ಎಲ್ಲರೂ ಸಂವಿಧಾನದ ಆಶಯದಂತೆ ಬಾಳೋಣ: ಡಾ.ಮೋಹನ ಭಸ್ಮೆ

KannadaprabhaNewsNetwork |  
Published : Jan 28, 2025, 12:48 AM IST
ಗೋಕಾಕದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೆ.ಎಚ್.ಪಿ.ಎಸ್. ಮೇಲ್ಮನಟ್ಟಿ ಗ್ರಾಮದ ವಿದ್ಯಾರ್ಥಿಗಳು ಮನರಂಜನೆ ಕಾರ್ಯಕ್ರಮ ನಡೆಸಿಕೊಟ್ಟರು. | Kannada Prabha

ಸಾರಾಂಶ

ಪ್ರತಿಯೊಬ್ಬರೂ ಸಂವಿಧಾನದ ಆಶಯದಂತೆ ಜೀವನ ನಡೆಸಿ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಎಂದು ತಹಸೀಲ್ದಾರ ಡಾ.ಮೋಹನ ಭಸ್ಮೆ ಹೇಳಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಪ್ರತಿಯೊಬ್ಬರೂ ಸಂವಿಧಾನದ ಆಶಯದಂತೆ ಜೀವನ ನಡೆಸಿ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಎಂದು ತಹಸೀಲ್ದಾರ ಡಾ.ಮೋಹನ ಭಸ್ಮೆ ಹೇಳಿದರು.

ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ನಗರಸಭೆ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡ 76ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂವಿಧಾನ ಮೌಲ್ಯಗಳನ್ನು ನಾವು ತಿಳಿಯಬೇಕು, ಸಂವಿಧಾನದ ಆಸೆಯಂತೆ ಜೀವನ ನಡೆಸಬೇಕು. ವಿದ್ಯಾರ್ಥಿ ಜೀವನದಲ್ಲಿ ಪರಿಸರದ ಕಾಳಜಿ ವಹಿಸಿ ಪರಿಸರ ಕಾಪಾಡಬೇಕು. ಕುಟುಂಬದ ವ್ಯವಸ್ಥೆಯ ಜತೆಗೆ ದೇಶದ ಸಾರ್ವಭೌಮತ್ವ ಎತ್ತಿ ಹಿಡಿಯಬೇಕು. ಇಂದಿನ ಆಧುನಿಕ ಯುಗದಲ್ಲಿ ತಂತ್ರಜ್ಞಾನ ತೊಡುಕು ಮೀರಿ ಬೆಳೆಯಬೇಕು. ನಾವು ಕಂಡು ಹಿಡಿದ ತಂತ್ರಜ್ಞಾನಗಳನ್ನು ನಾವು ಎಷ್ಟು ಸದುಪಯೋಗ ಪಡಿಸಿಕೊಳ್ಳುತ್ತಿದ್ದೇವೆ ಎಂದು ಯೋಚಿಸಿ ಮುಂದೆ ಸಾಗಬೇಕು ಎಂದು ಹೇಳಿದರು.

ವಿವಿಧ ಸ್ವರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಿ ಗೌರವಿಸಲಾಯಿತು.

ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಉಪಾಧ್ಯಕ್ಷೆ ಜಮಾದಾರ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶೈಲ ಯಕ್ಕುಂಡಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಗಸ್ತೆ, ಬಿಇಒ ಜಿ.ಬಿ. ಬಳಗಾರ, ಪೌರಾಯುಕ್ತ ರಮೇಶ ಜಾಧವ, ಸಿಪಿಐ ಸುರೇಶ ಬಾಬು, ಕೃಷಿ ಅಧಿಕಾರಿ ಎಂ.ಎಂ. ನಧಾಫ್, ಎಂ.ಎಚ್.ಗಜಾಕೋಶ, ಬಿ.ಆರ್. ಕೊಪ್ಪ, ಅಶೋಕ ಪೂಜಾರಿ, ಮಹಾಂತೇಶ ಕಡಾಡಿ, ನಗರಸಭೆ ಸದಸ್ಯರಾದ ಯೂಸುಫ್ ಅಂಕಲಗಿ, ಬಾಬು ಮುಳಗುಂದ, ಕರವೇ ಮುಖಂಡರಾದ ಬಸವರಾಜ ಖಾನಪ್ಪನವರ, ಕಿರಣ ಢಮಾಮಗರ, ಮುಖಂಡರಾದ ಬಸವರಾಜ ದೇಶನೂರ, ಅಬ್ದುಲವಹಾಬ್‌ ಜಮಾದಾರ, ಸೋಮಶೇಖರ ಮಗದುಮ್ಮ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ