ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಅವರು, ಸಂಸ್ಕೃತಿ ನಿರ್ಮಾಣದಲ್ಲಿ ಪ್ರಸಾರಾಂಗದ ಪಾತ್ರ ಕುರಿತು ಮಾತನಾಡಿದರು.
ಕವಿ ಕುವೆಂಪು ಶಿಕ್ಷಣ ಪಶುವನ್ನು ಮನುಷ್ಯನನ್ನಾಗಿ ಮಾಡುತ್ತದೆ ಎಂದಿದ್ದಾರೆ. ಆದರೆ, ವ್ಯಾಟ್ಸಪ್ ಗಳಲ್ಲಿ ದ್ವೇಷ ಕಕ್ಕುವುದನ್ನು ಕಾಣುತ್ತಿದ್ದೇವೆ. ಪರಂಪರೆಯ ಬಗ್ಗೆ ದಾರ್ಶನಿಕರ ಬಗ್ಗೆ ಎಷ್ಟೊಂದು ಅಹಸನೆ ಇದೆ. ಕುವೆಂಪು ಅವರ ಬಗ್ಗೆ ಏಕವಚನದಲ್ಲಿ ನಿಂದಿಸಲಾಗುತ್ತಿದೆ ಎಂದು ಅವರು ವಿಷಾದಿಸಿದರು.ಪ್ರಸ್ತುತ ಪುಸ್ತಕ ಸಂಸ್ಕೃತಿ ಅಳಿಯುತ್ತಿದೆ. ಕೇಳುವ ನೋಡುವ ಯುಗದಲ್ಲಿದ್ದೇವೆ. 500 ಪುಟಗಳ ಪುಸ್ತಕವನ್ನು ಯಾರು ಓದುತ್ತಾರೆ? ಹೊಸ ತಲೆಮಾರಿನ ಓದುವ ಕ್ರಮ ಬದಲಾಗಿದೆ. ಸಾಂಪ್ರದಾಯಿಕವಾಗಿಲ್ಲ. ಪ್ರಸಾರಾಂಗ ಮತ್ತು ಗ್ರಂಥಾಲಯಗಳಿಂದ ಡಿಜಿಟಲ್ ವೇದಿಕೆಗೆ ವರ್ಗಾವಣೆಗೊಂಡಿದ್ದಾರೆ ಎಂದರು.
ಮೈಸೂರು ವಿವಿ ಪ್ರಸಾರಾಂಗವು ಜ್ಞಾನ, ವಿಚಾರ ಪ್ರಸರಣದಲ್ಲಿ ದೊಡ್ಡ ಕೆಲಸ ಮಾಡಿದೆ. ಚಳವಳಿಯಾಗಿ ಜನರಿಗೆ ತಿಳವಳಿಕೆ ಕೊಟ್ಟ ಭವ್ಯ ಪರಂಪರೆ ಹೊಂದಿದೆ ಎಂದರು.
ಪ್ರಸಾರಾಂಗದ ನಿರ್ದೇಶಕ ಡಾ. ನಂಜಯ್ಯ ಹೊಂಗನೂರು, ಅಧೀಕ್ಷಕ ಚನ್ನಪ್ಪ, ಮುದ್ರಾಣಾಲಯದ ನಿರ್ದೇಶಕ ಸತೀಶ್, ವಿಜಯಮ್ಮ, ಲಲಿತಾ, ರೇಣುಕಾ ಇದ್ದರು. ಗಾಯಕ ಅಮ್ಮ ರಾಮಚಂದ್ರ ಪ್ರಾರ್ಥಿಸಿದರು. ಡಾ.ಎಚ್.ಪಿ. ಮಂಜು ನಿರೂಪಿಸಿದರು.ಶಿಕ್ಷಣ ಮತ್ತು ವೈದ್ಯ ಶಿಕ್ಷಣ ತುಟ್ಟಿಯಾಗಿರುವುದು ಪ್ರಜಾಪ್ರಭುತ್ವದ ಅಧಃಪತನದ ಸಂಕೇತವೂ ಹೌದು. ತೆರಿಗೆಯ ಹಣ ಶಿಕ್ಷಣ, ಆರೋಗ್ಯ, ಆಹಾರಕ್ಕೆ ವಿನಿಯೋಗ ಆಗಬೇಕು. ಪುಸ್ತಕ ಕಳುಹಿಸುವ ತೆರಿಗೆ ಹೆಚ್ಚು ಮಾಡಿರುವುದು ಜ್ಞಾನ ವಿರೋಧಿ ಕೃತ್ಯ.