ನಾಡು-ನುಡಿಯ ಘನತೆ ಕಾಪಾಡುತ್ತಿರುವುದು ಸಾಹಿತ್ಯಿಕ ವಲಯ: ಡಾ. ಹೊನ್ನಪ್ಪ

KannadaprabhaNewsNetwork |  
Published : Dec 23, 2024, 01:05 AM IST
20ಎಚ್‌ಕೆಆರ್1 | Kannada Prabha

ಸಾರಾಂಶ

ಪ್ರಸ್ತುತದಲ್ಲಿ ನಾಡು-ನುಡಿಯ ಘನತೆಯನ್ನು ಕಾಪಾಡುತ್ತಿರುವುದು ಸಾಹಿತ್ಯಿಕ ವಲಯವಾಗಿದೆ ಎಂದು ಸುಣಕಲ್‌ಬಿದರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ. ಹೊನ್ನಪ್ಪ ಹೇಳಿದರು.

ಹಿರೇಕೆರೂರು: ಪ್ರಸ್ತುತದಲ್ಲಿ ನಾಡು-ನುಡಿಯ ಘನತೆಯನ್ನು ಕಾಪಾಡುತ್ತಿರುವುದು ಸಾಹಿತ್ಯಿಕ ವಲಯವಾಗಿದೆ ಎಂದು ಸುಣಕಲ್‌ಬಿದರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ. ಹೊನ್ನಪ್ಪ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಮತ್ತು ಐಕ್ಯೂಎಸಿ ವತಿಯಿಂದ ಆಯೋಜಿಸಿದ್ದ ಕನ್ನಡ ಸಾಹಿತ್ಯದ ಒಳನೋಟಗಳು ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು.

ನಾಡಿನ ಚರಿತ್ರೆ, ಕರ್ನಾಟಕದ ಆಳರಸರ ಕನ್ನಡ ಕೊಡುಗೆ, ಕನ್ನಡಕ್ಕೆ ಸಂಬಂಧಿಸಿದ ಶಾಸನಗಳು, ಕನ್ನಡ ಛಂದಸ್ಸು ಮತ್ತು ವ್ಯಾಕರಣ, ಕನ್ನಡ ಭಾಷೆ ಬೆಳೆದು ಬಂದ ಬಗೆ, ಕನ್ನಡ ಜಾನಪದ ಮತ್ತು ಜಾನಪದ ಕೃತಿಗಳು, ಕನ್ನಡಿಗರ ಬಗೆಗೆ ಬಂದ ಜೀವನ ಚರಿತ್ರೆಗಳು ಇತ್ಯಾದಿಯಾಗಿ ಕನ್ನಡ ಸಾಹಿತ್ಯ ಚರಿತ್ರೆಗೆ ಪೂರಕವಾದ ಲೇಖನಗಳ ಕುರಿತು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.

ಐಕ್ಯೂಎಸಿ ಸಂಚಾಲಕ ಪ್ರೊ. ಪ್ರಸನ್ನಕುಮಾರ ಜೆ., ಹೊಸದಾಗಿ ಶುರುಮಾಡಿರುವ ಸಾಹಿತ್ಯ ಸ್ಪಂದನ ಕನ್ನಡ ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ವಿದ್ಯಾರ್ಥಿಗಳನ್ನು ಕುರಿತು ಮೊಬೈಲ್ ಬಿಡಿ ಪುಸ್ತಕ ಹಿಡಿ ಎಂದರು.

ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಸಂತೋಷ್ ಎಸ್.ಜಿ. ಪ್ರಾಸ್ತಾವಿಕ ಮಾತನಾಡಿದರು.

ಪ್ರಾಚಾರ್ಯ ಪ್ರೊ. ರಾಮಚಂದ್ರಪ್ಪ ಬಿ.ಎಂ. ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಬಿ.ಐ. ಸಿದ್ದನಗೌಡರ, ಡಾ. ಕಾಂತೇಶ್ ಗೋಡಿಹಾಳ, ಜಯಕುಮಾರ ಹುಲ್ಲಿನಕೊಪ್ಪ, ಸುರೇಂದ್ರಬಾಬು ಎಚ್.ಎಸ್. ಹಾಗೂ ವಿದ್ಯಾರ್ಥಿಗಳಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೈಲಲ್ಲೂ ದರ್ಶನ್‌ಗೆ ‘ಅಭಿಮಾನಿಗಳು’ ಕಾಟ!
ನಾಳೆ ಹಲವು ಸಾಧಕರಿಗೆ ಗಾಂಧಿ ಪುರಸ್ಕಾರ ಪ್ರದಾನ