ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ ಕಹಿ ನೆನಪು ಇನ್ನೂ ಇದೆ. ಕೆಲ ಯುವಕರು ಮೊನ್ನೆ ಒಳಹೋಗಿದ್ದಾರೆ. ಯಾರಿಗೆ ಜೀವ ಹಾನಿ ಮಾಡುತ್ತಿದ್ದರೋ ಗೊತ್ತಿಲ್ಲ. ಇದೊಂದು ಭದ್ರತಾ ವೈಫಲ್ಯವಾಗಿದೆ. ಇದಕ್ಕೆ ಮೂಲ ಕಾರಣ ಯಾರು, ಮೂಲ ಬೇರು ತಗೆದು ಹಾಕೋ ಕೆಲಸ ಆಗಬೇಕು. ಕೇಂದ್ರ ಸರ್ಕಾರ ಸಂಪೂರ್ಣ ತನಿಖೆ ಮಾಡಬೇಕು. ಇದು ಸರ್ಕಾರಕ್ಕೆ ಕೆಟ್ಟ ಹೆಸರು ಎಂದರು.
ಸಂಸತ್ ದೇಶದ ಹೃದಯ ಭಾಗವಾಗಿದೆ. ಯಾರು ಇಂತಹ ಕೆಲಸ ಮಾಡಿದ್ದಾರೆ ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಇಂತಹ ಘಟನೆ ಪದೇ ಪದೇ ಆಗುತ್ತಿವೆ. ಸರಿಯಾಗಿ ತಿಳಿದುಕೊಂಡು ಪಾಸ್ ಕೊಡಬೇಕು. ಈ ಕುರಿತು ಸಮಗ್ರ ತನಿಖೆಯಾಗಬೇಕು. ಯಾಕೆ ಅವರು ಈ ಕೃತ್ಯಕೆ ಕೈ ಹಾಕಿದರೂ ಎನ್ನುವ ಬಗ್ಗೆ ತನಿಖೆಯಾಗಬೇಕು ಎಂದರು.ಬಿಜೆಪಿಗೆ ಹೋಗಲ್ಲ
ನಾನು ಅಪಮಾನದಿಂದ ಹೊರಗೆ ಬಂದಿದ್ದೇನೆ. ಈಶ್ವರಪ್ಪನವರೆ ನಿಮಗೆ ಧಕ್ಕೆ ಆದರೆ ಗೊತ್ತಾಗುತ್ತದೆ. ಅಡ್ವಾಣಿ, ವಾಜಪೇಯಿ ಅವರ ಕಾಲದ ಬಿಜೆಪಿ ಇದೀಗ ಉಳಿದಿಲ್ಲ. ಸಿದ್ಧಾಂತ ಮಾತಾಡುವುದನ್ನು ಈಶ್ವರಪ್ಪ ಬಿಟ್ಟು ಬಿಡಲಿ ಎಂದು ಹೇಳಿದರು.
ಕರ್ನಾಟಕ ಬಿಜೆಪಿ ಉದ್ದಾರ ಆಗುವುದಕ್ಕೆ ಸಾಧ್ಯ ಇಲ್ಲ. ದಿನಕ್ಕೆ ಒಬ್ಬೊಬ್ಬರು ಮಾತನಾಡುತ್ತಿದ್ದಾರೆ. ಬಿಜೆಪಿ ರಿಪೇರಿ ಆಗಲ್ಲ. ಮಾಜಿ ಸಿಎಂಗಳಾದ ಯಡಿಯೂರಪ್ಪ, ಬೊಮ್ಮಾಯಿ ಇದೀಗ ಮಾತಾಡಬೇಕು. ಸೋಲಿಸೋಕೆ ಹಣ ಕೊಟ್ಟಿದ್ದಾರೆ, ಬ್ಲಾಕ್ ಮೇಲೆ ಮಾಡಿದ್ದರು ಅಂತಾರೆ. ಇದರ ಬಗ್ಗೆ ಯಾಕೆ ಯಡಿಯೂರಪ್ಪ, ಬೊಮ್ಮಾಯಿ ಮಾತಾಡ್ತಿಲ್ಲ ಎಂದು ಪ್ರಶ್ನಿಸಿದ ಅವರು, ಯಾರದೋ ವೈಯಕ್ತಿಕ ಹಿತಾಸಕ್ತಿಗೆ ನನಗೆ ಟಿಕೆಟ್ ತಪ್ಪಿಸಿದ್ದರು. ನಾನು ವಾಪಸ್ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.