ಯುವ ಜನಾಂಗದಲ್ಲಿ ಓದುವ ಹವ್ಯಾಸ ಮೂಡಲಿ: ಚಿದಂಬರ ಬೈಕಂಪಾಡಿ

KannadaprabhaNewsNetwork |  
Published : Nov 14, 2025, 03:45 AM IST
ಚಿದಂಬರ ಬೈಕಂಪಾಡಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳಿಗಾಗಿಡ್‌ ‘ಅಕಾಡೆಮಿಡ್ ಒಂಜಿ ದಿನ- ಬಲೆ ತುಳು ಓದುಗ’ ಕಾರ್ಯಕ್ರಮ ನೆರವೇರಿತು.

ಮಂಗಳೂರು: ತುಳು ಭಾಷೆಯಲ್ಲಿ ಅಪಾರ ಸಾಹಿತ್ಯವಿದ್ದು, ಯುವ ಜನಾಂಗ ಈ ಕೃತಿಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಈ ಸಾಹಿತ್ಯ ಕೃತಿಗಳ ಪರಿಚಯ ಮಾಡಿಕೊಳ್ಳಲು ಅಕಾಡೆಮಿಯು ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ. ಅದನ್ನು ಸದ್ವಿನಿಯೋಗ ಮಾಡುವಂತೆ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಹೇಳಿದ್ದಾರೆ.

ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಅಕಾಡೆಮಿಡ್ ಒಂಜಿ ದಿನ- ಬಲೆ ತುಳು ಓದುಗ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಸಂತ್ ಕಾರಂದೂರು ಮಾತನಾಡಿ, ವಿದ್ಯಾರ್ಥಿಗಳಿಗೆ ಅಕಾಡೆಮಿ ಒದಗಿಸುತ್ತಿರುವ ಈ ಅವಕಾಶವನ್ನು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದರು.

ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ತುಳು ಬದುಕನ್ನು ಅರಿತುಕೊಳ್ಳಲು ತುಳು ಪುಸ್ತಕಗಳ ಓದು ಮುಖ್ಯ. ಈ ಹಿನ್ನೆಲೆಯಲ್ಲಿ ತುಳುವೇತರರೂ ಕೂಡ ತುಳು ನೆಲದ ಸೊಗಡು ಅರಿಯಲು ಕನ್ನಡ, ಇಂಗ್ಲಿಷ್, ಮಲಯಾಳಂ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ತುಳು ಕುರಿತು ಪುಸ್ತಕಗಳು ಅಕಾಡೆಮಿಯಲ್ಲಿ ಇವೆ ಎಂದರು.

ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕರ್ಕೇರ, ಪ್ರಾಂಶುಪಾಲ ಡಾ.ಜಯಪ್ರಕಾಶ್ ಶುಭ ಕೋರಿದರು. ಗ್ರಂಥಪಾಲಕಿ ದಿವ್ಯಾ ಎಸ್., ವಿದ್ಯಾರ್ಥಿನಿ ದಿವ್ಯಾ, ಉಪನ್ಯಾಸಕರಾದ ವಸಂತ್, ಸುಪ್ರಜಾ ಇದ್ದರು.

ಅಕಾಡೆಮಿ ಸದಸ್ಯ ಬಾಬು ಕೊರಗ ಪಾಂಗಾಳ ನಿರೂಪಿಸಿದರು, ರಿಜಿಸ್ಟ್ರಾರ್ ಪೂರ್ಣಿಮಾ ಸ್ವಾಗತಿಸಿದರು. ವಿದ್ಯಾರ್ಥಿ ಸುಮಿತ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ