೇಶಕ್ಕಾಗಿ ಕಾರ್ಗಿಲ್‌ ಯುದ್ದದಲ್ಲಿ 527 ಜನ ವೀರ ಯೋಧರು ಹುತಾತ್ಮರಾಗಿದ್ದರು.

ಕನ್ನಡಪ್ರಭ ವಾರ್ತೆ ಬೀದರ್‌

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ವತಿಯಿಂದ ನಗರದ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಶುಕ್ರವಾರ 25ನೇ ಕಾರ್ಗಿಲ್‌ ವಿಜಯೋತ್ಸವ ಆಚರಿಸಲಾಯಿತು.

ಈ ವೇಳೆ ನಿವೃತ್ತ ಸೈನಿಕ ಜಗದೀಶ ಸ್ವಾಮಿ ಮಾತನಾಡಿ, ಸೈನ್ಯದಲ್ಲಿ ಸೇರಿ 18 ವರ್ಷಗಳ ಕಾಲ ತಾಯಿ ಭಾರತಿಯ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದ್ದು ನನ್ನ ಭಾಗ್ಯವೆಂದು ನುಡಿದರು.

ಎಬಿವಿಪಿ ಹಿರಿಯ ಮುಖಂಡರಾದ ರೇವಣಸಿದ್ದ ಜಾಡರ್‌ ಮಾತನಾಡಿ, ಕಾರ್ಗಿಲ್‌ ವಿಜಯೋತ್ಸವ ಶೌರ್ಯ, ತ್ಯಾಗ, ಬಲಿದಾನದ ಸಂಕೇತವಾಗಿದೆ. ತಾರುಣ್ಯದಲ್ಲಿಯೇ ತಮ್ಮ ವೈಯಕ್ತಿಕ ಸುಖ ಭೋಗ ತ್ಯಜಿಸಿ ದೇಶಕ್ಕಾಗಿ ಕಾರ್ಗಿಲ್‌ ಯುದ್ದದಲ್ಲಿ 527 ಜನ ವೀರ ಯೋಧರು ಹುತಾತ್ಮರಾಗಿದ್ದರು. ಅವರ ತ್ಯಾಗ ಬಲಿದಾನ ಇಂದಿನ ಯುವ ಪೀಳಿಗೆಗೆ ಪ್ರೆರಣೆಯಾಗಬೇಕು ಎಂದರು.

ಇತ್ತೀಚಿನ ದಿನಗಳಲ್ಲಿ ಭಾಷೆ, ಜಾತಿಯ ಹೆಸರಿನಲ್ಲಿ ಸಮಾಜ ಒಡೆಯುವ, ಮಾದಕ ವಸ್ತುಗಳ ಮೂಲಕ ಯುವಶಕ್ತಿ ಹಾಳು ಮಾಡುವ ಷಡ್ಯಂತ್ರ ನಡೆಯುತ್ತಿದ್ದು ಯುವಶಕ್ತಿ ದೇಶದ ಸಂಪತ್ತಾಗಿದ್ದು ಅದನ್ನು ಅರಿತು ಜಾಗೃತರಾಬೇಕು. ಶಿಕ್ಷಣದ ಜೊತೆಗೆ ರಾಷ್ಟ್ರ ಭಕ್ತಿ ಮೈಗೂಡಿಸಿಕೊಳ್ಳಬೇಕು ಎಂದು ನುಡಿದರು.

ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೇಮಂತ್ ಮಾತನಾಡಿ, ಎಬಿವಿಪಿಯಿಂದ ನಿರಂತರವಾಗಿ ವಿದ್ಯಾರ್ಥಿಗಳ ಸಮಸ್ಯೆಗಳ ವಿರುದ್ಧ ಧ್ವನಿಯಾಗಿ ನಿಲ್ಲುವದರೊಂದಿಗೆ ವಿದ್ಯಾರ್ಥಿಗಳಲ್ಲಿ ರಾಷ್ಟ್ರ ಭಕ್ತಿ ಮೂಡಿಸುವ ಕಾರ್ಯ ಮಾಡುತ್ತಿದೆ ಎಂದು ನುಡಿದರು.

ಕಾಲೇಜಿನ ಪ್ರಾಂಶುಪಾಲರಾದ ದವಿಂದ್ರ ಹಂಚೆ, ಎಬಿವಿಪಿ ನಗರ ಕಾರ್ಯದರ್ಶಿ ಆನಂದ, ಸಹ ಕಾರ್ಯದರ್ಶಿ ಕಾರ್ಯದರ್ಶಿ ಪವನ ಕುಂಬಾರ, ನಾಗರಾಜ ಸುಲ್ತಾನಪೂರ, ಸಾಯಿ ಭೋಸ್ಲೆ ರಾಜ್ಯ ಕಾರ್ಯಕಾರಣಿ ಸದಸ್ಯೆ ಪ್ರಾರ್ಥನಾ, ಮಮತಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು