ವೃತ್ತಿ ನಿರತ ಛಾಯಾಗ್ರಾಹಕ ಸಂಘದ ವಾರ್ಷಿಕೋತ್ಸವ ಕನ್ನಡಪ್ರಭ ವಾರ್ತೆ ಬೇಲೂರು
ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಲೂಕು ವೃತ್ತಿ ನಿರತ ಛಾಯಾಗ್ರಾಹಕ ಸಂಘದ ೧೨ ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟಿಸಿ ಮಾತನಾಡಿ, ಮೊಬೈಲ್ ಹಾವಳಿ ಛಾಯಾಗ್ರಾಹಕ ವೃತ್ತಿಗೆ ಮಾರಕವಾಗಿ ಪರಿಣಮಿಸಿದೆ. ಪುರಸಭೆಯಿಂದ ಛಾಯಾಗ್ರಾಹರ ಸಂಘಕ್ಕೆ ನಿವೇಶನ ಹಾಗೂ ತರಬೇತಿ ನೀಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ಎಲ್ಲರಿಗೂ ಸ್ಮೈಲ್ ಪ್ಲೀಸ್ ಎಂದು ಹೇಳುವ ಛಾಯಾಗ್ರಾಹಕನ ಬದಕು ಕಷ್ಟದಲ್ಲಿದೆ. ಕೊರೋನಾ ಸಮಯದಲ್ಲಿ ಇವರ ಬದಕು ಅತಂತ್ರವಾಗಿದ್ದು ಇನ್ನೂ ಚೇತರಿಕೆ ಕಂಡಿಲ್ಲ. ಸರ್ಕಾರ ಇವರು ಬದುಕು ಕಟ್ಟಿಕೊಳ್ಳಲು ಅಸಂಘಟಿತ ಕಾರ್ಮಿಕ ರ ಪಟ್ಟಿಗೆ ಸೇರಿಸಬೇಕು ಎಂದು ಮನವಿ ಮಾಡಿದರು.
ಸಾಲು ಮರದ ತಿಮ್ಮಕ್ಕ ಅಂತಾರಾಷ್ಟ್ರೀಯ ಪೌಂಡೇಷನ್ ಅಧ್ಯಕ್ಷ ಬಳ್ಳೂರು ಉಮೇಶ್ ಮಾತನಾಡಿ, ಸರ್ಕಾರ ಶೀಘ್ರವೇ ಛಾಯಾಗ್ರಾಹಕ ನಿಗಮ ಮಂಡಳಿ ಸ್ಥಾಪಿಸಲು ಮುಂದಾಗಿ ಸರ್ಕಾರದಿಂದ ಬದುಕು ಕಟ್ಟಿಕೊಳ್ಳುವ ವ್ಯವಸ್ಥೆ ಮಾಡಬೇಕು. ಸಮಾಜದ ಮಹತ್ವದ ಕ್ಷಣ ಹಾಗೂ ವ್ಯಕ್ತಿಯೊಬ್ಬರ ಸಂತಸದ ಕ್ಷಣಗಳನ್ನು ಚಿತ್ರಗಳ ಮೂಲಕ ಹಿಡಿದಿಡುವುದು ವೃತ್ತಿಯ ವಿಶೇಷತೆಯಾಗಿದೆ. ಪತ್ರಿಕಾ ಛಾಯಾಗ್ರಾಹಕರು, ವಿಡಿಯೋಗ್ರಾಫರ್ಗಳು ಅಥವಾ ಛಾಯಾಗ್ರಹಣ ವೃತ್ತಿ ಹೊಂದಿದವರು ಸಮಾಜದ ಅವಿಭಾಜ್ಯ ಅಂಗವಾಗಿದ್ದಾರೆ. ಸಂಘಟನೆಯಿಂದ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿದೆ, ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಯಬೇಕು ಎಂದರು.ಕರ್ನಾಟಕ ಛಾಯಾಗ್ರಾಹಕ ಸಂಘದ ನಿರ್ದೇಶಕ ಜಯಚಂದ್ರ, ನಿಟಕಪೂರ್ವಕ ಅಧ್ಯಕ್ಷ ಎ.ಬಿ.ಪ್ರಕಾಶ್ ಮಾತನಾಡಿದರು.