ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯ ಆಗಲಿ: ಜಿಪಂ ಸಿಇಒ ರಾಹುಲ್

KannadaprabhaNewsNetwork |  
Published : Jan 18, 2025, 12:46 AM IST
17ಕೆಪಿಎಲ್4:ಕೊಪ್ಪಳ ನಗರದ ಜಿಲ್ಲಾ ಪಂಚಾಯತ ಸಮಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜತೆ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಪೂರ್ವಭಾವಿ ಸಭೆ ಜರುಗಿತು.  | Kannada Prabha

ಸಾರಾಂಶ

ಮತದಾರರಲ್ಲಿ ಅರಿವು ಮೂಡಿಸುವ ಕೆಲಸ ಇನ್ನೂ ಹೆಚ್ಚಿನ ರೀತಿಯಲ್ಲಿ ಆಗಬೇಕಿದೆ.

ರಾಷ್ಟ್ರೀಯ ಮತದಾರರ ದಿನಾಚರಣೆ ಪೂರ್ವಭಾವಿ ಸಭೆಕನ್ನಡಪ್ರಭ ವಾರ್ತೆ ಕೊಪ್ಪಳ

ಮತದಾರರಲ್ಲಿ ಅರಿವು ಮೂಡಿಸುವ ಕೆಲಸ ಇನ್ನೂ ಹೆಚ್ಚಿನ ರೀತಿಯಲ್ಲಿ ಆಗಬೇಕಿದೆ ಎಂದು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ ಹೇಳಿದರು.

ಶುಕ್ರವಾರ ನಗರದ ಜಿಪಂ ಸಮಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾರರ ಜಾಗೃತಿ ಕುರಿತು ಇನ್ನೂ ಹೆಚ್ಚಿನ ರೀತಿಯಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕಿದೆ. ಹಾಗಾಗಿ ಪ್ರತಿ ವರ್ಷ ಜ. 25ರಂದು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತದೆ. ಅಂದು ಬೆಳಗ್ಗೆ 10 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ಆಯೋಜನೆ ಮಾಡಬೇಕು. ಅಂದು ಬೆಳಗ್ಗೆ 9 ಗಂಟೆಗೆ ಕೊಪ್ಪಳ ನಗರದ ತಾಲೂಕು ಕ್ರೀಡಾಂಗಣದಲ್ಲಿ ಮತದಾರರ ಜಾಗೃತಿ ಕುರಿತು ಬೃಹತ್ ಮಾನವ ಸರಪಳಿ ನಿರ್ಮಿಸಬೇಕು. ಮತದಾರರ ಜಾಗೃತಿ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿಎಲ್‌ಒ ಹಾಗೂ ಸೂಪರ್‌ವೈಸರ್ ಮತ್ತು ಇ.ಎಲ್.ಸಿ ಸಂಯೋಜಕರು ಸೇರಿದಂತೆ ಇತರರಿಗೆ ಸನ್ಮಾನಿಸಬೇಕು. ಶೇ. 100 ಪ್ರತಿಶತ ಮತದಾನವಾದ ಜಿಲ್ಲೆಯ ಯಾವುದಾದರೂ ತಾಂಡಾ ಹಾಗೂ ಗ್ರಾಮಗಳಿದ್ದರೆ ಅವುಗಳನ್ನು ಗುರುತಿಸಿ ಎಂದು ಹೇಳಿದರು.

ಈ ವರ್ಷ ಮತದಾನಕ್ಕಿಂತ ಇನ್ನೊಂದಿಲ್ಲ. ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ವಿಶೇಷ ಧ್ಯೇಯವಾಕ್ಯದೊಂದಿಗೆ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಆಚರಿಸುವ ಸಂಬಂಧ ಭಾರತ ಚುನಾವಣಾ ಆಯೋಗ ನಿರ್ದೇಶನ ನೀಡಿದ್ದು, ಈ ಸಂಬಂಧ ಜಿಲ್ಲಾ, ತಾಲೂಕು ಮತ್ತು ಮತಗಟ್ಟೆಗಳ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕೆಂದು ಹೇಳಿದರು.

ವಿವಿಧ ಶೈಕ್ಷಣಿಕ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ಎನ್.ಸಿ.ಸಿ., ಎನ್.ಎಸ್.ಎಸ್. ಮತ್ತು ಸ್ಕೌಟ್ ಗೈಡ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು. ಈ ಕುರಿತು ಕ್ಷೇತ್ರ ಕಾರ್ಯಕ್ರಮ ಹಾಗೂ ಪರಸ್ಪರ ಸಂವಹನದ ಮೂಲಕ ವ್ಯಾಪಕ ಪ್ರಚಾರ ಹಮ್ಮಿಕೊಳ್ಳಬೇಕು. ವಿಶೇಷವಾಗಿ ಹೆಚ್ಚಿನ ಜನರು ಸೇರುವ ಜನ ಸಂದಣಿಯಂತಹ ಸ್ಥಳಗಳಲ್ಲಿ ಹೆಚ್ಚಿನ ಪ್ರಚಾರ ಆಗಬೇಕು ಮತ್ತು ಹೊಸದಾಗಿ ನೊಂದಣಿಯಾದ ಯುವ ಮತದಾರರಿಗೆ ಕಾರ್ಯಕ್ರಮದಲ್ಲಿ ಮತದಾರರ ಗುರುತಿನ ಚೀಟಿ ವಿತರಿಸಬೇಕು. ಮತದಾರರ ಜಾಗೃತಿ ಕುರಿತ ಪ್ರತಿಜ್ಞಾ ವಿಧಿ ಭೋದಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಪಂ ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಬಿರಾದರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಕೊಪ್ಪಳ ತಹಸೀಲ್ದಾರ ವಿಠ್ಠಲ್ ಚೌಗಲಾ, ಕೊಪ್ಪಳ ತಾಪಂ ಇಒ ದುಂಡಪ್ಪ ತುರಾದಿ ಹಾಗೂ ಸ್ನಾತಕೋತ್ತರ, ವೈದ್ಯಕೀಯ, ತಾಂತ್ರಿಕ, ಡಿಪ್ಲೊಮಾ ವಿಭಾಗ ಹಾಗೂ ಪದವಿಪೂರ್ವ ಮತ್ತು ಪದವಿ ಹಂತದ ಇ.ಎಲ್.ಸಿ ಕೋಆರ್ಡಿನೇಟರ್‌ಗಳು ಇದ್ದರು.

PREV

Recommended Stories

ನೀಲಿ ಮೊಟ್ಟೆ ಇಟ್ಟ ಚನ್ನಗಿರಿಯ ನಾಟಿ ಕೋಳಿ: ಸ್ಥಳೀಯರಲ್ಲಿ ತೀವ್ರ ಕುತೂಹಲ
ಸಿಗಂದೂರಿನಲ್ಲಿ ವಾಟರ್ ಏರೋಡ್ರೋಮ್: ವಿಮಾನ ಟೇಕಾಫ್‌, ಲ್ಯಾಂಡಿಂಗ್‌! ಪ್ರವಾಸೋದ್ಯಮಕ್ಕೆ ಹೊಸ ಹೆಜ್ಜೆ?