ವಿದ್ಯಾರ್ಥಿಗಳಲ್ಲಿ ಸಮಾಜಮುಖಿ ಚಿಂತನೆ ಬೆಳೆಯಲಿ: ಭೀಮಣ್ಣ ನಾಯ್ಕ

KannadaprabhaNewsNetwork |  
Published : Jul 27, 2026, 02:45 AM IST
ಸಿದ್ದಾಪುರ ತಾಲೂಕಿನ ನಾಣಿಕಟ್ಟಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ ಕಾರ್ಯಕ್ರಮದಲ್ಲಿ ಪ್ರಮಾಣವಚನ ಬೋಧಿಸಲಾಯಿತು. | Kannada Prabha

ಸಾರಾಂಶ

ತಾಲೂಕಿನ ನಾಣಿಕಟ್ಟಾದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಸತ್ ಕಾರ್ಯಕ್ರಮವನ್ನು ಶಾಸಕ ಭೀಮಣ್ಣ ಟಿ. ನಾಯ್ಕ ಉದ್ಘಾಟಿಸಿದರು.

ನಾಣಿಕಟ್ಟಾದಲ್ಲಿ ವಿದ್ಯಾರ್ಥಿ ಸಂಸತ್‌ ಉದ್ಘಾಟಿಸಿದ ಶಾಸಕ

ಕನ್ನಡಪ್ರಭ ವಾರ್ತೆ ಸಿದ್ದಾಪುರ

ತಾಲೂಕಿನ ನಾಣಿಕಟ್ಟಾದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಸತ್ ಕಾರ್ಯಕ್ರಮವನ್ನು ಶಾಸಕ ಭೀಮಣ್ಣ ಟಿ. ನಾಯ್ಕ ಉದ್ಘಾಟಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವ ಗುಣ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸಂಸತ್ ಉತ್ತಮ ವೇದಿಕೆಯಾಗಿದೆ. ಶಿಕ್ಷಣದ ಜತೆಗೆ ಸಮಾಜಮುಖಿ ಚಿಂತನೆ ಮತ್ತು ಜವಾಬ್ದಾರಿಯುತ ಪ್ರಜೆಯಾಗುವ ನಿಟ್ಟಿನಲ್ಲಿ ಯುವಜನತೆ ಮುನ್ನಡೆಯಬೇಕು ಎಂದರು.

ಕಾಲೇಜಿನ ಪ್ರಾಚಾರ್ಯ ಎಂ.ಕೆ. ನಾಯ್ಕ ಹೊಸಳ್ಳಿ ಅಧ್ಯಕ್ಷತೆವಹಿಸಿ ಮಾತನಾಡಿ, ಚುನಾವಣೆಯ ಮೂಲಕ ಪ್ರತಿನಿಧಿಗಳ ಆಯ್ಕೆಗೆ ಅವಕಾಶ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಮತದಾನ ಪ್ರಕ್ರಿಯೆಯ ಅನುಭವ ಸಿಕ್ಕಿತು. ವಿದ್ಯಾರ್ಥಿ ಸಂಸತ್ ಅಡಿಯಲ್ಲಿ ಸಾಂಸ್ಕೃತಿಕ, ಕ್ರೀಡಾ ಹಾಗೂ ಮತದಾರರ ಸಾಕ್ಷರತಾ ಕ್ಲಬ್‌ನ ಕಾರ್ಯಚಟುವಟಿಕೆ ನಡೆಯುತ್ತವೆ ಎಂದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮಹೇಶ ಹೆಗಡೆ ತ್ಯಾಗಲಿ, ವಿದ್ಯಾರ್ಥಿ ಪ್ರತಿನಿಧಿಗಳ ನಾಮಫಲಕ ಅನಾವರಣಗೊಳಿಸಿ ಶುಭಕೋರಿದರು. ಹೋಟೆಲ್ ಉದ್ಯಮಿ ರತ್ನಾಕರ ಹೆಗಡೆ ಕಲಗದ್ದೆ ಅವರು ವಿದ್ಯಾರ್ಥಿಗಳ ಗೋಡೆ ಪತ್ರಿಕೆ ಅರಳು ಬಿಡುಗಡೆ ಮಾಡಿ, ತಾವು ಈ ಹಿಂದೆ ವಾಗ್ದಾನ ಮಾಡಿದಂತೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿದ ಕಾಲೇಜಿನ ಪ್ರತಿಭಾವಂತ 15 ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರದಂತೆ ನಗದು ಪ್ರೋತ್ಸಾಹಧನ ವಿತರಿಸಿದರು. ವಿದ್ಯಾರ್ಥಿ ಪ್ರತಿನಿಧಿ ಪದ್ಮನಾಭ ಚೆನ್ನಯ್ಯ ಸೇರಿದಂತೆ 12 ತರಗತಿ ಪ್ರತಿನಿಧಿಗಳು ವಿವಿಧ ಖಾತೆಗಳ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಶಾಸ್ತ್ರ ಉಪನ್ಯಾಸಕಿ ತನುಜಾ ನಾಯ್ಕ ಪ್ರಮಾಣವಚನ ಬೋಧಿಸಿದರು. ಪದ್ಮನಾಭ ಚೆನ್ನಯ್ಯ ಅನಿಸಿಕೆ ಹಂಚಿಕೊಂಡರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಎಂ.ಆರ್. ನಾಯ್ಕ , ಆರ್.ಎಂ. ಹೆಗಡೆ, ಲಕ್ಷ್ಮೀನಾರಾಯಣ ಹೆಗಡೆ, ಸತೀಶ ನಾಯ್ಕ, ಬಾಲಚಂದ್ರ ಹೆಗಡೆ, ಬಾಬು ಆದಿದ್ರಾವಿಡ, ಉಮೇಶ ನಾಯ್ಕ ಉಪಸ್ಥಿತರಿದ್ದರು.

ಮಾನಸ ಮತ್ತು ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು. ಎಂ.ಜಿ. ಹೆಗಡೆ ಸ್ವಾಗತಿಸಿದರು. ಎಂ.ಎಂ. ಭಟ್ಟ ವಂದಿಸಿದರು. ಎಂ.ಐ. ಹೆಗಡೆ ಮತ್ತು ಎಸ್.ಎಚ್. ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲು ಯೋಜನೆ, ಸೇವೆಗಳ ಅನುಷ್ಠಾನಕ್ಕೆ ಒತ್ತಾಯ
೮೦ನೇ ಸ್ವಾತಂತ್ರೋತ್ಸವದ ಅರ್ಥಪೂರ್ಣ ಆಚರಣೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್.