ಕನ್ನಡಪ್ರಭ ವಾರ್ತೆ ಮಂಡ್ಯ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 4 ಲಕ್ಷ ಕೋಟಿ ಬಜೆಟ್ನಲ್ಲಿ 53,117 ಕೋಟಿ ರು.ಗಳನ್ನು ಕೃಷಿ ಕ್ಷೇತ್ರಕ್ಕೆ ಮೀಸಲಿಡುವ ಮೂಲಕ ತಾವೊಬ್ಬ ನಿಜವಾದ ರೈತನ ಮಗ ಎಂಬುದನ್ನು ಸಿಎಂ ಸಾಬೀತುಪಡಿಸಿದ್ದಾರೆ ಎಂದು ಬಣ್ಣಿಸಿದರು.
ಮಂಡ್ಯ ಕೃಷಿ ವಿವಿ ಮೂಲ ಸೌಕರ್ಯಕ್ಕೆ 25 ಕೋಟಿ ರು. ನೀಡುವ ಮೂಲಕ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಕೃಷಿ ವಿವಿ ಕಾರ್ಯಾರಂಭ ಮಾಡಲು ಹಸಿರು ನಿಶಾನೆ ತೋರಿದ್ದಾರೆ. ಈ ವಿಚಾರದಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಕೊಂಕು ನುಡಿದಿರುವುದನ್ನು ಖಂಡಿಸಿದರು.ತಮ್ಮ ಸಹೋದರ ಮಂಡ್ಯ ಲೋಕಸಭಾ ಕ್ಷೇತ್ರದ ಸದಸ್ಯರಾಗಿದ್ದಾರೆ ಎಂಬುದನ್ನು ಮರೆತು ಕೃಷಿ ವಿವಿ ಬಗ್ಗೆ ತಗಾದೆ ತೆಗೆದಿರುವ ಬಗ್ಗೆ ಅವರಿಗೆ ಮತದಾನಕ್ಕೆ ಮಾತ್ರ ಜಿಲ್ಲೆಯ ಮತದಾರು ಬೇಕೇ ಹೊರತು ಅಭಿವೃದ್ಧಿಗಲ್ಲ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಟೀಕಿಸಿದರು.
ಸಂವಿಧಾನಿಕ ಹುದ್ದೆ ಜವಾಬ್ದಾರಿ ಅರಿಯದೆ ವಿಪಕ್ಷ ಮುಖಂಡರು ವೈಯಕ್ತಿಕ ಟೀಕೆ ಮೂಲಕ ಬಿಜೆಪಿ ಹೈಕಮಾಂಡ್ನ್ನು ಸಂತೃಪ್ತಿ ಪಡಿಸಲು ಮುಂದಾಗಿದ್ದಾರೆ. ಅವರಿಗೆ ವಿಪಕ್ಷ ನಾಯಕನಾಗಲು ಯಾವುದೇ ಯೋಗ್ಯತೆ, ಅರ್ಹತೆ ಇಲ್ಲ. ಕಾಂಗ್ರೆಸ್ ಮುಖಂಡರನ್ನು ಅವಹೇಳನಕಾರಿಯಾಗಿ ಟೀಕಿಸಿ ಅನೈತಿಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿಗೆ 6 ನೇ ಹಂತದ ಕುಡಿಯುವ ನೀರಿನ ಯೋಜನೆ ಮಾಡುವ ಮೂಲಕ ಜಿಲ್ಲೆಯ ರೈತರಿಗೆ ಅನ್ಯಾಯ ಮಾಡುವುದಿಲ್ಲ. ಈ ಬಗ್ಗೆ ನಮ್ಮ ಸಚಿವರು, ಶಾಸಕರೊಟ್ಟಿಗೆ ಚರ್ಚಿಸಲಾಗುವುದು. ಬೆಂಗಳೂರಿನ ಜನರಿಗೆ ನೀರು ಕೊಡಲು ಕಾವೇರಿ ಅಲ್ಲದೇ, ಬೇರೆಬೇರೆ ಯೋಜನೆಗಳನ್ನೂ ಮಾಡುತ್ತಿದ್ದಾರೆ. ಮೇಕೆದಾಟು ಯೋಜನೆಯಿಂದ ಹೆಚ್ಚು ಅನುಕೂಲವಾಗುತ್ತದೆ. ಆದರೆ ಅದು ಸಾಧ್ಯವಾಗುತ್ತಿಲ್ಲ ಎಂದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಅಪ್ಪಾಜಿಗೌಡ, ವಿಜಯಲಕ್ಷ್ಮಿ ರಘುನಂದನ್, ಸಾತನೂರು ಕೃಷ್ಣ, ಸಿ.ಎಂ. ದ್ಯಾವಪ್ಪ, ಸುಂಡಹಳ್ಳಿ ಮಂಜುನಾಥ್, ಚಂದ್ರಶೇಖರ್, ಬೋರೇಗೌಡ, ವಿಜಯಕುಮಾರ್ ಇದ್ದರು.