ಸಮಾಜಕ್ಕೆ ತನ್ನ ಸರ್ವಸ್ವ ಲಿಂಗರಾಜರು ದಾನ ಮಾಡಿದರು: ತಿಗಡಿ

KannadaprabhaNewsNetwork |  
Published : Jan 12, 2024, 01:45 AM IST
11ಎನ್.ಆರ್.ಡಿ3 ಶಿರಸಂಗಿ ಲಿಂಗರಾಜ ದೇಸಾಯಿವರ ಜಯ್ಯಂತ್ಸವ ಕಾರ್ಯಕ್ರದಲ್ಲಿ ಪ್ರೋ. ಆರ್.ಎಚ್.ತಿಗಡಿ ಮಾತನಾಡುತ್ತಿದ್ದಾರೆ. | Kannada Prabha

ಸಾರಾಂಶ

ಕರ್ನಾಟಕವನ್ನು ಶೈಕ್ಷಣಿಕ ಹಾಗೂ ಸಾಂಸ್ಕೃತಿಕವಾಗಿ ಬೆಳೆಸಿದ ಮಹಾನ್ ಪುರುಷರು ತ್ಯಾಗವೀರ ಸಿರಸಂಗಿ ಲಿಂಗರಾಜರು ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಪ್ರೊ. ಆರ್.ಎಚ್. ತಿಗಡಿ ಹೇಳಿದರು.

ನರಗುಂದ: ಕರ್ನಾಟಕವನ್ನು ಶೈಕ್ಷಣಿಕ ಹಾಗೂ ಸಾಂಸ್ಕೃತಿಕವಾಗಿ ಬೆಳೆಸಿದ ಮಹಾನ್ ಪುರುಷರು ತ್ಯಾಗವೀರ ಸಿರಸಂಗಿ ಲಿಂಗರಾಜರು ಎಂದು ತಾಲೂಕು ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಪ್ರೊ. ಆರ್.ಎಚ್. ತಿಗಡಿ ಹೇಳಿದರು.

ಅವರು ತಾಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತ್ಯಾಗವೀರ ಸಿರಸಂಗಿ ಲಿಂಗರಾಜರ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದರು.

ಇಂದು ದೇಶದ ಬೆನ್ನೆಲುಬು ಎಂದರೆ ರೈತ ಎಂಬುವುದನ್ನು ಮನಗಂಡಿದ್ದ ಸಿರಸಂಗಿ ಲಿಂಗರಾಜರು ೧೫೦ ಎಕರೆ ಹೊಲ ಖರೀದಿಸಿ ಅಲ್ಲಿ ಕೃಷಿ ತರಬೇತಿ ಶಾಲೆಯನ್ನು ಸ್ಥಾಪಿಸಿ ರೈತರಿಗೆ ಕೃಷಿಯ ಕುರಿತು ಮಾಹಿತಿಯನ್ನು ಒದಗಿಸಿ ಅವರನ್ನು ಬಲಪಡಿಸುವಲ್ಲಿ ಶ್ರಮಿಸುವುದರ ಜೊತೆಗೆ ಭವ್ಯ ಕೆರೆಗಳನ್ನು ಕಟ್ಟಿಸಿದ್ದರು, ಸಾಮಾಜಿಕ ಕ್ರಾಂತಿಕಾರಿಗಳಾದ ಇವರು ಬಾಲ್ಯ ವಿವಾಹಗಳನ್ನು ವಿರೋಧಿಸಿದ್ದರು ಎಂದರು.

ಈ ನಾಡು ಕಂಡ ಅಪ್ರತಿಮ ದಾನವೀರ ಸಿರಸಂಗಿ ಲಿಂಗರಾಜ ದೇಸಾಯಿಯವರ ತ್ಯಾಗ ಮತ್ತು ಉದಾರ ಮನೋಭಾವ ಸದಾ ಸ್ಮರಣೀಯವಾದದ್ದು. ಸಂಘಟನೆಯೇ ಅಭಿವೃದ್ಧಿಯ ಹೆದ್ದಾರಿ ಎಂದರಿತ ಲಿಂಗರಾಜರು, ಲಿಂಗಾಯತ ಸಂಘಟನೆಯ ಪ್ರಥಮ ರೂವಾರಿ ಎನಿಸಿ, ಅಖಿಲ ಭಾರತ ವೀರಶೈವ ಮಹಾಸಭೆಯನ್ನು ಸ್ಥಾಪಿಸಿದರು. ಪ್ರಸಿದ್ಧ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಗೆ ಸ್ಥಾಪನೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದರು.

ಸಾನಿಧ್ಯವಹಿಸಿದ್ದ ಶಾಂತಲಿಂಗ ಶ್ರೀಗಳು ಮಾತನಾಡಿ, ಕನ್ನಡ ನಾಡಿಗೆ ಮತ್ತು ಲಿಂಗಾಯತ ಸಮಾಜಕ್ಕೆ ಅಪಾರ ಸೇವೆ ಸಲ್ಲಿಸಿ ಜೀವನವನ್ನೆ ತಾಗ್ಯ ಮಾಡಿದ ಸಿರಸಂಗಿ ಲಿಂಗರಾಜರ ಜಯಂತಿಯನ್ನು ಆಚರಿಸುವ ಮೂಲಕ ಅವರ ಸಂಪೂರ್ಣ ಪರಿಚಯ ನಾಡಿಗೆ ಮಾಡಿಕೊಡಬೇಕು. ಸ್ವಹಿತಕ್ಕಾಗಿ ಏನೂ ಮಾಡದೆ ಸರ್ವಸ್ವವನ್ನೂ ಸಮಾಜಕ್ಕಾಗಿಯೇ ಧಾರೆ ಎರೆದ ಐತಿಹಾಸಿಕ ಪುರುಷನ ಸ್ಮಾರಕಗಳು ಅನಾಥವಾಗಿವೆ. ಅವುಗಳನ್ನು ಜೀರ್ಣೋದ್ಧಾರಗೊಳಿಸಬೇಕು ಮತ್ತು ರಕ್ಷಣೆ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು. ಸಮಾಜದಲ್ಲಿರುವ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತಮ್ಮ ಆಸ್ತಿಯನ್ನು ಮಾರಾಟ ಮಾಡಿದ ತ್ಯಾಗಮಯಿ, ಪರೋಪಕಾರಿ, ಸಿರಸಂಗಿ ಮನೆತನದ ಆಡಳಿತಗಾರ ಅವರ ಆಡಳಿತ ವಿಶ್ವದ ಎಲ್ಲಾ ಆಡಳಿತಗಾರರಿಗೆ ಮಾದರಿಯಾಗಿದೆ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಇತಿಹಾಸ ಪ್ರಾಚ್ಯ ಪ್ರಜ್ಞೆ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಸ್ಕಾನ್ ಅಮಿನಾಯಕ ಹಾಗೂ ಪ್ರತಿಭಾಕಾರಂಜಿಯ ಘಜಲ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರದ್ಧಾ ಹಿರೇಮಠ ಅವರನ್ನು ಶ್ರೀಮಠದಿಂದ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಯಲ್ಲಪ್ಪ ದೇಸಾಯಿ, ಶಿಕ್ಷಕರಾದ ಮಂಜುನಾಥ ನಿಂಗನಗೌಡ್ರ, ನಿಂಗಪ್ಪ ನರಗುಂದ, ಸಿದ್ದಲಿಂಗೇಶ್ವರಯ್ಯ ಹಿರೇಮಠ, ಋಕ್ಸಾನ್ ಅಮೀನನಾಯಕ್, ವೀರಯ್ಯ ಸಾಲಿಮಠ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಮಹಾಂತೇಶ ಹಿರೇಮಠ ಸ್ವಾಗತಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಟುಂಬ ಹಾಳು ಮಾಡುತ್ತಿರುವ ಪ್ರೇಮಿಗಳ ದಿನ
ರಾಜಕೀಯ ಬದುಕಿಗೆ ಜನ್ಮ ನೀಡಿದ್ದು ಗ್ರಾಮೀಣ ಕ್ಷೇತ್ರ