ವಿದ್ಯಾರ್ಥಿ ಸಾಧನೆಯಿಂದ ಶಾಲೆ ಗುರುತಿಸಲ್ಪಡಲಿ

KannadaprabhaNewsNetwork |  
Published : May 14, 2024, 01:01 AM IST
ಎಸ್ಸೆಸ್ಸೆಲ್ಸಿಯಲ್ಲಿ ಲಕ್ಷ್ಷೇಶ್ವರ ತಾಲ್ಲೂಕಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದು ತಾಲೂಕಿನ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿಗಳನ್ನು ಬಿಇಓ ಮಂಗಳಾ ತಾಪಸ್ಕರ್ ಇಲಾಖೆಯ ವತಿಯಿಂದ ಸನ್ಮಾನಿಸಿದರು. | Kannada Prabha

ಸಾರಾಂಶ

ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ ಅವರನ್ನು ಸನ್ಮಾನಿಸಿದರು

ಲಕ್ಷ್ಮೇಶ್ವರ: ವಿದ್ಯಾರ್ಥಿಗಳ ಸಾಧನೆಯಿಂದ ಶಿಕ್ಷಕರು ಗೌರವಿಸಲ್ಪಡಬೇಕು. ಅದುವೇ ನಿಜವಾದ ಸಾಧನೆ. ಅಂತಹ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲು ಶಿಕ್ಷಣ ಇಲಾಖೆಯೇ ಮನೆಯ ಬಾಗಿಲಿಗೆ ಬಂದಿದೆ ಎಂದು ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ ಹೇಳಿದರು.

ಸೋಮವಾರ 2023-24 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗದಗ ಜಿಲ್ಲೆಗೆ ಹಾಗೂ ಲಕ್ಷ್ಮೇಶ್ವರ ತಾಲೂಕಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳ ಮನೆಗೆ ಹೋಗಿ ಅವರನ್ನು ಸನ್ಮಾನಿಸಿ ಮಾತನಾಡಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 620 ಅಂಕ(99.20%) ಗಳಿಸಿ ಜಿಲ್ಲೆಗೆ ದ್ವಿತೀಯ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಲಕ್ಷ್ಮೇಶ್ವರ ಪಟ್ಟಣದ ಲಿಟಲ್ ಹಾರ್ಟ್ಸ್ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿ ಪೂಜಾ ಕುರಹಟ್ಟಿ ಹಾಗೂ 619 (99.04%) ಅಂಕ ಗಳಿಸಿ ಜಿಲ್ಲೆಗೆ ತೃತೀಯ ಹಾಗೂ ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಅಮೃತ ಗಂಗಾಧರ ಶಿರಹಟ್ಟಿ ಹಾಗೂ 617(98.72%) ಅಂಕ ಗಳಿಸಿ ತಾಲೂಕಿಗೆ ತೃತೀಯ ಸ್ಥಾನ ಪಡೆದ ಲಕ್ಷ್ಮೇಶ್ವರದ ಯುನಿಕ್ ಸ್ಕೂಲ್ ನ ವಿದ್ಯಾರ್ಥಿನಿ ರಕ್ಷಿತಾ ಮಂಜುನಾಥ ಸಂಗನಪೇಟ್‌ ಈ ಮೂರು ವಿದ್ಯಾರ್ಥಿಗಳ ಮನೆಗೆ ಹೋಗಿ ಇಲಾಖೆಯ ಪರ ಸನ್ಮಾನ ಮಾಡಲಾಯಿತು.

ಈ ವೇಳೆ ಎಂ.ಎ.ರಡ್ಡೇರ ಡಿಡಿಪಿಐ ಗದಗ ಫೋನ್ ಕರೆಯ ಮೂಲಕ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಜತೆಗೆ ಸಾಧನೆ ಮಾಡಿದ ವಿದ್ಯಾರ್ಥಿಗಳ ಪಾಲಕರು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಶಿರಹಟ್ಟಿ ಬ್ಲಾಕ್ ಗದಗ ಜಿಲ್ಲೆಗೆ ಎರಡನೇ ಸ್ಥಾನ ಪಡೆದ ಪ್ರಯುಕ್ತ ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ ಅವರನ್ನು ಸನ್ಮಾನಿಸಿದರು.

ಈ ವೇಳೆ ಶಿಕ್ಷಣಾಧಿಕಾರಿಗಳ ಸಂಘ, ಶಿಕ್ಷಕರ ಸಂಘ ಹಾಗೂ ನೌಕರರ ಸಂಘಟನೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಶಾಲೆಗಳ ಶಿಕ್ಷಕ-ಶಿಕ್ಷಕಿಯರು, ಇಸಿಓ, ಬಿ.ಆರ್.ಪಿ, ಸಿ.ಆರ್.ಪಿಯವರು, ಪಾಲಕರು, ಶಿಕ್ಷಣಾಭಿಮಾನಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದ ಜೊತೆಗೆ ವೃತ್ತಿಪರ ಕೌಶಲ್ಯ ಅಗತ್ಯ
ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಯೋಜನಾ ಸಭೆ