ನಾವೆಲ್ಲರೂ ಧರ್ಮದಿಂದ ಬದುಕಬೇಕು. ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕು ತಹಸೀಲ್ದಾರ್ ಜೆ.ಬಿ. ಮಜ್ಜಗಿ ಹೇಳಿದರು.
ಹುಬ್ಬಳ್ಳಿ: ಜ. ರೇಣುಕಾಚಾರ್ಯರರ ಹಾಗೆ ನಾವೆಲ್ಲರೂ ಧರ್ಮದ ಹಾದಿಯಲ್ಲಿ ನಡೆಯಬೇಕು ಎಂದು ಗ್ರಾಮೀಣ ತಹಸೀಲ್ದಾರ್ ಜೆ.ಬಿ. ಮಜ್ಜಗಿ ಹೇಳಿದರು.
ಇಲ್ಲಿನ ತಾಲೂಕು ಆಡಳಿತಸೌಧದ ತಹಸೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ತಾಲೂಕು ಆಡಳಿತದಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ಜ. ರೇಣುಕಾಚಾರ್ಯ ಜಯಂತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಾವೆಲ್ಲರೂ ಧರ್ಮದಿಂದ ಬದುಕಬೇಕು. ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕು ಎಂದರು.
ತಿರುಮಲಕೊಪ್ಪದ ರೇಣುಕ ಧರ್ಮ ನಿವಾಸದ ದಾನಯ್ಯ ದೇವರು ಮಾತನಾಡಿ, ರೇಣುಕಾಚಾರ್ಯರ ತತ್ವಗಳು ಮತ್ತು ಆದರ್ಶಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಧರ್ಮದ ಬಗ್ಗೆ ನಾವು ಮೊದಲು ಅರಿವು ಮೂಡಿಸಿಕೊಳ್ಳಬೇಕಾಗಿದೆ ಎಂದರು.
ಕೆ.ಎಲ್.ಇ. ಸೊಸೈಟಿಯ ಸದಸ್ಯ ಶಂಕ್ರಣ್ಣ ಮುನವಳ್ಳಿ ಮಾತನಾಡಿದರು. ಡಾ. ಎಚ್.ವಿ. ಬೆಳಗಲಿ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ರೇಣುಕಾಚಾರ್ಯ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಬಳಿಕ ಸಮಾಜದ ಸಾಧಕರನ್ನು ಸನ್ಮಾನಿಸಲಾಯಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.