ಕನ್ನಡಪ್ರಭ ವಾರ್ತೆ ಭಾರತೀನಗರ
ತಮ್ಮ ನಿವಾಸದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮದ್ದೂರು ಕ್ಷೇತ್ರದ ಅಕ್ಕ- ಪಕ್ಕದ ಗ್ರಾಮಗಳು ಚನ್ನಪಟ್ಟಣದ ಕ್ಷೇತ್ರಕ್ಕೆ ಸೇರಿವೆ. ಹಾಗಾಗಿ ಅಂತಹ ಗ್ರಾಮಗಳಿಗೆ ತೆರಳಿ ಎನ್ಡಿಎ ಅಭ್ಯರ್ಥಿ ನಿಖಿಲ್ಕುಮಾರಸ್ವಾಮಿ ಪರ ಮತಯಾಚನೆ ಮಾಡಬೇಕೆಂದು ಮನವಿ ಮಾಡಿದರು.
ಮದ್ದೂರು ಕ್ಷೇತ್ರದಿಂದ ಚನ್ನಪಟ್ಟಣ ಕ್ಷೇತ್ರಕ್ಕೆ ಬಹಳಷ್ಟು ಸಂಬಂಧಗಳು ಬೆಸುಗೆಗೊಂಡಿವೆ. ಹಾಗಾಗಿ ಸಂಬಂಧಿಕರು, ಸ್ನೇಹಿತರ ಮನೆಗಳಿಗೆ ತೆರಳಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯಕ್ಕೆ ಕೊಟ್ಟಿರುವಂತಹ ಕೊಡುಗೆಗಳು ಮತ್ತು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ತಿಳಿಸಿಕೊಟ್ಟು ನಿಖಿಲ್ ಗೆಲುವಿಗೆ ಶ್ರಮಿಸಬೇಕೆಂದು ಕೋರಿದರು.ಈಗಿನಿಂದಲೇ ಚುನಾವಣಾ ಪ್ರಚಾರ ಮಾಡೋಣ. ಚನ್ನಪಟ್ಟಣ ಕ್ಷೇತ್ರದಲ್ಲೇ ನಾನಿರುತ್ತೇನೆ. ಕಾರ್ಯಕರ್ತರು ನನ್ನನ್ನು ಭೇಟಿ ಮಾಡಿದರೆ ನಿಮ್ಮ ಪರಿಚಿತರನ್ನು ಸಂಪರ್ಕಿಸಬಹುದು. ನನ್ನ ಚುನಾವಣೆಯಲ್ಲಿ ಶ್ರಮಿಸಿದ ಹಾಗೆ ಚನ್ನಪಟ್ಟಣ ಚುನಾವಣೆಯಲ್ಲೂ ನಮ್ಮ ಕ್ಷೇತ್ರದ ಕಾರ್ಯಕರ್ತರು ಮತ ಬೇಟೆಗೆ ಮುಂದಾಗಬೇಕು. ಆಗ ಮಾತ್ರ ಎನ್ಡಿಎ ಅಭ್ಯಥಿ ನಿಖಿಲ್ ಗೆಲ್ಲಿಸಲು ಸಾಧ್ಯ ಎಂದರು.
ಜೆಡಿಎಸ್ ಮುಖಂಡ ಸಂತೋಷ್ ತಮ್ಮಣ್ಣ ಮಾತನಾಡಿದರು.