ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲೆಯ ವಡಗೇರಾ ತಾಲೂಕಿನ ಕೋಡಾಲ ಗ್ರಾಮದ ಗಡ್ಡೆ ಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಪ್ರವಚನ ಮಂಗಲ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಮಠ-ಮಂದಿರಗಳು ಕೇವಲ ಆಧ್ಯಾತ್ಮಿಕ ತಾಣಗಳು ಮಾತ್ರವಲ್ಲದೆ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಶ್ರೀಮಠದ ಪಂಚಮ ಸಿದ್ಧಲಿಂಗ ಮಹಾಸ್ವಾಮಿಗಳು ಅತ್ಯಂತ ಕ್ರಿಯಾಶೀಲರಾಗಿದ್ದು ಅವರ ನೇತೃತ್ವದಲ್ಲಿ ಕೋಡಾಲ ಗ್ರಾಮದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಉಪಯುಕ್ತ ಕಾರ್ಯಕ್ರಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಹಮ್ಮಿಕೊಳ್ಳುವ ಮುಖಾಂತರ ಜನರಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.ಕೃಷ್ಣಾ ನದಿಯ ಹೃದಯ ಭಾಗದಲ್ಲಿ ಇರುವ ಗಡ್ಡೆ ಬಸವೇಶ್ವರ ದೇವಸ್ಥಾನಕ್ಕೆ ಭಕ್ತರು ತೆರಳಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ 5 ಕೋಟಿ ರು. ಗಳ ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಬದ್ಧನಾಗಿದ್ದು, ನನ್ನ ಅಧಿಕಾರವಧಿಯಲ್ಲೇ ಇದನ್ನು ಪೂರ್ಣಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಮಠದ ಪೀಠಾಧಿಪತಿ ಪಂಚಮ ಸಿದ್ಧಲಿಂಗ ಮಹಾಸ್ವಾಮಿಗಳು, ಶಿವಲಿಂಗ ಮಹಾಸ್ವಾಮಿಗಳು ಖೇಳಗಿ, ಖ್ಯಾತ ಪ್ರವನಕಾರರಾದ ಶಿವಬಸವ ದೇವರು, ಹೊಸಪೇಠ ಕಂಪಿನ ಮಠದ ಸಿದ್ಧಲಿಂಗ ಸ್ವಾಮಿಗಳು, ಆದೋನಿಯ ಗುರುಸಿದ್ಧ ಸ್ವಾಮಿಗಳು ಸೇರಿದಂತೆ ಹಿರಿಯ ಮುಖಂಡರಾದ ಸಿದ್ದಣಗೌಡ ಕಾಡಂನೋರ, ಮಂಜೂಳ ಗೂಳಿ, ಮಾಣಿಕರೆಡ್ಡಿ ಕುರಕುಂದಾ, ಶಿವರಾಜಪ್ಪಗೌಡ, ಬಸವರಾಜ ಸನ್ನದ, ಡಾ. ಸಿದ್ಧರಾಜರೆಡ್ಡಿ ಪಾಟೀಲ, ಪ್ರಕಾಶ ಎಸ್. ಅಂಗಡಿ ಕನ್ನೆಳ್ಳಿ ಸೇರಿದಂತೆ ಇತರರಿದ್ದರು. ಬಸವಲಿಂಗಪ್ಪ ಜಿ. ಕಲಾಲ ನಿರೂಪಿಸಿದರು. ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ 5 ಜನ ಸಾಧಕರನ್ನು ಗುರುತಿಸಿ ಸಿದ್ಧ ಬಸವ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಭಕ್ತರ ಭಕ್ತಿಯೇ ಶ್ರೀಮಠದ ಶಕ್ತಿಕೃಷ್ಣಾ ನದಿಯ ನಡು ಗಡ್ಡೆಯಲ್ಲಿರುವ ಗಡ್ಡೆ ಬಸವೇಶ್ವರ ದೇವಸ್ಥಾನ ಐತಿಹಾಸಿಕವಾಗಿದ್ದು, ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಸಿದ್ಧಿ ಪುರುಷ ಸಿದ್ಧಲಿಂಗ ಶ್ರೀಗಳಾಗಿದ್ದಾರೆ. ನಾವು ಕೇವಲ ನೆಪ ಮಾತ್ರ ಎಲ್ಲವೂ ಭಗವಂತನ ಇಚ್ಛೆಯಂತೆ ನಡೆಯುತ್ತದೆ. ವರ್ಷದಿಂದ ವರ್ಷಕ್ಕೆ ಶ್ರೀಮಠದ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗುತ್ತಿರುವುದು ಅತ್ಯಂತ ಸಂತೋಷದ ವಿಚಾರ. ಭಕ್ತರ ಭಕ್ತಿಯೇ ಶ್ರೀಮಠದ ಶಕ್ತಿ ಎಂದು ಪೀಠಾಧಿಪತಿ ಪಂಚಮ ಸಿದ್ಧಲಿಂಗ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.8ವೈಡಿಆರ್3