ಕನ್ನಡಪ್ರ ವಾರ್ತೆ, ಶಿರಾಳಕೊಪ್ಪ
ಶಿರಾಳಕೊಪ್ಪ ಪುರಸಭೆಯ ಯಡಿಯೂರಪ್ಪ ಸಭಾಂಗಣದಲ್ಲಿ ಗುರುವಾರ ನಡೆದ ಪಿ.ಎಂ. ಸ್ವನಿಧಿ - ಸೆ ಸಮೃದ್ಧಿ ಹಾಗೂ ವಿಕಲಚೇತನರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿ, ಬೀದಿಬದಿ ವ್ಯಾಪಾರಿಗಳಿಗೆ ಯಾವುದೇ ಭದ್ರತೆ ಪಡೆಯದೇ ಪ್ರಾರಂಭದಲ್ಲಿ ₹10 ಸಾವಿರ ಸಾಲ, ಅದನ್ನು 1 ವರ್ಷದಲ್ಲಿ ತೀರಿಸಿದರೆ ₹20 ಸಾವಿರ ಸಾಲ, ಅನಂತರ ₹50 ಸಾವಿರ ಹೀಗೆ ₹1 ಲಕ್ಷವರೆಗೆ ಬ್ಯಾಂಕ್ ಯಾವುದೇ ಗ್ಯಾರಂಟಿ ಇಲ್ಲದೇ ಸಾಲ ಕೊಡುವ ವ್ಯವಸ್ಥೆ ಈ ಯೋಜನೆಯಲ್ಲಿ ಇದೆ ಎಂದರು.
ಅಲ್ಲದೇ, ವಿವಿಧ ಜೀವ ವಿಮೆ ವ್ಯವಸ್ಥೆ ಇದೆ. ಈವರೆಗೆ ರೇಷನ್ ಕಾರ್ಡ್ ಇದ್ದಲ್ಲಿ ನಾವು ಮುಂಬರುವ ದಿನಗಳಲ್ಲಿ ದೇಶದ ಯಾವುದೇ ಭಾಗಕ್ಕೆ ಹೋದರೂ ಅಲ್ಲಿ ರೇಷನ್ ಪಡೆಯುವ ವ್ಯವಸ್ಥೆ ಇದೆ. ಗರ್ಭಿಣಿ ಮಹಿಳೆಯರಿಗೆ ₹5 ಸಾವಿರವರೆಗೆ ಹಣ ದೊರೆಯಲಿದೆ. ಮುಂಬರುವ ದಿನಗಳಲ್ಲಿ ಡಿಜಿಟಲ್ ಪೇಮೆಂಟ್ ಮಾಡಿ, ಅದರ ಬಗ್ಗೆ ಹೆಚ್ಚು ಗಮನಹರಿಸಿದರೆ ನಿಮಗೆ ಪ್ರತಿ ತಿಂಗಳು ₹100 ದೊರಕಲಿದೆ. ಇಂಥ ಯೋಜನೆಯ ಪ್ರಯೋಜನೆ ಪಡೆಯುವಂತೆ ತಿಳಿಸಿದರು.ಜಿಲ್ಲಾ ಅಭಿಯಾನ ವ್ಯವಸ್ಥಾಪಕ ಕಾಶಿನಾಥ ಮಾತನಾಡಿ, ಇದೊಂದು ಅರಿವು ಮೂಡಿಸುವ ಕಾರ್ಯಕ್ರಮ. ಇಂದು ಭಾರತ ಇಡೀ ಜಗತ್ತಿಗೆ ಅರಿವು ಮೂಡಿಸುವ ದೇಶವಾಗಿದೆ. ನಾವು ವೈಯಕ್ತಿಕ ಅಭಿವೃದ್ಧಿ ಆದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗಲಿದೆ. ವೈಯಕ್ತಿಕ ಸಾಲ ಪಡೆಯಲು ಮುಂದಾದಲ್ಲಿ ಬ್ಯಾಂಕ್ನಲ್ಲಿ ಶೇ.13 ಬಡ್ಡಿ ದರದಲ್ಲಿ ಸಾಲ ದೊರೆಯುತ್ತದೆ. ಅದಕ್ಕೆ ಶೇ.7 ಸಬ್ಸಿಡಿ ದೊರಕುತ್ತದೆ. ಇದನ್ನು ಉಪಯೋಗಿಸಿಕೊಂಡು ವ್ಯಾಪಾರ ಮಾಡಿ, ಮುಂದೆ ಬನ್ನಿ, ಮನೆ ಕಟ್ಟಿಕೊಳ್ಳಿ, ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿ ಎಂದು ಸಲಹೆ ನೀಡಿದರು.
ಪುರಸಭೆ ಸದಸ್ಯ ಟಿ.ರಾಜು ಮಾತನಾಡಿ, ಇದೊಂದು ಬೀದಿ ವ್ಯಾಪಾರಿಗಳಿಗೆ ಆಯೋಜಿಸಿರುವ ಕಾರ್ಯಕ್ರಮ. ನಾವು ಇಲ್ಲಿಯ ಬೀದಿಬದಿ ವ್ಯಾಪಾರಿಗಳ ಅನಕೂಲಕ್ಕಾಗಿ ಫುಡ್ ಕೊರ್ಟ್ ವ್ಯವಸ್ಥೆ ಮಾಡಲಾಗಿದೆ. ಆದರೆ, ಇಲ್ಲಿ ಬಾಡಿಗೆ ಹಿಡಿದು ಅದನ್ನು ಹಾಗೆಯೇ ಬಿಟ್ಟು, ಬೇರೆ ಜಾಗದಲ್ಲಿ ವ್ಯಾಪಾರ ಮಾಡಿದರೂ ನೀವು ಬಾಡಿಗೆ ಕಟ್ಟಲೇ ಬೇಕಾಗುತ್ತದೆ ಎಂದರು.
- - - -28ಕೆಎಸ್ ಎಚ್ಆರ್1: ವಿಕಲಚೇತನರಿಂದ ಗಿಡಕ್ಕೆ ನೀರು ಹಾಕಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.