ಮಿಡಲ್‌ ಪಕ್ಕ....ಗ್ರಂಥಾಲಯ ಮಾಹಿತಿ ವಿನಿಮಯದ ಕೇಂದ್ರ: ಪಾಟೀಲ್‌

KannadaprabhaNewsNetwork |  
Published : Aug 15, 2026, 02:30 AM IST
14ಕೆಪಿಎಂಎಸ್‌ಕೆ01:  | Kannada Prabha

ಸಾರಾಂಶ

ಗ್ರಂಥಾಲಯ ಕೇವಲ ಪುಸ್ತಕಗಳ ಸಂಗ್ರಹಣಾ ಸ್ಥಳವಲ್ಲ. ಜ್ಞಾನ, ಕಲಿಕೆ, ಸಂಶೋಧನೆ ಹಾಗೂ ಮಾಹಿತಿ ವಿನಿಮಯದ ಪ್ರಮುಖ ಕೇಂದ್ರವಾಗಿದೆ ಎಂದು ದೇವನಾಂಪ್ರಿಯ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲ ಡಾ.ಮಹಾಂತಗೌಡ ಪಾಟೀಲ ಹೇಳಿದರು.

-ಮಸ್ಕಿಯಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ

---------

ಕನ್ನಡಪ್ರ ವಾರ್ತೆ ಮಸ್ಕಿ

ಗ್ರಂಥಾಲಯ ಕೇವಲ ಪುಸ್ತಕಗಳ ಸಂಗ್ರಹಣಾ ಸ್ಥಳವಲ್ಲ. ಜ್ಞಾನ, ಕಲಿಕೆ, ಸಂಶೋಧನೆ ಹಾಗೂ ಮಾಹಿತಿ ವಿನಿಮಯದ ಪ್ರಮುಖ ಕೇಂದ್ರವಾಗಿದೆ ಎಂದು ದೇವನಾಂಪ್ರಿಯ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಪ್ರಾಂಶುಪಾಲ ಡಾ.ಮಹಾಂತಗೌಡ ಪಾಟೀಲ ಹೇಳಿದರು.

ಪಟ್ಟಣದ ದೇವನಾಂಪ್ರಿಯ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕಾಲೇಜಿನ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಿಂದ ಭಾರತದ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನದ ಪಿತಾಮಹ ಪದ್ಮಶ್ರೀ ಡಾ.ಎಸ್.ಆರ್. ರಂಗನಾಥನ್ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳ ಶೈಕ್ಷಣಿಕ, ಬೌದ್ಧಿಕ ಹಾಗೂ ಸಂಶೋಧನಾ ಬೆಳವಣಿಗೆಯಲ್ಲಿ ಗ್ರಂಥಾಲಯದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.

ಸಮಾರಂಭದಲ್ಲಿ ಡಾ.ಎಸ್.ಆರ್. ರಂಗನಾಥನ್ ಅವರ ಜೀವನ, ಸಾಧನೆ ಹಾಗೂ ಗ್ರಂಥಾಲಯ ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳ ಕುರಿತು ಕಾಲೇಜಿನ ಗ್ರಂಥಪಾಲಕ ಡಾ.ಪರಮಾನಂದ ಜೆ. ಹಂಗರಗಿ ವಿಶೇಷ ಉಪನ್ಯಾಸ ನೀಡಿದರು.

ಉಪನ್ಯಾಸಕರಾದ ಡಾ.ಬಸವರಾಜ್ ತಡಕಲ, ಶ್ರೀನಿವಾಸ್, ಸಣ್ಣಪ್ಪ ನಾಯಕ, ಹಾಜಿಬಾಬು,ಡಾ.ರಾಜೀಯಾ ಬೇಗಂ, ಆಶಾ ಸಿ, ಗಿರಿಜಾ, ಡಾ.ವೀರಪ್ಪನಗೌಡ ಡಾ.ಪಂಪಾಪತಿ ನಾಯಕ, ಸಂಜು ನಾಯಕ,ಶರಣಬಸವ, ಗೋವಿಂದ ರೆಡ್ಡಿ, ರವಿ. ಡಾ.ವೀರೇಶ. ವೀರೇಶ, ರಮೇಶ್ ನಾಯಕ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ, ಗ್ರಂಥಾಲಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

------ಫೋಟೊ------

14ಕೆಪಿಎಂಎಸ್‌ಕೆ01:

ಮಸ್ಕಿ ಪಟ್ಟಣದ ದೇವನಾಂಪ್ರಿಯ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಡಾ.ಮಹಾಂತಗೌಡ ಪಾಟೀಲ, ಡಾ.ಬಸವರಾಜ್ ತಡಕಲ, ಶ್ರೀನಿವಾಸ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೀಲ್ಸ್ ಕಾಲದಲ್ಲೂ ಚಿತ್ರಮಂದಿರ ನಿರ್ಮಾಣ ಧೈರ್ಯದ ಕೆಲಸ
ಆಟೋ ನಿಲ್ದಾಣ ನಿರ್ಮಾಣ ಸಾಮಗ್ರಿಗಳ ತೆರವು: ಆಟೋ ಚಾಲಕರ ಸಂಘ ಆಕ್ರೋಶ