ಕೃಷ್ಣನ ಉಪದೇಶ, ಆದರ್ಶ ಮೈಗೂಡಿಸಿಕೊಳ್ಳೋಣ: ಸೋಮು ಹೊಂಗಲ

KannadaprabhaNewsNetwork |  
Published : Aug 27, 2024, 01:38 AM IST
(26ಎನ್.ಆರ್.ಡಿ1 ಶ್ರೀ  ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮಕ್ಕಳು ಕೃಷ್ಣ ಮತ್ತು ರಾಧೆವೇಶದಲ್ಲಿ ನೃತ್ಯ ಮಾಡುತ್ತಿದ್ದಾರೆ.) | Kannada Prabha

ಸಾರಾಂಶ

ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ ಎಂದು ಸೋಮು ಹೊಂಗಲ ಹೇಳಿದರು.

ನರಗುಂದ: ತಾಲೂಕಿನ ಚಿಕ್ಕ ನರಗುಂದ ಗ್ರಾಮದ ಶ್ರೀ ಸಿದ್ಧಿ ವಿನಾಯಕ ಶಿಕ್ಷಣ ಸಂಸ್ಥೆ (ರಿ) ವಿಶ್ವ ಚೇತನ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಕೃಷ್ಣ ಮತ್ತು ರಾಧೆ ವೇಷಧಾರಿಗಳಾಗಿ ವಿಶೇಷ ರೀತಿಯಲ್ಲಿ ಹಬ್ಬ ಆಚರಿಸಿದರು.

ಸಂಸ್ಥೆಯ ಅಧ್ಯಕ್ಷ ಸೋಮು ಹೊಂಗಲ ಮಾತನಾಡಿ, ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖ ಹಬ್ಬವಾಗಿದೆ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶತ ಶತಮಾನಗಳಿಂದ ಕೃಷ್ಣ ಜನ್ಮಾಷ್ಟಮಿಯನ್ನು ನಮ್ಮ ಪೂರ್ವಜರು ನಮಗೆ ಬಳವಳಿಯಾಗಿ ನೀಡಿದ್ದಾರೆ. ಕೃಷ್ಣನ ಉಪದೇಶ, ಆದರ್ಶ, ಶಿಷ್ಟರ ರಕ್ಷಣೆ, ದುಷ್ಟರ ಸಂಹಾರ ನಮ್ಮ ಜೀವನದಲ್ಲಿ ನಮ್ಮ ಸಮಾಜದಲ್ಲಿ ವಿದ್ಯಾರ್ಥಿ ಜೀವನದಲ್ಲಿದ್ದಾಗಲೇ ಅಳವಡಿಸಿಕೊಂಡು ನಡೆದಲ್ಲಿ ಮಾತ್ರ ಯಶಸ್ಸನ್ನು ಕಾಣಬಹುದು. ಕೃಷ್ಣನ ಆದರ್ಶವನ್ನು ಮೈಗೂಡಿಸಿಕೊಂಡಾಗ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.ವೀಣಾ ರಾಯರೆಡ್ಡಿ ಮಾತನಾಡಿ, ಕೃಷ್ಣನ ಆದರ್ಶಪ್ರಾಯ ನಡೆ-ನುಡಿಗಳನ್ನು ನಿಮ್ಮ ಜೀವನದಲ್ಲಿ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಹೇಳಿದರು

ಶಾಲಾ ಮುಖ್ಯೋಪಾಧ್ಯಾಯ ದಯಾನಂದ್ ಪುತ್ಲೇಕರ ಮಾತನಾಡಿ, ಕೃಷ್ಣ ಮತ್ತು ರಾಧೆ ವೇಷದಲ್ಲಿ ಮಕ್ಕಳನ್ನು ತಯಾರು ಮಾಡಿದ್ದ ಎಲ್ಲ ತಂದೆ-ತಾಯಿ, ಪೋಷಕರಿಗೆ ಧನ್ಯವಾದ ತಿಳಿಸಿದರು.

ಮಕ್ಕಳು ಈಗಿನಿಂದಲೇ ಇಂತಹ ಒಳ್ಳೆಯ ಆಚರಣೆಗಳಲ್ಲಿ ಪಾಲ್ಗೊಂಡಾಗ ಮಾತ್ರ ರಾಷ್ಟ್ರೀಯತೆ, ಧರ್ಮ, ಕುಟುಂಬ, ಹಿರಿಯ-ಕಿರಿಯರ ಕುರಿತು ಗೌರವ ಬೆಳೆಸಿಕೊಳ್ಳಲು ಸಾಧ್ಯ.

ಈ ಸಂದರ್ಭದಲ್ಲಿ ಮಹಾಲಕ್ಷ್ಮೀ ಗವಿ, ಶ್ರೀದೇವಿ ಹೊಂಗಲ, ಪ್ರೇಮಾ ಪತ್ತಾರ, ಶ್ವೇತಾ ವಾಸನ, ರೇಖಾ ಭೂಮಣ್ಣವರ, ತುಳಸಾ ಮೇಟಿ, ರಕ್ಷಿತಾ, ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಗಮನ ಸೆಳೆದ ಮುದ್ದು ಮಕ್ಕಳ ಶ್ರೀಕೃಷ್ಣ ಜನ್ಮಾಷ್ಟಮಿ ವೇಷಭೂಷಣ

ಡಂಬಳ: ಸ್ಥಳೀಯ ತೋಂಟದಾರ್ಯ ಬಸವೇಶ್ವರ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಮುದ್ದು ಮಕ್ಕಳ ಶ್ರೀಕೃಷ್ಣ ರುಕ್ಮಿಣಿ ರಾಧೆಯರ ವೇಷಭೂಷಣ ನೆರೆದಿದ್ದವರ ಗಮನ ಸೆಳೆಯಿತು. ಶಾಲೆಯ ಹಲವಾರು ಮಕ್ಕಳು ಕೃಷ್ಣ, ರಾಧೆ ಮತ್ತು ರುಕ್ಮಿಣಿ ವೇಷ ಧರಿಸಿ ಕೃಷ್ಣನ ರೂಪಕ ಪ್ರದರ್ಶಿಸಿದರು.ಈ ಸಮಯದಲ್ಲಿ ಮಾತನಾಡಿದ ಶಾಲೆಯ ಮುಖ್ಯಶಿಕ್ಷಕಿ ಜ್ಯೋತಿ ಶಿರೂರ ಶಾಲೆಯಲ್ಲಿ ರಾಷ್ಟ್ರೀಯ ಹಬ್ಬಗಳ ಸಹಿತ ಎಲ್ಲ ಹಬ್ಬಗಳನ್ನೂ ವಿಶೇಷವಾಗಿ ಆಚರಿಸಲಾಗುತ್ತದೆ. ಇದಕ್ಕೆ ಗ್ರಾಮಸ್ಥರು, ಸಂಸ್ಥೆಯ ಆಡಳಿತ ಮಂಡಳಿ, ವಿದ್ಯಾರ್ಥಿಗಳು ಪಾಲಕರ ಸಹಕಾರವಿದೆ. ಕೃಷ್ಣ ಧರ್ಮದ ಪ್ರತೀಕ. ಅಧರ್ಮ ಹೆಚ್ಚಾದ ಕಡೆ ಕೃಷ್ಣ ಅವತರಿಸಿ ಧರ್ಮ ಮರು ಸ್ಥಾಪಿಸುತ್ತಾನೆ. ಕೃಷ್ಣನ ನೆನೆದರೆ ಎಲ್ಲ ಕಷ್ಟಗಳು ಪರಿಹಾರಗೊಳ್ಳುತ್ತವೆ ಎನ್ನುವ ನಂಬಿಕೆ ವಿಶ್ವಾಸವಿದೆ ಎಂದರು.

ಡಂಬಳ ಕೇಂದ್ರಸ್ಥಾನ ಸೇರಿದಂತೆ ಹೋಬಳಿ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಶ್ರೀಕೃಷ್ಣನ ಜನ್ಮಾಷ್ಟಮಿಯನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಯಿತು.

ಈ ಸಮಯದಲ್ಲಿ ಶಿಕ್ಷಕಿಯರಾದ ಅನುರಾಧ ರಾಮೇನಹಳ್ಳಿ, ಶಶಿಕಲಾ ಚಟ್ಟೇರ, ಗೌರಮ್ಮ ಕೊತಂಬರಿ, ಜಯಶ್ರೀ ಪತ್ತಾರ, ವರ್ಷಣಿ ಕಂಪ್ಲಿ, ಗೀತಾ ಕೋಲಾರ, ಸಿದ್ದಮ್ಮ ಬಾವಿ ಸೇರಿದಂತೆ ಶಾಲೆಯ ಸಿಬ್ಬಂದಿ ವರ್ಗ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''