ಪೈಗಂಬರರ ಮಾನವೀಯ ಮೌಲ್ಯ ಅಳವಡಿಸಿಕೊಳ್ಳೊಣ: ಜಿ.ಎಸ್. ಗಡ್ಡದೇವರಮಠ

KannadaprabhaNewsNetwork |  
Published : Aug 27, 2026, 02:45 AM IST
ಲಕ್ಷ್ಮೇಶ್ವರದಲ್ಲಿ ಈದ್ ಮಿಲಾದ್ ಅಂಗವಾಗಿ ಬುಧವಾರ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು. | Kannada Prabha

ಸಾರಾಂಶ

ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಚಾಲನೆ ನೀಡಿ ಮಾತನಾಡಿ, ಸಮಾಜಕ್ಕೆ ಒಳ್ಳೆಯ ಮಾರ್ಗದರ್ಶನ ನೀಡಿದ ಅನೇಕ ಮಹನೀಯರಲ್ಲಿ ಪೈಗಂಬರರು ಓರ್ವರಾಗಿದ್ದು, ಭಗವಂತನ ಅನುಯಾಯಿಗಳಾದ ಮುಹಮ್ಮದ್ ಪೈಗಂಬರ ಅವರು ಸಮಾಜಕ್ಕೆ ನೀಡಿದ ಮಾನವೀಯ ಮೌಲ್ಯಗಳನ್ನು ಸದಾ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರ ಜಯಂತಿ ಉತ್ಸವ ಮಾಡಿರುವುದಕ್ಕೆ ಸಾರ್ಥಕವಾಗುತ್ತದೆ ಎಂದರು.

ಲಕ್ಷ್ಮೇಶ್ವರ: ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಈದ್ ಮಿಲಾದ್ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಬುಧವಾರ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು.

ಪಟ್ಟಣದ ಭಾವೈಕ್ಯತೆಯ ಕೇಂದ್ರವಾದ ದೂದಪೀರಾಂ ದರ್ಗಾದಿಂದ ಪ್ರಾರಂಭವಾದ ಮೆರವಣಿಗೆಯು ಬಜಾರ ರಸ್ತೆ, ಬಸ್‌ನಿಲ್ದಾಣ, ಮುಖಾಂತರ ಪೈಗಂಬರರ ಗೀತೆಗಳೊಂದಿಗೆ ಘೋಷಣೆಗಳನ್ನು ಮೊಳಗಿಸುತ್ತಾ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಸಮಾಜದವರೊಂದಿಗೆ ಸಾಗಿ ದರ್ಗಾಕ್ಕೆ ಬಂದು ಸಮಾಪ್ತಿಯಾಯಿತು.

ಬುಧವಾರ ಮುಂಜಾನೆ ದರ್ಗಾ ಬಳಿ ಮೆರವಣಿಗೆಗೆ ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಚಾಲನೆ ನೀಡಿ ಮಾತನಾಡಿ, ಸಮಾಜಕ್ಕೆ ಒಳ್ಳೆಯ ಮಾರ್ಗದರ್ಶನ ನೀಡಿದ ಅನೇಕ ಮಹನೀಯರಲ್ಲಿ ಪೈಗಂಬರರು ಓರ್ವರಾಗಿದ್ದು, ಭಗವಂತನ ಅನುಯಾಯಿಗಳಾದ ಮಹ್ಮದ ಪೈಗಂಬರ ಅವರು ಸಮಾಜಕ್ಕೆ ನೀಡಿದ ಮಾನವೀಯ ಮೌಲ್ಯಗಳನ್ನು ಸದಾ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಅವರ ಜಯಂತಿ ಉತ್ಸವ ಮಾಡಿರುವುದಕ್ಕೆ ಸಾರ್ಥಕವಾಗುತ್ತದೆ ಎಂದರು.

ಡಿವೈಎಸ್‌ಪಿ ಮುರ್ತೂಜಾ ಖಾದ್ರಿ, ಸಿಪಿಐ ಬಿ.ವಿ. ನ್ಯಾಮಗೌಡ, ಪಿಎಸ್‌ಐ ನಾಗರಾಜ ಗಡದ, ಕ್ರೈಂ ಪಿಎಸ್‌ಐ ಟಿ.ಕೆ. ರಾಥೋಡ, ಪ್ರಭಾರಿ ಪಿಎಸ್‌ಐ ರಮಾಕಾಂತ ಗುಗ್ಗರಿ, ಅಂಜುಮನ್ ಕಮಿಟಿ ಅಧ್ಯಕ್ಷ ಎಂ.ಎಂ. ಗದಗ, ದೂದನಾನಾ ದರ್ಗಾ ಸಮಿತಿ ಅಧ್ಯಕ್ಷ ಸುಲೇಮಾನ ಕಣಕೆ, ಪುರಸಭೆ ಮಾಜಿ ಉಪಾಧ್ಯಕ್ಷ ದಾದಾಪೀರ ಮುಚ್ಚಾಲೆ, ಪಿರ್ದೋಶ ಆಡೂರ, ಮಾಜಿ ಸದಸ್ಯ ಎಸ್.ಕೆ. ಹವಾಲ್ದಾರ, ಮುಸ್ತಾಕ್‌ಅಹ್ಮದ್ ಶಿರಹಟ್ಟಿ, ಸಿಕಂದರ ಕಣಕೆ, ವೀರಕನ್ನಡಿಗ ಟಿಪ್ಪು ಸೇನೆ ಅಧ್ಯಕ್ಷ ಜಾಕೀರಹುಸೇನ್ ಹವಾಲ್ದಾರ, ಅಂಜುಮನ್ ಕಮಿಟಿ ಉಪಾಧ್ಯಕ್ಷ ಅಬ್ದುಲ್‌ಕರೀಂ ಸೂರಣಗಿ, ಎನ್.ಎಂ. ಗದಗ, ದಾದಾಪೀರ ತಂಬಾಕದ, ಜಮೀಲ್ ಸೂರಣಗಿ, ಪೈಮ್ ಪಲ್ಲಿ, ಅಬ್ಜಲ್ ರಿತ್ತಿ, ಸುಬಾನ ಹೊಂಬಳ, ಮಲ್ಲಿಕ ಹೆಸರೂರ, ಮುಸ್ತಾಕ್ ಬಂಕಾಪೂರ, ದಾದಾಪೀರ ಬಂಕಾಪೂರ, ನಾಲಬಂದ್, ಮುಸ್ತಾಕ್ ಗದಗ, ಬಾಬಾ ಕೊರಗಿ, ಗೂಡುಸಾಬ್ ಮತ್ತಿತರರಿದ್ದರು.

ಸಂಭ್ರಮದ ಈದ್ ಮಿಲಾದ್ ಆಚರಣೆ

ಮುಳಗುಂದ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬುಧವಾರ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ 1501ನೇ ಜಯಂತಿ ಅಂಗವಾಗಿ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜರುಗಿದ ಬೃಹತ್‌ ಮೆರವಣಿಗೆಯಲ್ಲಿ ಮುಸ್ಲಿಂ ಸಮಾಜದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಕುರಿತು ಘೋಷಣೆಗಳನ್ನು ಕೂಗಿದರು.ಮೆರವಣಿಗೆ ಮೂಲಕ ಪಟ್ಟಣದ ಎಲ್ಲ ಮಸೀದಿಗಳಿಗೆ ತೆರಳಿ ಧ್ವಜಾರೋಹಣ ನೆರವೇರಿಸಲಾಯಿತು. ಮೆರವಣಿಗೆ ಪಟ್ಟಣದ ಶಾದಿ ಮಹಲ್ ವರೆಗೆ ನಡೆಯಿತು. ನಂತರ ನಡೆದ ಕಾರ್ಯಕ್ರಮದಲ್ಲಿ ಮುಹಮ್ಮದ್ ಪೈಗಂಬರ್ ಅವರ ಕುರಿತು ಪ್ರವಚನ ನಡೆಯಿತು. ಈ ವೇಳೆ ಅಂಜುಮನ್ ಏ ಇಸ್ಲಾಂ ಕಮಿಟಿ ಪದಾಧಿಕಾರಿಗಳು ಸೇರಿದಂತೆ ಮುಸ್ಲಿಂ ಸಮಾಜದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಕಾಸ ಸೌಹಾರ್ದ ಕೋ​ ಆಪರೇಟಿವ್ ಬ್ಯಾಂಕ್ ಶೇ. 16 ಡಿವಿಡೆಂಡ್ ಘೋಷಣೆ
ವಿಜಯನಗರ ಜಿಲ್ಲೆಯಲ್ಲಿ ಸಂಭ್ರಮದಿಂದ ಈದ್‌ ಮಿಲಾದ್‌ ಆಚರಣೆ