ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ರಾಜ್ಯದ ಎಲ್ಲಾ ಸಂತೆಯಲ್ಲಿ ಸಾಹಿತ್ಯದ ಕಾರ್ಯಕ್ರಮ

KannadaprabhaNewsNetwork | Published : Jun 16, 2025 1:00 AM

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್ ಎಸ್ ಮುಕುಂದರಾಜು ಯಡಿಯೂರಿನಲ್ಲಿ ಏರ್ಪಡಿಸಿದ್ದ ಸಂತೆಯಲ್ಲಿ ಸಾಹಿತ್ಯ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸಂತೆಯಲ್ಲೂ ಸಾಹಿತ್ಯದ ಕಾರ್ಯಕ್ರಮ ಮಾಡಲಾಗುವುದು ಎಂದರು.

ಕನ್ನಡಪ್ರಭ ವಾರ್ತೆ ಕುಣಿಗಲ್

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್ ಎಸ್ ಮುಕುಂದರಾಜು ಯಡಿಯೂರಿನಲ್ಲಿ ಏರ್ಪಡಿಸಿದ್ದ ಸಂತೆಯಲ್ಲಿ ಸಾಹಿತ್ಯ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸಂತೆಯಲ್ಲೂ ಸಾಹಿತ್ಯದ ಕಾರ್ಯಕ್ರಮ ಮಾಡಲಾಗುವುದು ಎಂದರು. ಗ್ರಾಮೀಣ ಭಾಗದ ಸಾರ್ವಜನಿಕರಲ್ಲಿ ಹಾಗೂ ಸಂತೆಗೆ ಬರುವ ವ್ಯಾಪಾರಸ್ಥರಲ್ಲಿ ಹೆಚ್ಚು ಸಾಹಿತ್ಯ ಶಕ್ತಿ ಇರುವುದರಿಂದ ಅವರಲ್ಲಿ ಇನ್ನಷ್ಟು ಸಾಹಿತ್ಯಾಭಿಮಾನವನ್ನು ಅಭಿವೃದ್ಧಿಪಡಿಸಬೇಕು ಮತ್ತು ರನ್ನ ಪಂಪ ಬಸವರಂತ ಹಲವಾರು ಸಾಹಿತಿಗಳ ವಿಚಾರವಾಗಿ ತಿಳಿಸುವ ಪ್ರಯತ್ನ ಮಾಡುತ್ತಿದ್ದೇನೆ. ಪ್ರಥಮ ಬಾರಿಗೆ ಯಡಿಯೂರು ಶ್ರೀ ಕ್ಷೇತ್ರದಲ್ಲಿನ ಸಂತೆಯಲ್ಲಿ ಈ ಕಾರ್ಯ ಆರಂಭಿಸಿದ್ದು ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಸಂತೆಗಳಲ್ಲೂ ಕಾರ್ಯಕ್ರಮವನ್ನು ರೂಪಿಸುತ್ತೇವೆ ಎಂದರು. ಯಡಿಯೂರು ಸಿದ್ಧಲಿಂಗೇಶ್ವರರು ಒಬ್ಬ ವಚನಕಾರರು ಸಾಹಿತಿಗಳು ಆಗಿದ್ದು ಕನ್ನಡದಲ್ಲಿ ವಚನಗಳನ್ನು ರಚಿಸಿದ ಮಹಾಪುರುಷರು ಸಿದ್ಧಲಿಂಗೇಶ್ವರರನ್ನು ಗುರುಗಳಾಗಿ ಕಾಣದೆ ದೇವರಾಗಿ ಕಾಣುತ್ತಿರುವುದು ವಿಪರ್ಯಾಸ ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಪ್ಪಣ್ಣ ಮಾತನಾಡಿ ಕನ್ನಡ ಸಾಹಿತ್ಯ ಅಕಾಡೆಮಿ ಸಂತೆಯಲ್ಲಿ ಕನ್ನಡ ಸಾಹಿತ್ಯ ಎಂಬ ವಿನೂತನ ಕಾರ್ಯಕ್ರಮವನ್ನು ಏರ್ಪಡಿಸಿರುವುದು ಅಭಿನಂದನಾ ವಿಚಾರ ಆಗಿದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಗ್ರಾಮೀಣ ಪ್ರತಿಭೆಗಳು ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಅಕ್ಕ ಮತ್ತು ನಾವಿಕ ಸಂಸ್ಥೆ 500ಕ್ಕಿಂತ ಹೆಚ್ಚು ಜನ ಗ್ರಾಮೀಣ ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡಲಾಗಿದೆ ಸರ್ಕಾರವು ಕೂಡ ಹೆಚ್ಚು ಹೆಚ್ಚು ಗ್ರಾಮೀಣ ಪ್ರತಿಭೆಗಳಿಗೆ ಅವಕಾಶ ನೀಡಿ ಹಳ್ಳಿಯ ಮತ್ತು ದಲಿತ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಣಿಗಲ್ ಶಾಸಕ ಡಾ. ರಂಗನಾಥ್ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆಯಬೇಕು ಸರ್ಕಾರ ಎಲ್ಲಾ ರೀತಿಯ ಸಹಕಾರಗಳನ್ನು ನೀಡಲಿದೆ. ಹಲವಾರು ಕಲಾವಿದರು ಕಲೆಗಳ ಬೆಳೆಸುವ ಪ್ರಯತ್ನದಲ್ಲಿ ಸಾಹಿತ್ಯಗಳು ಸಾಹಿತ್ಯವನ್ನು ಬೆಳೆಸುವ ಪ್ರಯತ್ನದಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಿ ಎಂದು ಸೂಚಿಸಿದರು. ಸಂತೆಯ ಬೀದಿಗಳಲ್ಲಿ ಕುಣಿಗಲ್ ರಾಮಚಂದ್ರ ಸಾಹಿತ್ಯ ಭರಿತವಾದ ಹಲವಾರು ಜಾನಪದ ಮತ್ತು ಸಾಹಿತ್ಯದ ಹಾಡುಗಳನ್ನು ಹಾಡುವ ಮುಖಾಂತರ ಸಂತೆಗೆ ಬಂದಿದ್ದ ವ್ಯಾಪಾರಸ್ಥರು ರೈತರು ಸೇರಿದಂತೆ ಸಾರ್ವಜನಿಕರನ್ನು ರಂಜಿಸಿದರು. ಕಾರ್ಯಕ್ರಮಕ್ಕೆ ಪ್ರಾರಂಭದ ಮುನ್ನ ಬೀರಗಾನಹಳ್ಳಿ ರೂಪ ರಿಂದ ಸಂತೆಯ ಬೀದಿಯಲ್ಲಿ ಅರೆವಾದ್ಯದ ಮುಖಾಂತರ ಹಲವಾರು ಗಣ್ಯರನ್ನು ಮೆರವಣಿಗೆಯಲ್ಲಿ ಕರೆತರಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಸುಮಾ ಸತೀಶ್ ಕನ್ನಡ ಸಾಹಿತ್ಯ ಪರಿಷತ್‌ ತುಮಕೂರು ಜಿಲ್ಲಾಧ್ಯಕ್ಷ ಕೆ ಎಸ್ ಸಿದ್ದಲಿಂಗಪ್ಪ ಎಡೆಯೂರು ಹನುಮಂತಯ್ಯ ಕುಣಿಗಲ್ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಪನೀಪಾಳ್ಯ ರಮೇಶ್ ಸೇರಿದಂತೆ ಹಲವಾರು ಸಾಹಿತಿಗಳು ಇದ್ದರು.