ಕನ್ನಡಪ್ರಭ ವಾರ್ತೆ ಕುಶಾಲನಗರರಾಜ್ಯ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಯೋಜನೆಯಾದ ಆಶಾಕಿರಣ ದೃಷ್ಟಿಕೇಂದ್ರದ ಸೇವೆ ಅಗತ್ಯ ಇರುವ ಪ್ರತಿಯೊಬ್ಬರಿಗೂ ತಲುಪಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.
ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ವಿವಿಧ ಕಾಮಗಾರಿಗಳಿಗೆ 82 ಲಕ್ಷ ರು. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕರು ತಿಳಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ಮಾತನಾಡಿ, ಆಶಾಕಿರಣ ಯೋಜನೆ ಸರ್ಕಾರದ ಕನಸಿನ ಯೋಜನೆಯಾಗಿದೆ. ಬಡವರಿಗೆ, ಜನಸಾಮಾನ್ಯರಿಗೆ ಕಣ್ಣಿನ ತೊಂದರೆಗೆ ಉಚಿತ ಚಿಕಿತ್ಸೆ ಮಾಡಿ ಕನ್ನಡಕ ಕೊಡಲಾಗುತ್ತಿದೆ. ರಾಜ್ಯಾದ್ಯಂತ ಹಾಗೂ ಜಿಲ್ಲೆಯಲ್ಲೂ ಈ ಯೋಜನೆ ಅನುಷ್ಠಾನಗೊಂಡಿದೆ. ಕಳೆದ ವರ್ಷ ಆರು ಸಾವಿರ ಜನರಿಗೆ ತಪಾಸಣೆ ಮಾಡಲಾಗಿತ್ತು. ಈ ವರ್ಷ ಕೂಡ ತಪಾಸಣೆ ಮಾಡಲಾಗುತ್ತಿದ್ದು, ಇದುವರೆಗೆ 1220 ಮಂದಿಗೆ ಕನ್ನಡಕ ವಿತರಣೆ ಮಾಡಲಾಗಿದೆ ಎಂದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡೂರಾವ್, ಡಾ.ಆನಂದ್, ಆರೋಗ್ಯರಕ್ಷಾ ಸಮಿತಿ ಸದಸ್ಯರಾದ ದಾಮೋದರ್, ಕೂಡಿಗೆ ಟಿ.ಪಿ.ಹಮೀದ್, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಆರೋಗ್ಯ ಇಲಾಖೆಯ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಎಂ.ಎನ್.ಮಧುಸೂದನ್ ಹಾಗೂ ವೈದ್ಯರು, ಇಲಾಖಾ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರು ಇದ್ದರು.