(ವೆಬ್ಬಿಗೆ) ಮಾಹೆ: ಐವರು ಸಾಧಕರಿಗೆ ‘ಹೊಸ ವರ್ಷ ಪ್ರಶಸ್ತಿ 2026’

KannadaprabhaNewsNetwork |  
Published : Jan 12, 2026, 02:45 AM IST
ಮಾಹೆಯಲ್ಲಿ ಐವರು ಸಾಧಕರಿಗೆ ಹೊಸ ವರ್ಷದ ಪ್ರಶಸ್ತಿ-2026ಗಳನ್ನು ಪ್ರದಾನಮಾಡಲಾಯಿತು. | Kannada Prabha

ಸಾರಾಂಶ

ಮಾಹೆ, ಎಜಿಇ, ಎಂಇಎಂಜಿ, ಎಂಎಂಎನ್‌ಎಲ್‌ ಹಾಗೂ ಡಾ. ಟಿ.ಎಂ.ಎ ಪೈ ಫೌಂಡೇಶನ್ ಸಹಯೋಗದಲ್ಲಿ ಜೀವಮಾನ ಸಾಧಕರಿಗೆ ನೀಡಲಾಗುವ ಹೊಸ ವರ್ಷದ ಪ್ರಶಸ್ತಿ 2026ಗಳನ್ನು ಶನಿವಾರ ಪ್ರದಾನ ಮಾಡಲಾಯಿತು.

ಮಣಿಪಾಲ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಅಕಾಡೆಮಿ ಆಫ್ ಜನರಲ್ ಎಜುಕೇಶನ್ (ಎಜಿಇ), ಮಣಿಪಾಲ ಎಜುಕೇಶನ್ ಮತ್ತು ಮೆಡಿಕಲ್ ಗ್ರೂಪ್, ಬೆಂಗಳೂರು (ಎಂಇಎಂಜಿ), ಮಣಿಪಾಲ್ ಮೀಡಿಯಾ ನೆಟ್‌ವರ್ಕ್ ಲಿಮಿಟೆಡ್ (ಎಂಎಂಎನ್‌ಎಲ್‌) ಹಾಗೂ ಡಾ. ಟಿ.ಎಂ.ಎ ಪೈ ಫೌಂಡೇಶನ್ ಸಹಯೋಗದಲ್ಲಿ ಜೀವಮಾನ ಸಾಧಕರಿಗೆ ನೀಡಲಾಗುವ ‘ಹೊಸ ವರ್ಷದ ಪ್ರಶಸ್ತಿ- 2026’ಗಳನ್ನು ಶನಿವಾರ ಪ್ರದಾನ ಮಾಡಲಾಯಿತು.

ಈ ಬಾರಿ ಮಾಜಿ ಸಂಸದ - ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಕೆನರಾ ಬ್ಯಾಂಕ್ ಮಾಜಿ ಕಾರ್ಯ ನಿರ್ವಾಹಕ ನಿರ್ದೇಶಕ ಕೆ. ಲಕ್ಷ್ಮೀನಾರಾಯಣನ್, ತುಂಬೆ ಗ್ರೂಪ್, ಯುಎಇ ಸಂಸ್ಥಾಪಕ ಅದ್ಯಕ್ಷ ಡಾ. ತುಂಬೆ ಮೊಯ್ದೀನ್, ಮಾಹೆ ಕುಲಪತಿ ವಿಎಸ್‌ಎಂ (ನಿವೃತ್ತ) ಲೆಜ (ಡಾ.) ಎಂ.ಡಿ. ವೆಂಕಟೇಶ್ ಮತ್ತು ಹಿರಿಯ ನಟಿ ವಿನಯಪ್ರಸಾದ್ ಅವರಿಗೆ ಹೊಸವರ್ಷದ ಪ್ರಶಸ್ತಿಗಳ‍ನ್ನು ಪ್ರದಾನ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಮಾಹೆ ಟ್ರಸ್ಟ್ ಮತ್ತು ಎಂಇಎಂಜಿ ಅಧ್ಯಕ್ಷ ಡಾ. ರಂಜನ್ ಆರ್. ಪೈ, ಮಾಹೆ ಟ್ರಸ್ಟ್‌ನ ಟ್ರಸ್ಟಿ ವಸಂತಿ ಆರ್. ಪೈ, ಎಜಿಇ ಅಧ್ಯಕ್ಷ ಮತ್ತು ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳ್, ಮಣಿಪಾಲ್ ಮೀಡಿಯಾ ನೆಟ್‌ವರ್ಕ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ಅಧ್ಯಕ್ಷ ಟಿ. ಸತೀಶ್ ಯು. ಪೈ ಮತ್ತು ಡಾ. ಟಿ.ಎಂ.ಎ ಪೈ ಫೌಂಡೇಶನ್‌ನ ಟ್ರಸ್ಟಿ ಟಿ. ಸಚಿನ್ ಪೈ ಉಪಸ್ಥಿತರಿದ್ದರು. ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ನಿರ್ದೇಶಕ ಕಮಾಂಡರ್ ಡಾ. ಅನಿಲ್ ರಾಣಾ ವಂದನಾರ್ಪಣೆ ಸಲ್ಲಿಸಿದರು.ಈ ಸಂದರ್ಭ ಮಾತನಾಡಿದ ಡಾ. ಎಚ್.ಎಸ್. ಬಲ್ಲಾಳ್, ‘ನಮ್ಮ ಸಮಾಜವನ್ನು ಶ್ರೀಮಂತಗೊಳಿಸಲು ಅರ್ಥಪೂರ್ಣ ಕೊಡುಗೆಗಳನ್ನು ನೀಡಿದ ಈ ಸಾಧಕರನ್ನು ಗುರುತಿಸುವುದು ಕೇವಲ ಅಭಿನಂದನೆಯಲ್ಲ, ಬದಲಾಗಿ ಅದು ಸಮಾಜದ ಬೌದ್ಧಿಕ ಮತ್ತು ಸಾಂಸ್ಕೃತಿಕ ಬಲವನ್ನು ಹೆಚ್ಚಿಸುವ ಪ್ರಕ್ರಿಯೆಯಾಗಿದೆ ಎಂದರು.ಪ್ರಶಸ್ತಿ ಪುರಸ್ಕೃತ ಕೆ. ಜಯಪ್ರಕಾಶ್ ಹೆಗ್ಡೆ, ‘ನನಗೆ ರಾಜ್ಯ ಸರ್ಕಾರ ನೀಡಿದ ಜವಾಬ್ದಾರಿಯಿಂದ ಅನಾಥ ಮಕ್ಕಳಿಗೆ ಮೀಸಲಾತಿ, ಸಮಾನ ಅವಕಾಶ ನೀಡಲು ಸಾಧ್ಯವಾಗಿದೆ. ಬಹುಶಃ ಇಂಥ ಸಮಾಜಪರ ಕೆಲಸಗಳಿಂದಾಗಿಯೇ ನಾನು ಈ ಪ್ರಶಸ್ತಿ ಸ್ವೀಕರಿಸಲು ಅರ್ಹನಾಗಿದ್ದೇನೆʼ ಎಂದರು.ಡಾ. ತುಂಬೆ ಮೊಯ್ದೀನ್ , ‘ಈ ಪ್ರಶಸ್ತಿ ನನಗೆ ಸಿಕ್ಕ ಗೌರವ ಮಾತ್ರವಲ್ಲ, ಇದು ಇಡೀ ತುಂಬೆ ಸಮೂಹದ ಸಂಘಟಿತ ದೃಷ್ಟಿಕೋನ, ಬದ್ಧತೆಗೆ ಮನ್ನಣೆಯಾಗಿದೆ. ಮಾಹೆಯ ನಾವೀನ್ಯತೆ, ಸಹಾನುಭೂತಿ, ಶಿಕ್ಷಣ, ಸೇವೆ ಎಂಬ ಮೌಲ್ಯಗಳಿಂದ ಸಮಾಜದಲ್ಲಿ ಮಾಡುತ್ತಿರುವ ಪರಿವರ್ತನೆಯೇ ನನ್ನ ಸಂಸ್ಥೆಗಳ ಬೆಳವಣಿಗೆಗೆ ಬುನಾದಿಯಾಗಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ