ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ
ಶುಶ್ರೂಷಕಿ ಸರಸ್ವತಿ ಮಾತನಾಡಿ, ಬಹುತೇಕ ಜನರಲ್ಲಿ ರಕ್ತ ಕುರಿತಾಗಿ ವಿವರವಾದ ಮಾಹಿತಿ ಇಲ್ಲ, ಹೀಗಾಗಿ ಹಣ ಕೊಟ್ಟರೆ ಸಿಗುವಂತಹ ವಸ್ತು ಎಂಬ ಭಾವನೆ ಬಹುತೇಕ ಜನರ ಮನಸ್ಸಿನಲ್ಲಿದೆ. ಹಣ ಕೊಟ್ಟು ಪಡೆದ ರಕ್ತವು ಸಹ ಇನ್ನೊಬ್ಬರ ದೇಹದಿಂದ ಬಂದ ದೇಣಿಗೆ ಎಂಬ ಬಗ್ಗೆ ವಿವರವಾದ ಮಾಹಿತಿಗಳು ಸಾರ್ವಜನಿಕರಲ್ಲಿ ರವಾನೆಯಾಗಬೇಕಾಗಿದೆ ಎಂದರು. ಇದೇ ಸಂದರ್ಭದಲ್ಲಿ ಸಿದ್ದಗಂಗಾ ಮಠದ ಲಿಂ ಡಾ. ಶ್ರೀ ಶಿವಕುಮಾರ ಸ್ವಾಮಿಗಳ 117 ನೇ ಜನ್ಮದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಲಾಯಿತು.
ಜೆಎಸ್ಬಿ ಪ್ರತಿಷ್ಠಾನದ ಎಸ್ ಶಶಿಕುಮಾರ್. ಶ್ರೀ ಶಿವಕುಮಾರ ಸ್ವಾಮೀಜಿ ಸಂಘದ ಅಧ್ಯಕ್ಷ ಬಸವರಾಜಪ್ಪ, ಮಹೇಶ, ಮಹದೇವಸ್ವಾಮಿ, ಸೋಮಣ್ಣ, ಸತೀಶ, ನಿರಂಜನ, ಪರಶಿವಮೂರ್ತಿ, ಕುಮಾರಣ್ಣ, ಬಸವಣ್ಣ, ಗಿರಿ, ರಾಚಪ್ಪ ಹಾಗೂ ಇನ್ನಿತರರು, ಪತಂಜಲಿ ಯೋಗ ಸಮಿತಿಯ ಅಧ್ಯಕ್ಷ ಪಿ ಮಂಜುನಾಥ, ಮಾಜಿ ಸೈನಿಕ ಮಧು, ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಸಚ್ಚಿನ್, ಡಯಾನ, ತೇಜು, ರಾಜೇಶ, ಮಹೇಶ ಮತ್ತು ಸಿಬ್ಬಂದಿ, ಜೆಎಸ್ಎಸ್ ಕಾಲೇಜು ಪ್ರಾಂಶುಪಾಲ ಹೇಮೇಶಮೂರ್ತಿ, ಪ್ರಸನ್ನ, ಮಹದೇವಸ್ವಾಮಿ ಇದ್ದರು.