ಪಪಂ ಅಧ್ಯಕ್ಷೆ ಲೀಲಾವತಿ, ಉಪಾಧ್ಯಕ್ಷೆಯಾಗಿ ಮಂಜುಳಾ ಆಯ್ಕೆ

KannadaprabhaNewsNetwork |  
Published : Feb 22, 2026, 02:30 AM IST
21ಕೆಕೆಆರ್1:ಕುಕನೂರು ಪ.ಪಂ ಅಧ್ಯಕ್ಷೆಯಾಗಿ ಲೀಲಾವತಿ ಮುಧೋಳ, ಉಪಾಧ್ಯಕ್ಷರಾಗಿ ಮಂಜುಳಾ ಕಲ್ಮನಿ ಚುನಾವಣೆಯಲ್ಲಿ ಶನಿವಾರ ಆಯ್ಕೆಯಾದರು. ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ಸಂಸದ ಕೆ.ರಾಜಶೇಖರ ಹಿಟ್ನಾಳ ಇದ್ದರು.  | Kannada Prabha

ಸಾರಾಂಶ

ಅಭಿವೃದ್ಧಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮಾರ್ಗದರ್ಶನದಲ್ಲಿ ಶ್ರಮಿಸುತ್ತಾರೆ

ಕುಕನೂರು: ಸ್ಥಳೀಯ ಪಪಂ ಅಧ್ಯಕ್ಷೆಯಾಗಿ ಲೀಲಾವತಿ ಪ್ರವೀಣಕುಮಾರ ಮುಧೋಳ, ಉಪಾಧ್ಯಕ್ಷರಾಗಿ ಮಂಜುಳಾ ಯಲ್ಲಪ್ಪ ಕಲ್ಮನಿ ಶನಿವಾರ ಆಯ್ಕೆಯಾದರು.

ಪಪಂನಲ್ಲಿ ಶನಿವಾರ ಪಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣಾಧಿಕಾರಿ ತಹಸೀಲ್ದಾರ್ ಬಸವರಾಜ ಬೆಣ್ಣೆಶಿರೂರು ನೇತೃತ್ವದಲ್ಲಿ ಚುನಾವಣೆ ಜರುಗಿತು. ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಲೀಲಾವತಿ ಮುಧೋಳ, ಬಿಜೆಪಿ ಪಕ್ಷದಿಂದ ಲಕ್ಷ್ಮೀ ಸಬರದ್ ನಾಮಪತ್ರ ಸಲ್ಲಿಸಿದರೆ, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಮಂಜುಳಾ ಕಲ್ಮನಿ, ಬಿಜೆಪಿಯಿಂದ ನೇತ್ರಾವತಿ ಮಾಲಗಿತ್ತಿ ನಾಮಪತ್ರ ಸಲ್ಲಿಸಿದರು. ಪಪಂ ಒಟ್ಟು ೧೯ ಸದಸ್ಯರನ್ನು ಹೊಂದಿದ್ದು, ಕಾಂಗ್ರೆಸ್ ೧೦, ಬಿಜೆಪಿ ೯ ಜನ ಸದಸ್ಯರನ್ನು ಹೊಂದಿದ್ದರು.

ಶಾಸಕ, ಸಂಸದನಿಂದ ಮತದಾನ: ಪಪಂನಲ್ಲಿ ನಡೆದ ಚುನಾವಣೆಗೆ ಶಾಸಕ ಬಸವರಾಜ ರಾಯರಡ್ಡಿ ಮತ್ತು ಸಂಸದ ಕೆ.ರಾಜಶೇಖರ ಹಿಟ್ನಾಳ ಮತದಾನ ಮಾಡಿದರು. ಅವರ ಮತದಾನದಿಂದ ಕಾಂಗ್ರೆಸ್ ೧೨ ಮತ ಪಡೆದರೆ, ಬಿಜೆಪಿಗೆ ೯ಮತಗಳು ಬಂದಿವೆ. ಆದ್ದರಿಂದ ಅಧಿಕೃತವಾಗಿ ೩ಮತಗಳ ಹೆಚ್ಚು ಕಾಂಗ್ರೆಸ್ ಅಭ್ಯರ್ಥಿಗಳು ಪಡೆದಿರುವದರಿಂದ ಅಧ್ಯಕ್ಷರಾಗಿ ಲೀಲಾವತಿ ಮುಧೋಳ,ಉಪಾಧ್ಯಕ್ಷರಾಗಿ ಮಂಜುಳಾ ಕಲ್ಮನಿ ಆಯ್ಕೆಯಾದರು. ಚುನಾವಣೆ ಪ್ರಕ್ರೀಯೆ ತಮ್ಮ ಅಭ್ಯರ್ಥಿಗಳಿಗೆ ಕೈ ಎತ್ತುವ ಮೂಲಕ ಚುನಾವಣೆ ಜರುಗಿತು.

ಸಂಸದ ರಾಜಶೇಖರ ಹಿಟ್ನಾಳ ಮಾತನಾಡಿ, ಪಟ್ಟಣದ ಅಭಿವೃದ್ಧಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮಾರ್ಗದರ್ಶನದಲ್ಲಿ ಶ್ರಮಿಸುತ್ತಾರೆ ಎಂದರು.

ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಮಾತನಾಡಿ, ಈ ಬಾರಿ ಸಿಎಂ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್‌ನಲ್ಲಿ ತಾಲೂಕಿನ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುತ್ತಿದ್ದೇನೆ.ರೈತರಿಗಾಗಿ ಕುಕನೂರು ಮತ್ತು ಚಿಕ್ಕೊಪ್ಪ ಎಪಿಎಂಸಿಯಲ್ಲಿ ಎರಡು ಕೋಲ್ಡ್ ಸ್ಟೋರೆಜ್ ನಿರ್ಮಿಸಿದ್ದೇನೆ. ಕೆರೆ ತುಂಬಿಸುವ ಯೋಜನೆ, ಪ್ರಜಾಸೌಧ, ಬುದ್ಧ ಬಸವ ಅಂಬೇಡ್ಕರ್ ಭವನ, ನ್ಯಾಯಾಲಯ ನಿರ್ಮಾಣಕ್ಕಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಕ್ಷೇತ್ರಕ್ಕೆ ಕರೆಸುತ್ತೇನೆ. ಎಲ್ಲರೂ ಕುಕನೂರು ಪಟ್ಟಣ ಅಭಿವೃದ್ಧಿಗೆ ಶ್ರಮೀಸೋಣ ಎಂದರು.

ಚುನಾವಣಾಧಿಕಾರಿ ತಹಸೀಲ್ದಾರ್ ಬಸವರಾಜ ಬೆಣ್ಣೆಶಿರೂರು, ಸಂಸದ ರಾಜಶೇಖರ ಹಿಟ್ನಾಳ, ಪಪಂ ಮುಖ್ಯಾಧಿಕಾರಿ ನಾಗೇಶ, ಕರೆಬಸಪ್ಪ ನೀಡಗುಂದಿ, ಸತ್ಯನಾರಾಯಣಪ್ಪ ಹರಪನಹಳ್ಳಿ, ಯಲಬುರ್ಗಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಸುಧೀರ್ ಕೊರ್ಲಹಳ್ಳಿ, ಮಂಜುನಾಥ ಕಡೆಮನಿ, ಮಲಿಯಪ್ಪ ಅಣ್ಣಿಗೇರಿ, ಶರಣಪ್ಪ ಗಾಂಜಿ, ವೀರಯ್ಯ ತೊಂಟದಾರ್ಯಮಠ, ಪಪಂ ಸದಸ್ಯರು, ಅಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಳ್ಳತನದ ಆತಂಕ: ಕನಕಾಚಲಪತಿ ದೇಗುಲದ ಆಭರಣ ಗಂಗಾವತಿಗೆ ಶಿಪ್ಟ್
ಭೂ ಗ್ಯಾರಂಟಿ ಪ್ರಭಾವ: ಸರ್ಕಾರಿ ಜಾಗೆಗೆ ಲಗ್ಗೆಯಿಟ್ಟ ಗ್ರಾಮಸ್ಥರು