ವಿಶಾಲ ಕೆರೆ ನಿರ್ಮಾಣಕ್ಕೆ ಗ್ರಾಮಸ್ಥರು ಭೂಮಿ ನೀಡಲಿ: ರಾಯರಡ್ಡಿ

KannadaprabhaNewsNetwork |  
Published : Jul 12, 2024, 01:35 AM IST
೧೧ವೈಎಲ್‌ಬಿ೨:ಯಲಬುರ್ಗಾ ತಾಲೂಕಿನ ಕಲ್ಲೂರ,ಸಂಗನಾಳ ಗ್ರಾಮಗಳಲ್ಲ್ಲಿ ಗುರುವಾರ ಕೆರೆ ನಿರ್ಮಾಣ ಯೋಜನಗೆ ಜಮೀನು ಲಭ್ಯತೆಯ ಬಗ್ಗೆ ಹಿರಿಯರು,ರೈತ ಪ್ರತಿನಿಧಿಗಳೊಂದಿಗೆ ಜರುಗಿದ ಚರ್ಚಾ ಸಭೆಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮಾತನಾಡಿದರು. | Kannada Prabha

ಸಾರಾಂಶ

ಯಲಬುರ್ಗಾ ತಾಲೂಕಿನ ಕಲ್ಲೂರ, ಸಂಗನಾಳ ಗ್ರಾಮಗಳಲ್ಲಿ ಗುರುವಾರ ₹೯೭೦ ಕೋಟಿ ಅನುದಾನದಲ್ಲಿ ೩೮ ಕೆರೆ ನಿರ್ಮಾಣ ಯೋಜನೆಗೆ ಜಮೀನು ಲಭ್ಯತೆಯ ಬಗ್ಗೆ ಹಿರಿಯರು, ರೈತ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಚರ್ಚೆ ನಡೆಸಿದರು.

ಯಲಬುರ್ಗಾ: ನಿಮ್ಮೂರಿನಲ್ಲಿ ದೊಡ್ಡ ಕೆರೆ ನಿರ್ಮಿಸಲಾಗುವುದು, ಗ್ರಾಮಸ್ಥರು ಭೂಮಿ ನೀಡಿದರೆ ಸರ್ಕಾರದ ದರಕ್ಕಿಂತಲೂ ನಾಲ್ಕು ದುಪ್ಪಟ್ಟು ಹೆಚ್ಚು ಹಣ ನೀಡುತ್ತೇವೆ. ಸುಮಾರು ೫೦ ಎಕರೆಯಷ್ಟು ಭೂಮಿ ನೀಡಿ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.

ತಾಲೂಕಿನ ಕಲ್ಲೂರ, ಸಂಗನಾಳ ಗ್ರಾಮಗಳಲ್ಲಿ ಗುರುವಾರ ₹೯೭೦ ಕೋಟಿ ಅನುದಾನದಲ್ಲಿ ೩೮ ಕೆರೆ ನಿರ್ಮಾಣ ಯೋಜನೆಗೆ ಜಮೀನು ಲಭ್ಯತೆಯ ಬಗ್ಗೆ ಹಿರಿಯರು, ರೈತ ಪ್ರತಿನಿಧಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಚರ್ಚಾ ಸಭೆಯಲ್ಲಿ ಅವರು ಮಾತನಾಡಿದರು. ಕುಕನೂರು, ಯಲಬುರ್ಗಾ ತಾಲೂಕಿನ ಜನರು ನೀರಿಗಾಗಿ ಪರಿತಪಿಸುವುದನ್ನು ಗಮನದಲ್ಲಿಟ್ಟುಕೊಂಡು, ಅದಕ್ಕೆ ಶಾಶ್ವತ ಪರಿಹಾರ ನೀಡುವ ಉದ್ದೇಶದಿಂದ ವಿಶಾಲವಾದ ಕೆರೆ ನಿರ್ಮಾಣ ಮಾಡಲಾಗುತ್ತದೆ ಎಂದರು.

ಈ ಭಾಗದಲ್ಲಿ ಯಾವುದೇ ದೊಡ್ಡ ನದಿಯಾಗಲಿ, ಹಳ್ಳವಾಗಲಿ ಹರಿದಿಲ್ಲ. ಯಾವುದೇ ರೀತಿಯ ನೀರಿನ ಮೂಲಗಳಿಲ್ಲ. ಕೆರೆ ನಿರ್ಮಾಣ ಜತೆಗೆ ಈಗಾಗಲೇ ಇರುವ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಅವಳಿ ತಾಲೂಕಿನಲ್ಲಿ ಕುಡಿಯುವ ನೀರು ಹಾಗೂ ಅಂತರ್ಜಲ ಅಭಿವೃದ್ಧಿಗಾಗಿ ೨೦೨೪-೨೫ನೇ ಸಾಲಿನ ಆಯವ್ಯಯದಲ್ಲಿ ₹೯೭೦ ಕೋಟಿ ನಿಗದಿಪಡಿಸಿ ಘೋಷಿಸಲಾಗಿದೆ. ಈ ಬೃಹತ್ ೩೮ ಕೆರೆ ತುಂಬಿಸುವ ಯೋಜನೆಗೆ ಕನಿಷ್ಠ ೫೦ ಎಕರೆಗಿಂತ ಹೆಚ್ಚಿಗೆ ಜಮೀನು ಪ್ರತಿಯೊಂದು ಗ್ರಾಮದಲ್ಲಿ ನೀಡಬೇಕು ಎಂದು ಮನವಿ ಮಾಡಿದರು.

ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತದ ಮುಖ್ಯ ಎಂಜಿನಿಯರ್ ಮಂಜುನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎಸಿ ಕ್ಯಾ. ಮಹೇಶ್ ಮಾಲಗತ್ತಿ, ತಹಸೀಲ್ದಾರ್ ಬಸವರಾಜ ತೆನ್ನಳ್ಳಿ, ಸಿಪಿಐ ಮೌನೇಶ್ವರ ಮಾಲಿಪಾಟೀಲ್, ಎಇಇ ಚನ್ನಪ್ಪ, ಮುಖಂಡರಾದ ಬಸವರಾಜ ಉಳ್ಳಾಗಡ್ಡಿ, ನವಲಿ ಹಿರೇಮಠ, ವೀರನಗೌಡ ಬಳೂಟಗಿ, ಯಂಕಣ್ಣ ಯರಾಶಿ, ಹನುಮಂತಗೌಡ ಚೆಂಡೂರು, ಮಂಜುನಾಥ ಕಡೇಮನಿ, ವರದಯ್ಯ ಹಿರೇಮಠ, ಈರಪ್ಪ ಕುಡಗುಂಟಿ, ಶರಣಪ್ಪ ಗಾಂಜಿ, ಡಾ. ಶಿವನಗೌಡ ದಾನರೆಡ್ಡಿ, ಮಲ್ಲು ಜಕ್ಕಲಿ, ಬಸವರಾಜ ಮ್ಯಾಗೇರಿ, ಪಿಡಿಒ ರೇಣುಕಾ ಹಾಗೂ ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧರಣಿ ಸ್ಥಳಕ್ಕೆ ಎಡಿಸಿ ಭೇಟಿ: ಪಟ್ಟು ಬಿಡದ ರೈತರು
ಸಂಕ್ರಮಣದ ಸಂಭ್ರಮದ ತೆಪ್ಪೋತ್ಸವ