ಕನ್ನಡಪ್ರಭ ವಾರ್ತೆ ಕೊಪ್ಪಳ
ತಳಕಲ್ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ಸೇನೆಗೆ ಸೇರುವ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಈ ವರ್ಷ ಸೇನಾ ರ್ಯಾಲಿಯ ಮುಖಾಂತರ ಇಡೀ ದೇಶದಾದ್ಯಂತ 40 ಸಾವಿರ ಅಭ್ಯರ್ಥಿಗಳ ಆಯ್ಕೆ ಮಾಡುತ್ತಿದ್ದೆವೆ. ಮುಂದಿನ ವರ್ಷ ಇದು ಡಬಲ್ ಆಗಲಿದೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಸೇನೆಯಲ್ಲಿ ಸೇರಲು ಬಹಳಷ್ಟು ಅವಕಾಶವಿದ್ದು, ವಿದ್ಯಾರ್ಥಿಗಳು ದೇಶ ಸೇವೆ ಮಾಡಲು ಮುಂದೆ ಬರಬೇಕು ಎಂದು ಹೇಳಿದರು.ಆಯ್ಕೆ ಪ್ರಕ್ರಿಯೆ ಮೊದಲಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗುತ್ತದೆ. ನಂತರ ವಿವಿಧ ಹಂತಗಳಲ್ಲಿ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳ ಅರ್ಹತೆ ಪರಿಶೀಲನೆ ಮಾಡಲಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಲ್ ವಿವೇಕ್ ಜಮಾದಾರ, ಕಾಲೇಜಿನ ಪ್ರಾಂಶುಪಾಲ ಡಾ. ವಿರುಪಾಕ್ಷ ಬಾಗೋಡಿ, ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರದೀಪ್, ಕಬ್ಬಳ್ಳಿ ಪ್ರಶಾಂತ, ಡಾ. ಶೋಭಾ ಭುವನೇಶ್ವರಿ, ಪ್ರಥಮ ದರ್ಜೆ ಸಹಾಯಕ ಹೊನ್ನಪ್ಪ ಸೇರಿದಂತೆ ಕಾಲೇಜಿನ ಇತರ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.