ಕಾರ್ಮಿಕರು ಸಾಮಾಜಿಕವಾಗಿ ಸಬಲರಾಗಲಿ: ಸಚಿವ ಸಂತೋಷ ಲಾಡ್

KannadaprabhaNewsNetwork |  
Published : Jan 26, 2025, 01:34 AM IST
ಅಳ್ನಾವರದಲ್ಲಿ ನಿರ್ಮಿಸಿದ ಪೌರ ಕಾರ್ಮಿಕರ ವಸತಿ ಗೃಹಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಸಚಿವ ಸಂತೋಷ ಲಾಡ ಮಾತನಾಡಿದರು. | Kannada Prabha

ಸಾರಾಂಶ

ವಿವಿಧ ಕಾರ್ಮಿಕ ವರ್ಗದವರಿಗಾಗಿ ಯೋಜನೆಗಳನ್ನು ರೂಪಿಸಿದ್ದು, ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಸರಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಅಳ್ನಾವರ: ದುಡಿಯುವ ವರ್ಗದವರ ಹಿತ ಕಾಪಾಡಲು ಸರಕಾರ ಬದ್ದವಾಗಿದ್ದು, ಅವರದೇ ಆಗಿರುವ ಹಕ್ಕುಗಳನ್ನು ಕಾನೂನಾತ್ಮಕವಾಗಿ ಪಡೆದುಕೊಳ್ಳುವ ಮೂಲಕ ಸಾಮಾಜಿಕವಾಗಿ ಸಬಲರಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.ಅಳ್ನಾವರ ಪಟ್ಟಣದಲ್ಲಿ ಪೌರ ಕಾರ್ಮಿಕರಿಗಾಗಿ ನಿರ್ಮಿಸಿದ ವಸತಿ ಗೃಹಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿ ಮಾತನಾಡಿದರು.

ವಿವಿಧ ಕಾರ್ಮಿಕ ವರ್ಗದವರಿಗಾಗಿ ಯೋಜನೆಗಳನ್ನು ರೂಪಿಸಿದ್ದು, ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಸರಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದರು.

ವಿವಿಧ ಇಲಾಖೆಗಳ ಪೈಕಿ ಕಾರ್ಮಿಕ ಇಲಾಖೆಯ ಅಡಿಯಲ್ಲಿ ಬರುವ ೨೫ ವರ್ಗಗಳನ್ನು ಗುರುತಿಸಿ ಸವಲತ್ತುಗಳನ್ನು ಪಡೆದುಕೊಳ್ಳಲು ಆಡಳಿತ ವ್ಯವಸ್ಥೆ ಸರಳೀಕರಣಗೊಳಿಸಲಾಗಿದೆ.

ಸಕಾಲದಲ್ಲಿ ಕಾರ್ಮಿಕರಿಗೆ ಸೇವೆ ನೀಡುವಲ್ಲಿ ರಾಜ್ಯದಲ್ಲಿಯೇ ಕಾರ್ಮಿಕ ಇಲಾಖೆ ಮೊದಲ ಸ್ಥಾನಕ್ಕೆ ತರಲು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ತಾಲೂಕಿನ ಸಮಗ್ರ ಅಭಿವೃದ್ಧಿ ದೃಷ್ಟಿಯಿಟ್ಟುಕೊಂಡು ಅಳ್ನಾವರ ತಾಲೂಕಿನ ಆಡಳಿತ ಸೌಧವನ್ನು ಎಂಟೂವರೆ ಕೋಟಿ ವೆಚ್ಚದಲ್ಲಿ ನಿರ್ಮಾಣದ ಕಾರ್ಯ ಪ್ರಾರಂಭಿಸಲಾಗುವುದು. ಆಸ್ಪತ್ರೆಯನ್ನು ಮೇಲ್ದರ್ಜೇಗೇರಿಸುವುದು, ತಾಲೂಕು ಕ್ರೀಡಾಂಗಣ ಅಭಿವೃದ್ಧಿ, ಇನ್ನೀತರ ಅನೇಕ ಕೆಲಸಗಳನ್ನು ಹಂತ ಹಂತವಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದ್ದು, ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಜನರ ಬದುಕನ್ನು ರೂಪಿಸಲು ಸಹಕಾರಿಯಾಗಿವೆ ಎಂದರು.

ಸಾರ್ವಜನಿಕರು ಅರಣ್ಯ ಇಲಾಖೆಯ ಕೆಲಸಕ್ಕಾಗಿ ಹಳಿಯಾಳ-ಧಾರವಾಡಕ್ಕೆ ಅಲೆಯುವುದನ್ನು ತಪ್ಪಿಸಲು ಅಳ್ನಾವರ ತಾಲೂಕಿಗೆ ಪ್ರತ್ಯೇಕವಾದ ಅರಣ್ಯ ವಲಯ ಅಧಿಕಾರಿಯನ್ನು ನಿಯೋಜಿಸಲು ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಲಾಗಿದ್ದು, ಶೀಘ್ರದಲ್ಲಿ ವಲಯ ಕಚೇರಿ ಪ್ರಾರಂಭಗೊಳ್ಳಲಿದೆ. ಇದರಿಂದ ಸ್ಥಳೀಯ ಕಟ್ಟಿಗೆ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಕಾರ್ಮಿಕ ಸಚಿವರು ಹೇಳಿದರು.

ಸಮಾರಂಭದಲ್ಲಿ ಪಪಂ ಅಧ್ಯಕ್ಷ ಮಧು ಬಡಸ್ಕರ, ಉಪಾಧ್ಯಕ್ಷ ಅಮೋಲ ಗುಂಜೀಕರ, ಸ್ಥಾಯಿ ಸಮೀತಿ ಅಧ್ಯಕ್ಷ ಜೈಲಾನಿ ಸುದರ್ಜಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ವಿನಾಯಕ ಕುರುಬರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶಗೌಡ ಕರಿಗೌಡರ, ತಹಸೀಲ್ದಾರ್‌ ಬಸವರಾಜ ಬೆಣ್ಣೆಶಿರೂರ, ತಾಪಂ ಇಒ ಪ್ರಶಾಂತ ತುರಕಾಣಿ, ನಗರಯೋಜನಾ ನಿರ್ದೆಶಕ ಅಜೀಜ್ ದೇಸಾಯಿ ಹಾಗೂ ಪಪಂ ಸದಸ್ಯರು ಮತ್ತಿತರರು ಇದ್ದರು

ಮಹಾಂತೇಶ ಬೆಂತೂರ ಸ್ವಾಗತಿಸಿದರು. ನಾಗರಾಜ ಗುರ್ಲಹೊಸೂರ ವಂದಿಸಿದರು, ನಂತರ ಸಚಿವರು ಪೌರ ಕಾರ್ಮಿಕರಿಗೆ ಹಕ್ಕುಪತ್ರ ವಿತರಿಸಿ ಇಲಾಖೆಯಿಂದ ದೊರೆಯುವ ಯೋಜನೆಗಳನ್ನು ಒದಗಿಸುವ ಭರವಸೆ ನೀಡಿದರು.

ಭೂಮಿಪೂಜೆ

ತಾಲೂಕಿನ ಅರವಟಗಿ ಗ್ರಾಮದಲ್ಲಿ ನಿರ್ಮಿಸಲಾಗುವ ಪಶು ಚಿಕಿತ್ಸಾ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆಯನ್ನು ಕಾರ್ಮಿಕ ಸಚಿವ ಸಂತೋಷ ಲಾಡ್‌ ನೇರವೇರಿಸಿದರು. ಗ್ರಾಪಂ ಅಧ್ಯಕ್ಷ ಅಶೊಕ ಜೋಡಟ್ಟಿ, ಮಲ್ಲಪ್ಪ ಗಾಣಿಗೇರ, ಉಮೇಶ ಬೂಮಣ್ಣವರ ಪಶು ಸಂಗೋಪನೆ ಇಲಾಖೆಯ ಡಾ. ಸುನೀಲ ಬನ್ನಿಗೋಳ, ಡಾ. ಪೋಳ ಇದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ