ಕನ್ನಡಪ್ರಭ ವಾರ್ತೆ ಚಾಮರಾಜನಗರ
ಜಿಲ್ಲಾಡಳಿತ ಭವನದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಸಮತ್ವ ಟ್ರಸ್ಟ್, ಅಶೋಕ ಪರಿಸರ ಮತ್ತು ಪರಿಸರ ವಿಜ್ಞಾನ ಸಂಶೋಧನಾ ದತ್ತಿ (ಎಟ್ರಿ) ವತಿಯಿಂದ ಆಯೋಜಿಸಿದ್ದ ಆದಿವಾಸಿ ಕಾಲೇಜು ಯುವಜನ ಪ್ರೇರಣಾ ಕಾರ್ಯಾಗಾರ ಮತ್ತು ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ದೇಶದ ಭವಿಷ್ಯವಾಗಿದ್ದಾರೆ. ಆದಿವಾಸಿ ಮಕ್ಕಳು ಅರ್ಧಕ್ಕೆ ಶಾಲೆ ಬಿಡುವ ಪ್ರಕರಣಗಳು ಕಂಡುಬರುತ್ತಿದ್ದು, ಎಸ್ಸೆಸ್ಸೆಲ್ಸಿ, ಪಿಯುಸಿ ನಂತರ ಶಾಲೆ ಬಿಡದೆ ಉನ್ನತ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು. ಉದ್ಯೋಗ ಸಿಗಲು ಉತ್ತಮ ಅಂಕ ಮುಖ್ಯ. ಆ ನಿಟ್ಟಿನಲ್ಲಿ ಉತ್ತಮ ಅಂಕ ಪಡೆಯಲು ಗುರಿ ಇಟ್ಟುಕೊಳ್ಳಬೇಕು. ಅಲ್ಲದೇ ಅನುತ್ತೀರ್ಣರಾದಾಗ ದೃತಿಗೆಡಬಾರದು. ನಿರಂತರ ಪ್ರಯತ್ನ ಮಾಡುವ ಮೂಲಕ ಉತ್ತೀರ್ಣರಾಗಬೇಕು ಎಂದು ಹೇಳಿದರು.ಆದಿವಾಸಿಗಳಿಗೆ ಸರ್ಕಾರದಿಂದ ವಿದ್ಯಾರ್ಥಿವೇತನ, ಅಂತರ್ಜಾತಿ ವಿವಾಹ ಆಗುವವರಿಗೆ ಪ್ರೋತ್ಸಾಹಧನ ಸೇರಿದಂತೆ ಇತರೆ ಹಲವು ಸವಲತ್ತುಗಳು ಸಿಗಲಿದೆ. ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ತಲುಪಿಸಲು ಕ್ರಮವಹಿಸಲಾಗುವುದು ಎಂದರು.
ಜಿಲ್ಲಾ ಬುಡಕಟ್ಟು ಆದಿವಾಸಿ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಡಾ.ಸಿ.ಮಾದೇಗೌಡ ಮಾತನಾಡಿ, ಗಿರಿಜನರಿಗೆ ಶಿಕ್ಷಣ ಬಹಳ ಮುಖ್ಯ. ಸರ್ಕಾರವು ಆದಿವಾಸಿ ಮಕ್ಕಳ ಅನುಕೂಲಕ್ಕಾಗಿ ಹಲವು ಶಾಲೆಗಳನ್ನು ತೆರೆದಿದೆ. ಆದರೆ ಎಸ್ಸೆಸ್ಸೆಲ್ಸಿ ತನಕ ಶಿಕ್ಷಣ ಪಡೆಯುವ ಆದಿವಾಸಿ ಪಟ್ಟಣ ಪ್ರದೇಶಗಳಿಗೆ ಹೊಂದಿಕೊಳ್ಳಲು ಕಷ್ಟವಾಗುವುದರಿಂದ ಕಾಲೇಜುಗಳನ್ನು ಬಿಡುತ್ತಾರೆ ಎಂದು ತಿಳಿಸಿದರು.
ಪುಸ್ತಕ ಬಿಡುಗಡೆ:
ಈ ಸಂದರ್ಭದಲ್ಲಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ತಾಲೂಕು ಅಧಿಕಾರಿ ನವೀನ್ ಭಟ್, ಸಮತ್ತ ಟ್ರಸ್ಟ್ ಅಧ್ಯಕ್ಷ ಡಾ.ಶ್ರೀನಿವಾಸ್, ಏಟ್ರಿ ಸಂಸ್ಧೆಯ ಡಾ.ಸಿದ್ದಪ್ಪಶೆಟ್ಟಿ, ಮುಖಂಡರಾದ ಜಡೇಸ್ವಾಮಿ, ಪುಟ್ಟಮ್ಮ, ರಂಗೇಗೌಡ, ಬಸವರಾಜು, ಮಾದು, ನಂಜೇಗೌಡ ಮುಂತಾದವರು ಇದ್ದರು.