ಕನ್ನಡಪ್ರಭ ವಾರ್ತೆ ಮಂಡ್ಯ
ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಪ್ರಧಾನ ವೇದಿಕೆಯಲ್ಲಿ ಶನಿವಾರ ನಡೆದ ನೆಲ-ಜಲ ಸಾಕ್ಷರತೆ: ಅವಲೋಕನ ಕುರಿತ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನದಿ ನೀರು ಹಂಚಿಕೆಯನ್ನು ವೈಜ್ಞಾನಿಕವಾಗಿ ಮಾಡಬೇಕು. ತಮಿಳುನಾಡಿನವರು ನಮ್ಮ ಡ್ಯಾಂ ಗಳಲ್ಲಿ ನೀರು ಕಂಡಾಕ್ಷಣ ಕೇಳುವುದನ್ನು ಬಿಡಬೇಕು. ಕೋರ್ಟ್ ಹೇಳಿದ್ದಕ್ಕೆ ನೀರು ಬಿಡುತ್ತ ಹೋದರೆ ನಮಗೆ ಮಾರ್ಚ್ ತಿಂಗಳಲ್ಲಿ ಮಳೆಯಾಗದಿದ್ದರೆ ಕುಡಿವ ನೀರಿಗೆ ಏನು ಮಾಡಬೇಕು ಎಂದು ಅವರು ಪ್ರಶ್ನಿಸಿದರು.ಕಾವೇರಿ ಜಲಾನಯನ ಪ್ರದೇಶದಲ್ಲಿ ಕಬ್ಬು ಬೆಳೆಯಲು ಇಂತಿಷ್ಟು ಎಕರೆ ಪ್ರದೇಶ ಎಂದು ನಿಗದಿಪಡಿಸಲಾಗಿದೆ. ಆದರೆ ಬೆಂಗಳೂರಿನಂಥ ನಗರಕ್ಕೆ ಬೆಲ್ಲ, ಸಕ್ಕರೆ ಪೂರೈಕೆಸಲು ಮಂಡ್ಯದಲ್ಲಿ ಕಬ್ಬು ಬೆಳೆಯಲೇ ಬೇಕು. ಕಬ್ಬಿಗೆ ಬೇಡಿಕೆ ಹೆಚ್ಚಾಗಿ ಕಬ್ಬು ಬೆಳೆಯುವ ಪ್ರದೇಶವೂ ವಿಸ್ತರಿಸಿದೆ. ಇನ್ನು ರೈತರು ಹನಿ ನೀರಾವರಿ ಪದ್ಧತಿಗೆ ಹೆಚ್ಚಿನ ಆದ್ಯತೆ ನೀಡಿ ಸಹಕರಿಸಬೇಕು ಎಂದರು.
ಕಳೆದ ಹನ್ನೊಂದು ವರ್ಷದಿಂದ ಕೃಷ್ಣ ಯೋಜನೆ ಗೆಜೆಟ್ ನೋಟಿಫಿಕೇಷನ್ ಆಗಿಲ್ಲ. ಆದ್ಯತೆ ಮೇಲೆ ಕೂಡಲೇ ಗೆಟೆಟ್ ನೋಟಿಫಿಕೇಷನ್ ಹೊರಡಿಸಬೇಕು. ಕೆರೆ ತುಂಬಿಸುವ ಯೋಜನೆಗೆ ಆದ್ಯತೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
1956ರಲ್ಲಿ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ ರಾಜ್ಯಗಳು ನೀರಾವರಿ ಸೌಲಭ್ಯಕ್ಕಾಗಿ ದೊಡ್ಡ ಸಭೆ ನಡೆಸಿದರು. ನಾಗಾರ್ಜುನ ಮತ್ತು ಕೊಯ್ನ ಯೋಜನೆಯ ಪ್ರಸ್ತಾಪ ಮುಂದಿಟ್ಟು ವಿಜಯಪುರ, ಧಾರವಾಡ ಮುಂತಾದ ಜಿಲ್ಲೆಗಳನ್ನು ಸೇರಿಸಿಕೊಂಡಿದ್ದವು. ಕರ್ನಾಟಕ ರಾಜ್ಯ ಉದಯವಾಗಿ ಈ ಎಲ್ಲಾ ಜಿಲ್ಲೆಗಳು ಕರ್ನಾಟಕ ವ್ಯಾಪ್ತಿಯೊಳಗೆ ಸೇರಿದ ಮೇಲೆ ನಮ್ಮ ರಾಜ್ಯ ವ್ಯಾಪ್ತಿಯಲ್ಲಿ ಕಾಲುವೆ ತೋಡಲು 2 ಕೋಟಿ ವೆಚ್ಚ ಭರಿಸುವಂತೆ ಇಟ್ಟ ಪ್ರಸ್ತಾಪವನ್ನು ನಮ್ಮ ಸರ್ಕಾರ ಒಪ್ಪಿಕೊಳ್ಳಲಿಲ್ಲ. ಅಂದಿನಿಂದಲೂ ಕೃಷ್ಣ ಯೋಜನೆ ಹಾಗೆಯೇ ಉಳಿದಿದೆ ಎಂದರು.
ಇನ್ನು ಮಹಾದಾಯಿ ಯೋಜನೆ 40 ವರ್ಷದಿಂದ ತ್ರಿಶಂಕು ಸ್ಥಿತಿಯಲ್ಲಿದೆ. ಪರಿಸರ ಇಲಾಖೆ ಇದಕ್ಕೆ ಅನುಮತಿ ನೀಡಿಲ್ಲ ಎಂದರು.
ತೆರೆದ ಬಾವಿ, ಕೊಳವೆ ಬಾವಿ ಹೆಚ್ಚಾದ ಮೇಲೆ ಕೆರೆ ಈ ರೀತಿ ದುಸ್ಥಿತಿ ತಲುಪುತ್ತಿವೆ. ಮಣ್ಣಿನ ಸವಕಳಿಯಿಂದ ಕೆರೆಗಳಲ್ಲಿ ಹೂಳು ತುಂಬುತ್ತಿದೆ. ಮಳೆಗಾಲದಲ್ಲಿ ಹೆಚ್ಚುವರಿ ನೀರನ್ನು ಕೆರೆಗೆ ತುಂಬಿಸಿಕೊಳ್ಳಬೇಕು. ಕೆರೆಗಳನ್ನು ಉಳಿಸಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.
‘ಮಣ್ಣು ಮಾಣಿಕ್ಯ, ನೀರು ಅಮೃತ. ನಾವು ಈಗ ಸಾವಯವ ಕೃಷಿ, ಜೈವಿಕ ಕೃಷಿ ಪ್ರೋತ್ಸಾಹಿಸುತ್ತಿದ್ದೇವೆ. ನೀರಿನ ಅವೈಜ್ಞಾನಿಕ ಪದ್ಧತಿ ಬಳಕೆ ಬಿಡಬೇಕು. ಈ ಬಗ್ಗೆ ನಾವು ಶಾಲೆಗಳಲ್ಲಿ ಜಾಗೃತಿ ಮೂಡಿಸಬೇಕು. ನಾವು ಸತ್ತರೆ ಮಣ್ಣಿಗೆ ಹೋಗುತ್ತೇವೆ. ಮಣ್ಣೇ ಸತ್ತರೆ ಎಲ್ಲಿಗೆ?’
‘ಕಾವೇರಿ ಜಲಾನಯನ ಪ್ರದೇಶದಲ್ಲಿ ಕಬ್ಬು ಬೆಳೆಯಲು ಇಂತಿಷ್ಟು ಎಕರೆ ಪ್ರದೇಶ ಎಂದು ನಿಗದಿಪಡಿಸಲಾಗಿದೆ. ಆದರೆ ಬೆಂಗಳೂರಿನಂಥ ನಗರಕ್ಕೆ ಬೆಲ್ಲ, ಸಕ್ಕರೆ ಪೂರೈಕೆಸಲು ಮಂಡ್ಯದಲ್ಲಿ ಕಬ್ಬು ಬೆಳೆಯಲೇ ಬೇಕು. ಕಬ್ಬಿಗೆ ಬೇಡಿಕೆ ಹೆಚ್ಚಾಗಿ ಕಬ್ಬು ಬೆಳೆಯುವ ಪ್ರದೇಶವೂ ವಿಸ್ತರಿಸಿದೆ. ಇನ್ನು ರೈತರು ಹನಿ ನೀರಾವರಿ ಪದ್ಧತಿಗೆ ಹೆಚ್ಚಿನ ಆದ್ಯತೆ ನೀಡಿ ಸಹಕರಿಸಬೇಕು.’
ಮಹೇಂದ್ರ ದೇವನೂರು