ಸವಣೂರ: ಜ. 28ರಂದು ಪಟ್ಟಣದಲ್ಲಿ ಏರ್ಪಡಿಸಿರುವ ಕನ್ನಡ ಸಾಹಿತ್ಯ ಸಮ್ಮೇಳನ ಕೇವಲ ಮನೋರಂಜನೆಗೆ ಸೀಮಿತಗೊಳಿಸುವ ಬದಲಾಗಿ ಕನ್ನಡ ಭಾಷೆಯ ಉಳಿವಿಗಾಗಿ ಮಕ್ಕಳಲ್ಲಿ ಜಾಗೃತಿ ಮೂಡಿಸುವಂತಾಗಲಿ ಎಂದು ಕಲ್ಮಠದ ಶ್ರೀ ಮಹಾಂತ ಸ್ವಾಮೀಜಿ ತಿಳಿಸಿದರು.ಪಟ್ಟಣದ ಲಲಾಟೇಶ್ವರ ಕಲ್ಮಠದಲ್ಲಿ ಗುರುವಾರ ಏರ್ಪಡಿಸಿದ್ದ ಸವಣೂರು ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭದ ಸಾನ್ನಿಧ್ಯ ವಹಿಸಿ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.ಅತ್ಯಂತ ಕಷ್ಟಕರ ಪರಿಸ್ಥಿತಿಯಲ್ಲಿ ಸರ್ಕಾರ ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಅನುದಾನವನ್ನು ಕಡಿತಗೊಳಿಸಿದ್ದರೂ ಸಹ ಸ್ಥಳೀಯರಿಂದ ಧನ ಸಹಾಯ ಪಡೆದು ಹಮ್ಮಿಕೊಳ್ಳುವ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿ ಎಂದು ಶುಭ ಹಾರೈಸಿದರು.
ಸಮ್ಮೇಳನ ಅಧ್ಯಕ್ಷ ಮಲ್ಲಾರಪ್ಪ ತಳ್ಳಿಹಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮ್ಮೇಳನ ಕಾರ್ಯಾಧ್ಯಕ್ಷ ರಮೇಶ ಅರಗೋಳ, ಉಪಾಧ್ಯಕ್ಷರಾದ ಎಂ.ಜೆ. ಮುಲ್ಲಾ, ಮೋದಿನ ಹಣಗಿ, ಕೋಶಾಧ್ಯಕ್ಷ ಸುಭಾಸ ಮಜ್ಜಗಿ, ಪದಾಧಿಕಾರಿಗಳಾದ ಪ್ರವೀಣ ಚರಂತಿಮಠ, ಡಾ. ಗುರುಮಹಾಂತಯ್ಯ ಆರಾಧ್ಯಮಠ, ಉಮೇಶ ದಾಮೋದರ, ಶ್ರೀನಿವಾಸ ಖಾರದ, ಪರಶುರಾಮ ಈಳಗೇರ, ಬಸನಗೌಡ ಪಾಟೀಲ, ರವಿ ಕರಿಗಾರ, ರೇಖಾ ಕಣೇಕಲ್, ಸುನಂದಾ ಚಿನ್ನಾಪೂರ ಹಾಗೂ ಇತರರು ಪಾಲ್ಗೊಂಡಿದ್ದರು.