ಒಗ್ಗಟ್ಟಿನಿಂದ ಗಣೇಶೋತ್ಸವ ಆಚರಿಸೋಣ: ರಾಜಣ್ಣ ಮಲ್ಲಾಡದ

KannadaprabhaNewsNetwork |  
Published : Aug 25, 2026, 02:45 AM IST
ಸಭೆಯಲ್ಲಿ ರಾಜಣ್ಣ ಮಲ್ಲಾಡದ ಮಾತನಾಡಿದರು. | Kannada Prabha

ಸಾರಾಂಶ

ಗಣೇಶ ವಿಸರ್ಜನೆಯನ್ನು ರಾತ್ರಿ 11 ಗಂಟೆಯೊಳಗೆ ಪೂರ್ಣಗೊಳಿಸಬೇಕು. ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ತಪ್ಪಿಸಬೇಕು. ಮೆರವಣಿಗೆ ವೇಳೆ ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು.

ಗದಗ: ಅವಳಿ ನಗರದ ಎಲ್ಲ ಗಜಾನನ ಮಂಡಳಿಗಳು ಒಗ್ಗಟ್ಟಿನಿಂದ ಗಣೇಶೋತ್ಸವವನ್ನು ವಿಜೃಂಭಣೆ, ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು ಎಂದು ಸಾರ್ವಜನಿಕ ಶ್ರೀಗಜಾನನ ಮಹಾಮಂಡಳಿಯ ಅಧ್ಯಕ್ಷ ರಾಜಣ್ಣ ಮಲ್ಲಾಡದ ಹೇಳಿದರು.

ನಗರದ ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ಸಾರ್ವಜನಿಕ ಗಜಾನನ ಮಹಾಮಂಡಳಿಯ ವತಿಯಿಂದ ಆಯೋಜಿಸಿದ್ದ ಗಣೇಶೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಗಣೇಶ ವಿಸರ್ಜನೆಯನ್ನು ರಾತ್ರಿ 11 ಗಂಟೆಯೊಳಗೆ ಪೂರ್ಣಗೊಳಿಸಬೇಕು. ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ತಪ್ಪಿಸಬೇಕು. ಮೆರವಣಿಗೆ ವೇಳೆ ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದರು.

ಸಾರ್ವಜನಿಕ ಗಜಾನನ ಮಹಾಮಂಡಳಿಯ ವತಿಯಿಂದ 51 ಪರಿಸರಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ಸಂಘ- ಸಂಸ್ಥೆಗಳು, ಶಾಲಾ- ಕಾಲೇಜುಗಳಿಗೆ ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ. ಮಣ್ಣಿನ ಗಣೇಶ ಮೂರ್ತಿಗಳನ್ನು ಪಡೆಯಲು ಆಸಕ್ತರು ಸೆಪ್ಟೆಂಬರ್ 1ರಿಂದ 13ರೊಳಗಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಗ್ರೀನ್ ಮಾರ್ಕೆಟ್ ತರುಣ ವ್ಯಾಪಾರಸ್ಥರ ಗಜಾನನ ಮಂಡಳಿಯ ವತಿಯಿಂದ ಗಣೇಶ ವಿಸರ್ಜನಾ ದಿನದಂದು ಸಾರ್ವಜನಿಕರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿದ್ದು, ವಿಸರ್ಜನಾ ಮೆರವಣಿಗೆಗೆ ಆಗಮಿಸುವ ಎಲ್ಲರಿಗೂ ಪ್ರಸಾದ ವಿತರಿಸಲಾಗುವುದು ಎಂದು ತಿಳಿಸಲಾಯಿತು.

ಅನಿಲ ಅಬ್ಬಿಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಘವೇಂದ್ರ ಯಳವತ್ತಿ, ಕಿಶನ್ ಮೆಹರವಾಡೆ, ರಾಜು ಖಾನಪ್ಪನವರ, ಮಹಾಂತೇಶ ಪಾಟೀಲ, ವಿಜಯ ಶಿವಪ್ಪಗೌಡ್ರು, ರಾಜು ಮುಧೋಳ, ಮಂಜಣ್ಣ ಅಬ್ಬಿಗೇರಿ, ಮಂಜಣ್ಣ ಬೆಲೇರಿ, ಅಜ್ಜಣ್ಣ ಮಲ್ಲಾಡದ, ರಮೇಶ ಶಿಗ್ಲಿ, ಶಂಕರ ಮುಳುಗುಂದ, ವಾಸು ಜೋಗಿನ, ತಿಮ್ಮಣ್ಣ ಕೋನರೆಡ್ಡಿ, ಅನಿಲ ಮುಳ್ಳಾಳ, ಕಿರಣ ಹಿರೇಮಠ, ಸಚಿನ ಮಲ್ಲಾಡದ, ಆದಿತ್ಯ ಮಲ್ಲಾಡದ, ನಂದೀಶ ಮಲ್ಲಾಡದ, ಪ್ರಮೋದ್ ವಾರಕರ, ಮಾಂತೇಶ ಖಾತರಿಕಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಗಜಾನನ ಮಂಡಳಿಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿತ್ಯವೂ ಸೂರ್ಯೋಪಾಸನೆ ನಡೆಯಲಿ: ಸ್ವರ್ಣವಲ್ಲೀ ಶ್ರೀ
ಸಿದ್ಧಗೊಳ್ಳುತ್ತಿವೆ ತರಹೇವಾರಿ ಗಣೇಶನ ಮೂರ್ತಿಗಳು