- ವಿವಿಧ ಸಂಘಟನೆಗಳ ಮುಖಂಡರಿಂದ ಡಿಸಿಗೆ ಮನವಿ- - - ಕನ್ನಡಪ್ರಭ ವಾರ್ತೆ ದಾವಣಗೆರೆ ಆ.1ರಂದು ಸರ್ವೋಚ್ಛ ನ್ಯಾಯಾಲಯದ ಏಳು ನ್ಯಾಯಮೂರ್ತಿಗಳ ಪೂರ್ಣಪೀಠವು ಎಸ್ಸಿ/ಎಸ್ಟಿ ಮೀಸಲಾತಿಯಲ್ಲಿ ಒಳಮೀಸಲಾತಿ ನೀಡುವುದು ರಾಜ್ಯ ಸರ್ಕಾರಕ್ಕೆ ಹಕ್ಕಿದೆ ಎಂದು ತೀರ್ಪು ನೀಡಿದೆ. ಈ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಕರ್ನಾಟಕ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ಹಾಗೂ ಮಾದಿಗ ದಂಡೋರ ಸಮಿತಿ, ದಲಿತ ಸಂಘರ್ಷ ಸಮಿತಿಗಳು, ಮೀಸಲಾತಿ ಹೋರಾಟಗಾರರು ಡಿಸಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈಗಾಗಲೇ ತರಾತುರಿಯಲ್ಲಿ ರಾಜ್ಯ ಸರ್ಕಾರ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ತಕ್ಷಣವೇ ನೇಮಕಾತಿ ಪ್ರಕ್ರಿಯೆ ರದ್ದುಪಡಿಸಿ, ಒಳಮೀಸಲಾತಿ ಜಾರಿ ಮಾಡಬೇಕೆಂದು ಅವರು ಮನವಿ ಸಲ್ಲಿಸಿದರು.
ಈ ಸಂದರ್ಭ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟಗಾರರಾದ ನಿವೃತ್ತ ಡಿವೈಎಸ್ಪಿ ರವಿ ನಾರಾಯಣ, ಪ್ರೊ.ಮಲ್ಲಿಕಾರ್ಜುನ, ಕುಬೇರಪ್ಪ ಗೌರಿಪುರ, ತಮ್ಮಣ್ಣ ಹೊನ್ನಾಳಿ, ಮಲ್ಲೇಶಪ್ಪ ಎಚ್.ಹರಿಹರ, ಮಂಜಪ್ಪ ಎಂ.ಎಚ್. ಕೆಂಚಿಕೊಪ್ಪ, ನರಸಿಂಹಪ್ಪ ಸೇರಿದಂತೆ ಸಮಾಜದ ಬಂಧುಗಳು ಉಪಸ್ಥಿತರಿದ್ದರು.- - -
(** ಈ ಫೋಟೋ-ಕ್ಯಾಪ್ಷನ್ ಪ್ಯಾನೆಲ್ಗೆ ಬಳಸಬಹುದು)-16ಕೆಡಿವಿಜಿ36ಃ:
ಸುಪ್ರೀಂ ಕೋರ್ಟ್ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ದಾವಣಗೆರೆಯಲ್ಲಿ ಕರ್ನಾಟಕ ಮಾದಿಗ ದಂಡೋರ, ಮಾದಿಗ ಮೀಸಲಾತಿ ಹೋರಾಟ ಸಮಿತಿ, ವಿವಿಧ ಸಮಿತಿಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.