ಕೊಪ್ಪಳ:
ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಮ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗ್ರಂಥಾಲಯಕ್ಕೆ ಚಾಲನೆ ನೀಡಲಾಗಿದೆ.
ಮಾರುತಿ ಕಟ್ಟಿಮನಿ ಮಾತನಾಡಿ, ಸದ್ಯ ಗ್ರಂಥಾಲಯದಲ್ಲಿ ದಿನಪತ್ರಿಕೆ ಇಟ್ಟಿದ್ದು ಮುಂದಿನ ದಿನಗಳಲ್ಲಿ ಪುಸ್ತಕ, ನಿಯತಕಾಲಿಕೆ ದೊರಯಲಿವೆ. ಕನ್ನಡಪ್ರಭ ಸೇರಿದಂತೆ ಎಲ್ಲ ಪತ್ರಿಕೆಯನ್ನು ದೇವಸ್ಥಾನದ ಆವರಣದಲ್ಲಿಯೇ ಓದಲು ಅವಕಾಶ ಕಲ್ಪಿಸಲಾಗಿದೆ ಎಂದರು.ಅಂಬೇಡ್ಕರ್ ಪುಸ್ತಕ ಪ್ರಿಯರಾಗಿದ್ದು ಓದುವ ಆಸಕ್ತಿ ಬೆಳೆಸುವ ಈ ಕಾರ್ಯಕ್ಕೆ ಅವರ ಜಯಂತಿ ದಿನವೇ ಚಾಲನೆ ನೀಡಲಾಗಿದೆ. ಈ ಮೂಲಕ ಅಕ್ಷರದ ದೀಪ ಹಚ್ಚುವ ಕೆಲಸಕ್ಕೆ ಚಾಲನೆ ಸಿಕ್ಕಂತಾಗಿರುವುದು ಖುಷಿ ತಂದಿದೆ ಎಂದು ಹೇಳಿದರು.
ಡಾ. ಸಿದ್ಧಲಿಂಗಪ್ಪ ಕೊಟ್ನೇಕಲ್, ಮಹಾಲಕ್ಷ್ಮೀ ಕಂದಾರಿ, ನಗರಸಭೆ ಮಾಜಿ ಸದಸ್ಯ ರಮೇಶ ಗಿಣಗೇರಿ, ಈಶಪ್ಪ ದೊಡ್ಡಮನಿ. ಶ್ರವಣಕುಮಾರ ಶರ್ಮಾ, ಪರಶುರಾಮ ಕಿಡದಾಳ, ಗವಿಸಿದ್ಧಪ್ಪ ಗಿಣಗೇರಿ, ಶಿವಪುತ್ರಪ್ಪ ಬಂಗಾರಿ, ದೇವಪ್ಪ ಗಿಣಗೇರಿ, ವಿನಾಯಕ ಕಿಡದಾಳ, ಗವಿರಾಜ ದೊಡ್ಡಮನಿ, ಮಂಜುನಾಥ ಹಳ್ಳಿಕೇರಿ, ವೈಭವ ಪೂಜಾರ, ಮಾರುತಿ ಕಿರುಬಂಡಿ ಇದ್ದರು.