ಬ್ಯಾಡಗಿ:
ಪಟ್ಟಣದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಪಠ್ಯೇತರ ಚಟುವಟಿಕೆ ಸಮಾರೋಪ ಸಮಾರಂಭ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಗೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶೈಕ್ಷಣಿಕ ಸ್ಪರ್ಧೆಯಲ್ಲಿ ನಾವೆಲ್ಲರೂ ನಮ್ಮ ಮಕ್ಕಳಿಗೆ ಕೇವಲ ಬದುಕುವುಕ್ಕಾಗಿ ಶಿಕ್ಷಣ ಕೊಡಿಸುತ್ತಿದ್ದೇವೆಯೇ ವಿನಃ ಎಲ್ಲರೂ ಒಟ್ಟಿಗೆ ಬಾಳಿ ಬದುಕಬೇಕು ಎಂಬುದನ್ನು ಹೇಳಿಕೊಡುವುದರಿಂದ ದೂರವಾಗಿದ್ದೇವೆ. ಆದರೆ ಶಿಕ್ಷಣ ಪಡೆದ ಮಕ್ಕಳನ್ನೇ ನೆಚ್ಚಿದ ಕುಟುಂಬಗಳು ಅನಾಥಾಶ್ರಮದ ಬಾಗಿಲು ತಟ್ಟುತ್ತಿದ್ದು, ಭಾರತೀಯ ಸಂಸ್ಕೃತಿ ಜೀವಂತವಾಗಿದ್ದರೆ ಕುಟುಂಬದ ಎಲ್ಲ ಸದಸ್ಯರು ಒಟ್ಟಿಗೆ ಬಾಳಲು ಸಾಧ್ಯ ಎಂದರು.
ಐಟಿಐ ಕಾಲೇಜು ಪ್ರಾಚಾರ್ಯ ಸಂಜೀವ ಅಂಗಡಿ ಮಾತನಾಡಿ, ಶಿಕ್ಷಣವು ಜ್ಞಾನ, ಕೌಶಲ್ಯ, ತಂತ್ರ ಇನ್ನಿತರ ಮಾಹಿತಿ ಒದಗಿಸುವ ಮೂಲಕ ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ. ಅವುಗಳ ಜತೆಗೆ ಸಮಾಜದಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಕಲ್ಪಿಸಲಿದೆ. ಹೀಗಾಗಿ ಪ್ರತಿಯೊಬ್ಬ ಯುವಕ ಶಿಕ್ಷಣವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಕರೆ ನೀಡಿದರು.ಡಾ. ದೇವೇಂದ್ರ ಮಾತನಾಡಿ, ಅಶಿಕ್ಷಿತರ ಗುಂಪಿನಲ್ಲಿ ವಿದ್ಯಾವಂತ ವ್ಯಕ್ತಿಯು ಯಾವಾಗಲೂ ಎದ್ದು ಕಾಣುತ್ತಾನೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಶೈಕ್ಷಣಿಕ ಪ್ರಗತಿ ನಿರ್ಣಾಯಕ ಪಾತ್ರ ವಹಿಸಲಿದೆ. ಶಿಕ್ಷಣದಿಂದ ಬಡತನ ನಿವಾರಣೆಯಾಗಲಿದ್ದು, ವಿದ್ಯಾವಂತ ವ್ಯಕ್ತಿ ತನ್ನ ಕುಟುಂಬವನ್ನು ಶಿಕ್ಷಣದಿಂದಲೇ ರಕ್ಷಿಸಿಕೊಳ್ಳುತ್ತಾನೆ. ಹೀಗಾಗಿ ನಾವೆಲ್ಲರೂ ಕಡ್ಡಾಯ ಶಿಕ್ಷಣವನ್ನು ಮುಕ್ತವಾಗಿ ಸ್ವಾಗತಿಸೋಣ ಎಂದರು.