ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದಾವಣಗೆರೆಯಲ್ಲಿ ನಡೆದ ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಅಧಿವೇಶನದಲ್ಲಿ ಕೈಗೊಂಡಿರುವ ಹೊಸದಾಗಿ ಜಾತಿಗಣತಿ ಮಾಡಬೇಕು ಮತ್ತು ಜಾತಿಗಣತಿ ಸಂದರ್ಭದಲ್ಲಿ ಧರ್ಮದ ಕಾಲಂನಲ್ಲಿ ವೀರಶೈವ- ಲಿಂಗಾಯಿತ ಧರ್ಮವೆಂದೂ ಮತ್ತು ಜಾತಿ ಕಾಲಂನಲ್ಲಿ ಒಳಪಂಡಗಳನ್ನು ಬರೆಸಬೇಕೆಂಬ ಮಹತ್ವದ ನಿರ್ಣಯಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವೀರಶೈವ - ಲಿಂಗಾಯಿತ ಸಮಾಜದ ಬಿಜೆಪಿ ನಾಯಕರು ತಮ್ಮ ಬದ್ಧತೆ ಏನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ಬಿಎಸ್ವೈ ಸ್ಪಷ್ಟಪಡಿಸಬೇಕು:ವೀರಶೈವ- ಲಿಂಗಾಯಿತ ಪ್ರತ್ಯೇಕ ಧರ್ಮ ಎಂಬ 30 ವರ್ಷಗಳ ಹಳೆಯ ಬೇಡಿಕೆಯನ್ನು ಅಖಿಲಭಾರತ ವೀರಶೈವ-ಲಿಂಗಾಯಿತ ಅಧಿವೇಶನದಲ್ಲಿ ಮಂಡಿಸಿ ಜಾತಿಗಣತಿ ಸಂದರ್ಭದಲ್ಲಿ ಧರ್ಮದ ಕಾಲಂ ’ವೀರಶೈವ-ಲಿಂಗಾಯಿತ’ ಎಂದು ಮತ್ತು ಜಾತಿ ಕಾಲಂನಲ್ಲಿ ಒಳಪಂಗಡಗಳನ್ನು ಬರೆಯಿಸಲು ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಣಯದ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪಾತ್ರವೂ ಇದ್ದರೂ ಯಡಿಯೂರಪ್ಪ ಅವರು ತಮ್ಮ ಭಾಷಣದಲ್ಲಿ ಈ ನಿರ್ಣಯಕ್ಕೆ ಬದ್ಧರಾಗಿರುವುದಾಗಿ ಗಟ್ಟಿಯಾಗಿ ಹೇಳಿಲ್ಲ. ಯಡಿಯೂರಪ್ಪ ಅವರ ಪುತ್ರರಾದ ವಿಜಯೇಂದ್ರ, ರಾಘವೇಂದ್ರ ಸೇರಿದಂತೆ ವೀರಶೈವ-ಲಿಂಗಾಯಿತ ಸಮಾಜಕ್ಕೆ ಸೇರಿದ ಬಿಜೆಪಿ ನಾಯಕರು ಧರ್ಮದ ಕಾಲಂನಲ್ಲಿ ವೀರಶೈವ-ಲಿಂಗಾಯಿತ ಎಂದು ಬರೆಸುತ್ತೀರೋ, ಹಿಂದೂ ಎಂದು ಬರೆಸುತ್ತಿರೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಹೇಳಿದರು.
ಯಡಿಯೂರಪ್ಪನವರು ಜನಗಣತಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ, ಪಕ್ಷದೊಳಗೆ ಜನಗಣತಿಗೆ ವಿರೋಧವಿದೆ. ಮೋದಿ ಅವರಲ್ಲಿ ಜನಗಣತಿಗೆ ಒಲವಿಲ್ಲ, ನೀವು ಒಲವು ವ್ಯಕ್ತಪಡಿಸುತ್ತಿದ್ದೀರಾ, ಸಮಾಜದ ಸಮಾವೇಶದಲ್ಲಿ ಬಂದು ವೀರಶೈವ ಲಿಂಗಾಯಿತ ಎಂದು ಹೇಳುತ್ತೀರಾ, ಬಿಜೆಪಿಯ ವೇದಿಕೆಗಳಲ್ಲಿ ಹಿಂದೂ ಎಂದು ಬರೆಯಿಸಿ ಎನ್ನುತ್ತೀರಾ, ನೀವು ಗೊಂದಲದಲ್ಲಿದ್ದೀರೋ ಅಥವಾ ಸಮಾಜವನ್ನು ಗೊಂದಲಕ್ಕೀಡು ಮಾಡಲು ಹೊರಟಿದ್ದೀರೋ? ಇಡೀ ಸಮಾಜ ದೊಡ್ಡ ಸಂಖ್ಯೆಯಲ್ಲಿ ಸೇರಿ ಸ್ವಾಮೀಜಿಗಳ ಸಮ್ಮುಖದಲ್ಲಿ ಕೈಗೊಂಡ ಈ ನಿರ್ಣಯಕ್ಕೆ ತಾವು ಬದ್ಧರಾಗಿ ನಡೆದುಕೊಳ್ಳುತ್ತೀರೊ ಎಂದು ಪ್ರಶ್ನಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಧೀರರಾಜ್ ಹೊನ್ನವಿಲೆ, ವೈ.ಎಚ್. ನಾಗರಾಜ್, ಹಿರಣಯ್ಯ, ವಾಹಿದ್ ಅಡ್ಡು ಮತ್ತಿತರರು ಇದ್ದರು.
- - - -25ಎಸ್ಎಂಜಿಕೆಪಿ03: ಆಯನೂರು ಮಂಜುನಾಥ್