ಕನ್ನಡಪ್ರಭ ವಾರ್ತೆ ಇಳಕಲ್ಲ
ನಗರದ ದೇವಾಂಗ ಸಂಘದ ಆರ್.ವೀರಮಣಿ ಸಾಂಸ್ಕೃತಿಕ ಭವನದಲ್ಲಿ ಬಾಗಲಕೋಟೆ ಜಿಲ್ಲಾ ದೇವಾಂಗ ಸಂಘ, ಬಾಗಲಕೋಟೆ ಜಿಲ್ಲಾ ದೇವಾಂಗ ನೌಕರ ಸಂಘ, ದೇವಾಂಗ ಸಂಘ ಇಳಕಲ್ಲ ಹಾಗೂ ಇಳಕಲ್ಲ ತಾಲೂಕು ನೌಕರ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿಗಣತಿ ಜಾರಿಗೊಳಿಸುವ ಮೂಲ ಉದ್ದೇಶ ಕೇಳವರ್ಗಗಳ ಜನರು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ತುಳಿತಕ್ಕೊಳಗಾಗುವುದನ್ನು ತಡೆಯುವ ಉದ್ದೇಶವಿದ್ದು, ನೀವು ಈಗತಾನೆ ನಿಮ್ಮ ರಾಜ್ಯಾಧ್ಯಕರು ಹೇಳಿದಂತೆ ಚಾಚೂತಪ್ಪದೆ ಪಾಲಿಸಿದರೆ ನಿಮ್ಮ ಸಮುದಾಯಕ್ಕೆ ಯಾವುದೇ ಅನ್ಯಾಯ ಆಗುವುದಿಲ್ಲ ಎಂದರು.
ನಮ್ಮ ಸರ್ಕಾರಿ ಯಾವತ್ತೂ ನೇಕಾರ ಸಮುದಾಯ ಪರವಾಗಿದ್ದು, ಯಾವುದೇ ಕಾರಣಕ್ಕೂ ನಿಮಗೆ ಅನ್ಯಾಯವಾಗಲು ನಾನು ಬಿಡಲ್ಲ. ದೇವಾಂಗ ಸಮಾಜದೊಂದಿಗೆ ನಮ್ಮ ತಂದೆಯವರ ಕಾಲದಿಂದಲೂ ಅವಿನಾಭಾವ ಸಂಬಂಧ ಹೊಂದಿದ್ದೇನೆ. ನಗರದಲ್ಲಿ ೪೨ ಎಕರೆ ಪ್ರದೇಶದಲ್ಲಿ ನಿರ್ಮಾಣಗೊಳ್ಳುವ ನಿವೇಶನದಲ್ಲಿ ನೇಕಾರ ಸಮುದಾಯ ೭೦೦ ಮನೆ ಮೀಸಲಿಡುವುದಾಗಿ ಭರವಸೆ ನೀಡಿದರು. ಜಗದ್ಗುರು ದಯಾನಂದಪುರಿ ಸ್ವಾಮೀಜಿ ನ.೨೯ ಹಾಗೂ ೩೦ರಂದು ಬನಶಂಕರಿಯಲ್ಲಿ ಜರುಗುವ ಅಖಿಲ ಭಾರತ ದೇವಾಂಗ ಮಹಾಸಮ್ಮೇಳನಕ್ಕೆ ಆಗಮಿಸಲು ಅವ್ಹಾನಿಸಿದ್ದು, ಎರಡು ದಿನ ನಾನು ಅಲ್ಲೇ ವಾಸ್ತವ್ಯ ಹೂಡಿ ಕಾರ್ಯಕ್ರಮ ಯಶಸ್ವಿಗೊಳಿಸುವುದಾಗಿ ಹೇಳಿದರು.ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿ, ಇಂದು ನೇಕಾರಿಕೆ ಸಂಕಷ್ಟಕರ ಸ್ಥಿತಿಯಲ್ಲಿದ್ದು, ನಿಮ್ಮ ಮುಂದಿನ ಪೀಳಿಗೆ ಇದರಿಂದ ಪಾರಾಗಬೇಕಾದರೆ ನಿಮ್ಮ ಮಕ್ಕಳಿಗೆ ಶಿಕ್ಷಣ ನೀಡಿ ಶೈಕ್ಷಣಿಕವಾಗಿ ಪ್ರಗತಿಯತ್ತ ಸಾಗುವಂತೆ ಮಾಡಿ. ನಗರದ ನೇಕಾರ ಸಮುದಾಯ ಯಾವತ್ತೂ ನನ್ನನ್ನು ಬೆಂಬಲಿಸುತ್ತಿದ್ದು, ಆ ಸಮುದಾಯಕ್ಕೆ ನಾನು ಯಾವತ್ತೂ ಋಣಿಯಾಗಿದ್ದೇನೆ. ಪ್ರತಿಭಾ ಪುರಸ್ಕಾರ ಹಾಗೂ ಸಾಧಕರನ್ನು ಗುರುತಿಸಿ ಅವರಿಗೆ ಸನ್ಮಾನಿಸುವ ಕಾರ್ಯ ನಿಜವಾಗಿಯೂ ಶ್ಲಾಘನೀಯ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ನೌಕರ ಸಂಘದ ಅಧ್ಯಕ್ಷ ಬಸವರಾಜ ಕುದರಿ ಸಂಘ ಈವರೆಗೂ ನಡೆದು ಬಂದ ದಾರಿಯನ್ನು ವಿವರಿಸಿದರು.
ವೇದಿಕೆ ಮೇಲೆ ಜಿಲ್ಲಾ ದೇವಾಂಗ ಸಮಾಜದ ಅಧ್ಯಕ್ಷ ಸತೀಶ ಸಪ್ಪರದ, ತಾಲೂಕು ಅಧ್ಯಕ್ಷ ನಾರಾಯಣ ಬಿಜ್ಜಲ ಸೇರಿ ಅನೇಕ ಗಣ್ಯರು ಉಪಸ್ಥಿತರಿದ್ದರು.