ಕನ್ನಡಪ್ರಭ ವಾರ್ತೆ ಮೂಡಲಗಿ ಹಳಗನ್ನಡ ಸಾಹಿತ್ಯ ಪರಂಪರೆಯಲ್ಲಿ ಅದ್ಭುತವಾದ ಮಾಹಾಕಾವ್ಯಗಳು ಸೃಷ್ಠಿಯಾಗಿದೆ. ಅವುಗಳನ್ನು ಪ್ರಸ್ತುತ ವಿದ್ಯಮಾನದಲ್ಲಿ ಗ್ರಹಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಪಿ. ನಾಗರಾಜು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಚೇರಮನ್ ಬಸಗೌಡ ಶಿ. ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಶೃದ್ಧೆ ಪ್ರಾಮಾಣಿಕತೆಯಿಂದ ಅಧ್ಯಯನ, ಅಧ್ಯಾಪನದಲ್ಲಿ ತೊಡಗಬೇಕು. ಬುದ್ಧಿ ಜೀವಿಗಳ ಮಾರ್ಗದರ್ಶನ ಪಡೆದು, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸುಂದರ ಬದುಕು ಕಟ್ಟಿಕೊಳ್ಳಬೇಕು ಎಂದರು. ಪ್ರಾಚಾರ್ಯ ಡಾ. ಸುರೇಶ ಹನಗಂಡಿ ಮಾತನಾಡಿ, ಹಳಗನ್ನಡ ಸಾಹಿತ್ಯದ ಓದು - ಬರಹ ನಿರಂತರವಾಗಿ ಸಾಗಬೇಕು. ಆಧುನಿಕ ಸಾಹಿತ್ಯದ ಭರಾಟೆಯಲ್ಲಿ ಹಳನ್ನಡ ಸಾಹಿತ್ಯ ಅಧ್ಯಯನ ಮರೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಾಪಕ ಎಂ.ಬಿ.ಕುಲಮೂರ, ಆರ್.ಎಸ್.ಪಂಡಿತ, ವಿ.ವೈ.ಕಾಳೆ, ಬಿ.ಸಿ.ಮಾಳಿ, ಸಾಗರ ಐದಮನಿ, ವಿಲಾಸ ಕೆಳಗಡೆ, ಸಂತೋಷ ಜೊಡಕುರಳಿ, ಸಂತೋಷ ಬಂದಿ, ಬಿ.ಬಿ.ವಾಲಿ, ಬಿ.ಕೆ.ಸೊಂಟನವರ ಮುಂತಾದವರು ಇದ್ದರು. ಡಾ. ಕೆ. ಎಸ್. ಪರವ್ವಗೊಳ ನಿರೂಪಸಿದರು. ಪ್ರೊ. ರಾಜಶ್ರೀ ತೋಟಗಿ ಸ್ವಾಗತಿಸಿದರು. ಪ್ರೊ. ಶಂಕರ ನಿಂಗನೂರ ಪರಿಚಯಿಸಿದರು. ಸಿಂಧು ನಾಯಿಕವಾಡಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪ್ರೊ. ಮುಸ್ತಪ್ಪಾ ಜಾಗಾರ ವಂದಿಸಿದರು.