ಸಿಂಧನೂರು: ಡೆಂಘೀ ಜ್ವರ ಬರದಂತೆ ಜಾಗೃತಿ ವಹಿಸುವುದು ಅವಶ್ಯಕ ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ನಾಗರಾಜ ಕಾಟ್ವಾ ಹೇಳಿದರು.
ಡೆಂಘೀ ಜ್ವರವು ಈಡಿಸ್ ಈಜಿಪ್ಟಿ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಡೆಂಘೀ ಜ್ವರವು ಒಂದು ಮಾರಕವಾದ ಕಾಯಿಲೆ. ಆದರೆ ಚಿಕನ್ ಗುನ್ಯಾ ಮಾರಣಾಂತಿಕವಲ್ಲ. ರೋಗದ ಲಕ್ಷಣಗಳು ಕಂಡು ಬಂದ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದು ಎಂದು ತಿಳಿಸಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಂಗನಾಥ್ ಗುಡಿ, ಸಂಗನಗೌಡ ಪಾಟೀಲ್, ತಾಲೂಕು ಮೇಲ್ವಿಚಾರಕ ಎಫ್ಎ ಹಣಗಿ ಸೇರಿ ಆಸ್ಪತ್ರೆ ಸಿಬ್ಬಂದಿ, ಸನ್ರೈಸ್ ಕಾಲೇಜು ಹಾಗೂ ಬಸವ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಆಶಾ ಕಾರ್ಯಕರ್ತೆಯರು ಇದ್ದರು.