ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಪ್ರತಿಯೊಬ್ಬರೂ ಸಹಕಾರ ಸಂಘದ ಅಡಿಯಲ್ಲಿಯೇ ಬಂದರೆ ಎಲ್ಲಾ ರೀತಿಯಲ್ಲಿಯೂ ಅನುಕೂಲವಾಗುತ್ತದೆ ಎಂದ ಅವರು, ಸಹಕಾರ ಸಂಘಗಳನ್ನು ಬಲ ಪಡಿಸುವ ನಿಟ್ಟಿನಲ್ಲಿ ಸಮಾಜದ ಪ್ರತಿಯೊಬ್ಬರೂ ಮುಂದಾಗಬೇಕು. ಇದರಿಂದ ಸಮಾಜವೂ ಕೂಡ ಸಂಘಟನೆಯಾಗುತ್ತದೆ ಎಂದು ಹೇಳಿದರು.
ಸಹಕಾರ ಸಂಘಗಳ ಮೂಲಕ ಅನೇಕ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ನಮ್ಮ ಆರ್ಥಿಕ ವ್ಯವಹಾರಗಳು ಕೂಡ ಸಹಕಾರಿ ಕ್ಷೇತ್ರದಿಂದ ಅಭಿವೃದ್ಧಿಯಾಗುತ್ತದೆ. ಆರೋಗ್ಯ ಸಮಸ್ಯೆ ಬಂದಾಗ ಸಹಕಾರ ಕ್ಷೇತ್ರದ ಮುಖಾಂತರ ಆರ್ಥಿಕ ಸಹಾಯವನ್ನು ಕೂಡ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು.ಶ್ರೀ ಭಗೀರಥ ಸಹಕಾರ ಸಂಘ ಸ್ಥಾಪನೆಯಾದ ಕೆಲವೇ ವರ್ಷಗಳಲ್ಲಿ ತನ್ನ ಆರ್ಥಿಕ ಸಂಪನ್ಮೂಲವನ್ನು ವೃದ್ಧಿಸಿಕೊಳ್ಳುವ ನಿಟ್ಟಿನಲ್ಲಿ ದಾಪುಗಾಲು ಇಡುತ್ತಿದೆ. ಆ ಮೂಲಕ ಸಮಾಜದಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವವರಿಗೆ ನೆರವಿನ ಹಸ್ತವನ್ನು ಚಾಚುವ ಕಾರ್ಯವನ್ನು ಮಾಡಿಕೊಂಡು ಬರುತ್ತಿದೆ ಎಂದ ಅವರು, ಸಹಕಾರಿ ಕ್ಷೇತ್ರದ ಅಡಿಯಲ್ಲಿಯೇ ನಾವೆಲ್ಲರೂ ಬರುವುದರಿಂದ ಹೆಚ್ಚಿನ ಅನುಕೂಲವಿದೆ ಎಂದರು.
ಸಭೆಯಲ್ಲಿ ಉಪಾಧ್ಯಕ್ಷ ವಸಂತ್ ಹೋಬಳಿದಾರ್, ನಿರ್ದೇಶಕರುಗಳಾದ ಎಲ್.ಮಂಜುನಾಥ್, ಎಂ.ಜಿ.ಕೆ.ಹನುಮಂತಪ್ಪ, ಶಾಂತಮ್ಮ, ರವಿ ಎಚ್. ಚಿದಾನಂದ ಜಿ. ಎಸ್.ಪಿ.ಸುಧಾಕರ್, ಎಲ್.ಚಂದ್ರಶೇಖರ್, ವೈ.ಬಿ.ಲೋಕೇಶ್, ಯು.ಕೆ.ರಮೇಶ್, ಅರ್ಚನಾ ಮತ್ತಿತರರು ಇದ್ದರು.