ಉಳ್ಳವರು ಮೀಸಲಾತಿ ತ್ಯಾಗ ಮಾಡಲಿ

KannadaprabhaNewsNetwork |  
Published : Aug 22, 2025, 01:00 AM IST
ಪೋಟೋ, 21ಎಚ್‌ಎಸ್‌ಡಿ6: ಗೂಳೀಹಟ್ಟಿ ಶೇಖರ್‌ | Kannada Prabha

ಸಾರಾಂಶ

ಸರ್ಕಾರ ಎಡಗೈ ಸಮುದಾಯಕ್ಕೆ ಶೇ.6 ಹಾಗೂ ಬಲಗೈ ಸಮುದಾಯಕ್ಕೆ ಶೇ.6 ಒಳ ಮೀಸಲಾತಿ ನೀಡಿರುವುದನ್ನು ಸ್ವಾಗತಿಸುತ್ತೇನೆ. ಆದರೆ ಸ್ಪೃಶ್ಯ ಮತ್ತು ಅಸ್ಪೃಶ್ಯ ಎಂಬ ಕಲ್ಪನೆ ಅಂಬೇಡ್ಕರ್ ರವರ ಸಂವಿಧಾನದಲ್ಲಿ ಇಲ್ಲ. ಮೀಸಲಾತಿಯನ್ನು ಎಲ್ಲಾ ಸಮುದಾಯಗಳಿಗೆ ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಬೇಕಿತ್ತು. ಶೇ.6ರಷ್ಟು ಮೀಸಲಾತಿಯಿಂದ ಜಾತಿಗಳ ಮಧ್ಯೆ ಕಿತ್ತಾಟ ತಂದಿಟ್ಟಂತಾಗಿದೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಡಿ ಶೇಖರ್‌ ಹೇಳಿದ್ದಾರೆ.

ಹೊಸದುರ್ಗ: ಸರ್ಕಾರ ಎಡಗೈ ಸಮುದಾಯಕ್ಕೆ ಶೇ.6 ಹಾಗೂ ಬಲಗೈ ಸಮುದಾಯಕ್ಕೆ ಶೇ.6 ಒಳ ಮೀಸಲಾತಿ ನೀಡಿರುವುದನ್ನು ಸ್ವಾಗತಿಸುತ್ತೇನೆ. ಆದರೆ ಸ್ಪೃಶ್ಯ ಮತ್ತು ಅಸ್ಪೃಶ್ಯ ಎಂಬ ಕಲ್ಪನೆ ಅಂಬೇಡ್ಕರ್ ರವರ ಸಂವಿಧಾನದಲ್ಲಿ ಇಲ್ಲ. ಮೀಸಲಾತಿಯನ್ನು ಎಲ್ಲಾ ಸಮುದಾಯಗಳಿಗೆ ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಬೇಕಿತ್ತು. ಶೇ.6ರಷ್ಟು ಮೀಸಲಾತಿಯಿಂದ ಜಾತಿಗಳ ಮಧ್ಯೆ ಕಿತ್ತಾಟ ತಂದಿಟ್ಟಂತಾಗಿದೆ ಎಂದು ಮಾಜಿ ಸಚಿವ ಗೂಳಿಹಟ್ಟಿ ಡಿ ಶೇಖರ್‌ ಹೇಳಿದ್ದಾರೆ.

ಈ ಕುರಿತು ವಿಡಿಯೋ ಮೂಲಕ ಅಭಿಪ್ರಾಯ ಹಂಚಿಕೊಂಡಿರುವ ಅವರು, ನಾನು ಸಚಿವ ಶಾಸಕನಾಗಿದ್ದ ಅವಧಿಯಲ್ಲೇ ಈಗಿರುವ ಒಳ ಮೀಸಲಾತಿ ಪ್ರಕಾರವೇ ನಮ್ಮ ಕ್ಷೇತ್ರದಲ್ಲಿ ಸರ್ಕಾರದ ಸವಲತ್ತುಗಳನ್ನು ಹಂಚಿಕೆ ಮಾಡಿದ್ದೆ. ಕೆನೆಪದರ ಜಾರಿಯಾದಲ್ಲಿ ಮಾತ್ರ ಅಂಬೇಡ್ಕರ್‌ರವರ ಆಶಯ ಈಡೇರಿದಂತಾಗುತ್ತದೆ. ಮುಂದೊಂದು ದಿನ ಕೆನೆಪದರ ಜಾರಿಗೆ ಬರಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಉಳ್ಳವರು ಮೀಸಲಾತಿ ತ್ಯಾಗ ಮಾಡಲಿ :

ಮೀಸಲಾತಿಯಿಂದ ಎಲ್ಲಾ ರೀತಿಯ ಪ್ರಯೋಜನಗಳನ್ನು ಪಡೆದು ಉತ್ತಮ ಸ್ಥಾನಕ್ಕೆ ಬಂದ ದಲಿತ ಸಮುದಾಯದ ಮುಖಂಡರು ಆ ಮೀಸಲಾತಿಯನ್ನು ತ್ಯಾಗ ಮಾಡಿ ಅದೇ ಸಮುದಾಯದ ಬೇರೆಯವರಿಗೆ ಅವಕಾಶ ಮಾಡಿಕೊಟ್ಟಲ್ಲಿ ಮಾತ್ರ ಆ ಸಮುದಾಯಗಳು ಅಭಿವೃದ್ಧಿ ಹೊಂದುತ್ತವೆ. ನಾನು ಶಾಲಾ ಕಾಲೇಜು ದಿನಗಳಿಂದ ಮೀಸಲಾತಿಯ ಪ್ರಯೋಜನ ಪಡೆದುಕೊಂಡಿದ್ದೇನೆ. ಸಾಮಾನ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದು ಮೀಸಲಾತಿ ಅನ್ವಯ ಮಂತ್ರಿ ಸ್ಥಾನವನ್ನು ಪಡೆದುಕೊಂಡಿದ್ದೆ. ನಾನು ಇನ್ನು ಮುಂದೆ ನನ್ನ ಮೀಸಲಾತಿಯನ್ನು ತ್ಯಾಗ ಮಾಡಲಿದ್ದೇನೆ. ಸಾಮಾನ್ಯ ವರ್ಗದಲ್ಲಿ ಸ್ಪರ್ಧೆ ಮಾಡುತ್ತೇನೆ. ಇನ್ನುಳಿದ ನಾಯಕರೂ ಅದೇ ರೀತಿ ಮಾಡಿದಲ್ಲಿ ಆಯಾ ಸಮುದಾಯಗಳಲ್ಲಿ ಇತರೆಯವರಿಗೂ ಅವಕಾಶಗಳು ಸಿಗಲಿವೆ ಎಂದು ಹೇಳಿದರು.

ಅದೇ ರೀತಿ ಅರವಿಂದ ಲಿಂಬಾವಳಿ, ಶಿವರಾಜ ತಂಗಡಗಿ, ಮುನಿಯಪ್ಪ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌ ಸೇರಿದಂತೆ ಎಲ್ಲಾ ದಲಿತ ಸಮುದಾಯ ಮುಖಂಡರು ಅಧಿಕಾರಿಗಳು ಮೀಸಲಾತಿಯನ್ನು ತಮ್ಮ ಮಕ್ಕಳಿಗೆ ಮೊಮ್ಮಕ್ಕಳಿಗೆ ಕೊಡಿಸದೆ ಮೀಸಲಾತಿಯಿಂದ ಹೊರಬಂದು ನಮ್ಮದೇ ಸಮುದಾಯದ ಇತರರಿಗೆ ತ್ಯಾಗ ಮಾಡಲಿ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ