ಬಳ್ಳಾರಿ: ಲೀನ್ ಯೋಜನೆ ಮತ್ತು ಝಡ್.ಇ.ಡಿ ಹಾಗೂ ರಫ್ತು ಯೋಜನೆಗಳಿಂದ ವಿವಿಧ ಸೌಲಭ್ಯಗಳನ್ನು ಪಡೆದು ವ್ಯಾಪಾರ ಮತ್ತು ಸಂಘ ಸಂಸ್ಥೆ ಜೊತೆ ಸೇರಿ ಯುವಕರು ನವ ಉದ್ಯಮವನ್ನು ಆರಂಭಿಸಿ ಉದ್ಯಮಶೀಲತೆ ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಹೇಳಿದರು.
ಸರ್ಕಾರ ಕೈಗಾರಿಕಾ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಯುವಕರು ಉದ್ಯಮವನ್ನು ಸ್ಥಾಪಿಸಲು ಒಂದು ಉತ್ತಮ ಅವಕಾಶ ದೊರೆಯುತ್ತದೆ. ರೈತರು, ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಬೇಕು. ಸರ್ಕಾರದಿಂದ ಸಣ್ಣ ಗುಡಿ ಕೈಗಾರಿಕೆ ಸ್ಥಾಪಿಸಲು ಸಬ್ಸಿಡಿ ವ್ಯವಸ್ಥೆ ಇದ್ದು, ಇದರ ಸೌಲಭ್ಯ ಪಡೆದು ನಿರುದ್ಯೋಗಿಗಳಿಗೆ ಕೆಲಸವನ್ನು ನೀಡಬೇಕು ಎಂದು ಹೇಳಿದರು.
ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ವಿ.ರಾಮಚಂದ್ರ ಅವರು ಮಾತನಾಡಿ, ನಮ್ಮ ದೇಶದಲ್ಲಿ ಸಣ್ಣ ಕೈಗಾರಿಕೆಗಳು ಅತಿ ಹೆಚ್ಚಾಗಿ ಕಂಡು ಬರುತ್ತವೆ. ಅತಿ ಹೆಚ್ಚು ಸಣ್ಣ ಕೈಗಾರಿಕೆಗಳು ರೈತರಿಂದ ಬೆಳವಣಿಯಾಗಿವೆ ಮತ್ತು ರೈತರಿಂದಲೇ ಉದ್ಯಮಗಳು ಬೆಳೆಯುತ್ತಿವೆ ಎಂದು ಹೇಳಿದರು.ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ್, ಭಾರತ ದೇಶವು ಆರ್ಥಿಕವಾಗಿ 4ನೇ ಸ್ಥಾನದಲ್ಲಿದೆ. ಅಭಿವೃದ್ಧಿಯಲ್ಲಿ ಕೃಷಿ ಮತ್ತು ಕೈಗಾರಿಕೆಗಳು ಪ್ರಧಾನಪಾತ್ರ ವಹಿಸುತ್ತವೆ. ಸಣ್ಣ ಪ್ರಮಾಣದ ಕೈಗಾರಿಕೆಗಳಿಂದ ಗ್ರಾಮೀಣ ಜನರಿಗೆ ಉದ್ಯೋಗ ಸಿಗುತ್ತದೆ. ವಿದ್ಯಾರ್ಥಿಗಳು ಮತ್ತು ಉದ್ಯಮದಾರರು ಪ್ರೋಡಕ್ಟ್ ಉತ್ಪನ್ನ ಮಾಡಲು ಈ ಯೋಜನೆಯು ಉತ್ತಮವಾಗಿದೆ. ಜಪಾನ್ ದೇಶದ ರೀತಿ ಉತ್ತಮ ಪ್ರೋಡಕ್ಟ್ಗಳನ್ನು ಉತ್ಪತ್ತಿ ಮಾಡಬೇಕು ಎಂದರು.