ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಬಿಎಲ್ಡಿಇ ನ್ಯೂ ಕ್ಯಾಂಪಸ್ನ ಎ.ಎಸ್.ಪಾಟೀಲ ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಬಿಎಲ್ಡಿಇ ಸಂಸ್ಥೆ, ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರ ಫೆಡರೇಶನ್, ಎನ್ಎಸ್ಎಸ್ ಘಟಕಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ-ಕಾಲೇಜುಗಳಲ್ಲಿ ಸಂಸ್ಕೃತಿ, ಕಲೆಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಬೇಕು. ಮಕ್ಕಳನ್ನು ಸಾಂಸ್ಕೃತಿಕವಾಗಿ ತೊಡಗಿಸಿಕೊಳ್ಳಲು ಬಾಲ್ಯದಿಂದಲೇ ಪ್ರೇರಣೆ ನೀಡಬೇಕು. ಅವರಿಗೆ ಜಾನಪದ ಕಲೆಗಳ ಅಭಿರುಚಿಯನ್ನು ಬೆಳೆಸಬೇಕು. ಇಂದಿನ ಯುವಕರು ನಮ್ಮ ದೇಶದ ಪರಂಪರೆಯನ್ನು ಗಟ್ಟಿಗೊಳಿಸಲು, ಇವುಗಳೆಡೆಗೆ ಹೆಚ್ಚು ಒತ್ತು ನೀಡುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.
ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಅರವಿಂದ ಕೊಪ್ಪ ಮಾತನಾಡಿ, ಬದುಕು ಬದಲಾಯಿಸುವ ಬಹುದೊಡ್ಡ ಆಯುಧ ನಮ್ಮ ಕಲೆ ಹಾಗೂ ಸಂಸ್ಕೃತಿ. ಇವುಗಳನ್ನು ಸ್ಪರ್ಧೆಗೆ ಮಾತ್ರ ಸೀಮಿತಗೊಳಿಸದೇ ನಮ್ಮ ಬದುಕಿನ, ಜೀವನದ ಕ್ರಮವಾಗಬೇಕು. ಕಲೆ ಸಂಸ್ಕೃತಿ ದೈನಂದಿನ ಬದುಕಿನ ಭಾಗವಾಗಿಸಬೇಕು ದುಡ್ಡಿಗೆ ಮಾತ್ರ ಸೀಮಿತಗೊಳಿಸದೆ ನಮ್ಮ ಬದುಕಿನ ಭಾಗವಾಗಬೇಕು. ಇಂದಿನ ಯುವಜನತೆ ನಮ್ಮ ದೇಶದ ಭವ್ಯ ಸಂಸ್ಕೃತಿ ಕಲೆಗಳಿಗೆ ಹೆಚ್ಚು ಹೊತ್ತು ನೀಡುವುದರೊಂದಿಗೆ ಸಾಂಸ್ಕೃತಿಕವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.ಪ್ರಾಚಾರ್ಯ ಬಿ.ಎಸ್.ಬೆಳಗಲಿ ಮಾತನಾಡಿ, ಇದು ಯುವ ಜನರ ಉತ್ಸವವಾಗಿದೆ. ಜಗತ್ತಿನಲ್ಲಿ ಅತಿ ಹೆಚ್ಚಿನ ಯುವಕರನ್ನು ಹೊಂದಿರುವ ದೇಶ ಭಾರತ. ಆದ್ದರಿಂದ ಇಂತಹ ಯುವಶಕ್ತಿಯನ್ನು ಉತ್ತಮ ವಿಚಾರಗಳಿಂದ ಬೆಳೆಸಬೇಕಾಗಿದೆ. ಕಲೆ, ಸಾಹಿತ್ಯ ಸಂಸ್ಕೃತಿ ಅವರಲ್ಲಿ ಬೆಳೆಸಬೇಕಾಗಿದೆ. ನಮ್ಮ ಭಾಗದಲ್ಲಿ ಡೊಳ್ಳಿನ ಕುಣಿತ, ಹಂತಿಯ ಹಾಡು, ಸೋಬಾನೆ ಮುಂತಾದ ಜನಪದಿಯ ಕಲೆಗಳಿದ್ದು, ಅವುಗಳನ್ನು ಯುವಪೀಳಿಗೆ ಕಲಿಯಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಏಕ ಜನಪದ ನೃತ್ಯ, ಸಮೂಹ ಜನಪದ ನೃತ್ಯ, ಕಥೆ ಬರೆಯುವುದು, ಕವನ ರಚನೆ, ವಿಜ್ಞಾನ ಮಾದರಿಗಳ ಪ್ರದರ್ಶನ, ಚಿತ್ರಕಲೆ, ಗುಡಿ ಕೈಗಾರಿಕೆ ಕಲಾ ಪ್ರಕಾರ, ನೇಕಾರಿಕೆ/ಜವಳಿ, ಕೃಷಿ ಉತ್ಪನ್ನ ಸೇರಿದಂತೆ ಅನೇಕ ವಿಷಯಾಧಾರಿತ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಕೋಟ್
ಡಾ.ಜಾವೀದ ಜಮಾದಾರ, ರಾಷ್ಟ್ರೀಯ ಯುವಜನೋತ್ಸವ ಸಮಿತಿ ಸದಸ್ಯ