
ಗಂಗಾವತಿ: ಜನ್ಮ ನೀಡಿದ ತಂದೆ, ತಾಯಿ ಮತ್ತು ಸಮಾಜ ನೋಡದಿದ್ದರೆ ಜೀವನ ವ್ಯರ್ಥ ಎಂದು ಕೆಎಲ್ಇ ಸಂಸ್ಥೆಯ ನಿರ್ದೇಶಕ ಹಾಗೂ ಬಣಜಿಗ ಸಮಾಜದ ಮುಖಂಡ ಶಂಕರಣ್ಣ ಮುನವಳ್ಳಿ ಹೇಳಿದರು.
ತಂದೆ, ತಾಯಿ ಜೋಪಾನ ಮಾಡಿ ಎಂದು ಕರೆ ನೀಡಿದ ಅವರು, ವೃದ್ಧಾಪ್ಯ ಸಮಯದಲ್ಲಿ ಅವರನ್ನು ವೃದ್ಧಾಶ್ರಮಕ್ಕೆ ತಳ್ಳುವುದು ಸರಿಯಲ್ಲ ಎಂದರು.
ಹುಬ್ಬಳ್ಳಿಯಲ್ಲಿ ಕೆಎಲ್ಇ ಸಂಸ್ಥೆಯಿಂದ ವೈದ್ಯಕೀಯ ಶಿಕ್ಷಣ ಪ್ರಾರಂಭಿಸಲಾಗಿದೆ. 600 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದರು.ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ರೂಡಗಿ ಮಾತನಾಡಿ, ಸಮಾಜದ ಯಾವುದೇ ಕಾರ್ಯಕ್ರಮ ನಡೆಯಬೇಕಾದರೆ ಸ್ವಂತ ಕಟ್ಟಡ ಅವಶ್ಯಕತೆ ಇದ್ದು, ಮಾಜಿ ಶಾಸಕರು ತಮ್ಮ ಅಧಿಕಾರಾವಧಿಯಲ್ಲಿ ಸಮಾಜಕ್ಕೆ ನೀಡಿದ ಸಿಎ ಸೈಟ್ನಲ್ಲಿ ಕಟ್ಟಡ ನಿರ್ಮಾಣಕ್ಕೆ ₹1 ಲಕ್ಷ ನೀಡುವುದಾಗಿ ಭರವಸೆ ನೀಡಿದರು.
ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕದ ಅಧ್ಯಕ್ಷ ಸೋಮನಾಥ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಸವನ ಬಾಗೇವಾಡಿಯ ಉಪನ್ಯಾಸಕ ಅಶೋಕ ಹಂಚಲಿ, ಬೈಲಹೊಂಗಲದ ಪ್ರೇಮಕ್ಕ ಅಂಗಡಿ ವಿಶೇಷ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು, ಚುನಾಯಿತ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು.
ವೇದಿಕೆ ಮೇಲೆ ಬಣಜಿಗ ಸಮಾಜದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಜವಳಿ, ಶಿವಾನಂದ ಬಿದರಿ, ವಿಶ್ವನಾಥ ಬಳ್ಳೊಳ್ಳಿ, ಗಾಳಿ ರುದ್ರಪ್ಪ, ಗಾಳಿ ರುದ್ರಪ್ಪ, ಅಕ್ಕಿ ಕೊಟ್ರಪ್ಪ, ಅರ್ಲೂರು ಶಿವಕುಮಾರ, ಸಂಗಮೇಶ ಕೋಟಿ, ಬಸವರಾಜ ಕಡ್ಲಿ ಯಲಬುರ್ಗಾ, ಶಾಂತಪ್ಪ, ರೇಖಾ ಅಂಗಡಿ, ಮಂಜುನಾಥ ಸೋಮನಾಳ, ಹರ್ಷಿತಾ ಪಟ್ಟಣಶೆಟ್ಟಿ, ಸುಮಾ ಮಸ್ಕಿ, ಗಾಳಿ ಶಿವಪ್ಪ, ಸತೀಶ ಅಂಗಡಿ, ಶರಣಪ್ಪ ಭತ್ತದ ಭಾಗವಹಿಸಿದ್ದರು.