ಸಾಹಿತ್ಯ ಬದುಕಿನ ಮೌಲ್ಯಗಳನ್ನು ಒಳಗೊಂಡಿದೆ

KannadaprabhaNewsNetwork |  
Published : Feb 01, 2024, 02:01 AM IST
ಫೋಟೋ ಫೈಲ್ ನಂ> 27ಎಮ್‌ಡಿಎಲ್‌ಜಿ4  ಮೂಡಲಗಿ: ಕಲ್ಲೋಳಿಯ  ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ  ಹಳಗನ್ನಡ ಸಾಹಿತ್ಯ ರಸಗ್ರಹಣ ಉಪನ್ಯಾಸ ಕಾರ್ಯಕ್ರಮದಲ್ಲಿ ಆರ್.ಸಿ.ಯು ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಪಿ. ನಾಗರಾಜು ಮಾತನಾಡಿದರು.  | Kannada Prabha

ಸಾರಾಂಶ

ವಿದ್ಯಾರ್ಥಿಗಳು ಹಳಗನ್ನಡ ಎಂದು ಮೂಗು ಮುರಿಯದೆ ಶ್ರಮವಹಿಸಿ ಶೃದ್ಧೆಯಿಂದ ಅಧ್ಯಯನ ಮಾಡಿದಾಗ ಕಾವ್ಯಗಳ ಅಂತಃಸತ್ವ ಅರಿಯಲು ಸಾಧ್ಯವಾಗುತ್ತದೆ.

ಕನ್ನಡಪ್ರಭ ವಾರ್ತೆ ಮೂಡಲಗಿ ಹಳಗನ್ನಡ ಸಾಹಿತ್ಯ ಪರಂಪರೆಯಲ್ಲಿ ಅದ್ಭುತವಾದ ಮಾಹಾಕಾವ್ಯಗಳು ಸೃಷ್ಠಿಯಾಗಿದೆ. ಅವುಗಳನ್ನು ಪ್ರಸ್ತುತ ವಿದ್ಯಮಾನದಲ್ಲಿ ಗ್ರಹಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಪಿ. ನಾಗರಾಜು ಹೇಳಿದರು.

ಅವರು ತಾಲೂಕಿನ ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜು ಹಮ್ಮಿಕೊಂಡಿದ್ದ ಹಳಗನ್ನಡ ಸಾಹಿತ್ಯ ರಸಗ್ರಹಣ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿ, ವಿದ್ಯಾರ್ಥಿಗಳು ಹಳಗನ್ನಡ ಎಂದು ಮೂಗು ಮುರಿಯದೆ ಶ್ರಮವಹಿಸಿ ಶೃದ್ಧೆಯಿಂದ ಅಧ್ಯಯನ ಮಾಡಿದಾಗ ಕಾವ್ಯಗಳ ಅಂತಃಸತ್ವ ಅರಿಯಲು ಸಾಧ್ಯವಾಗುತ್ತದೆ. ಪಂಪ, ರನ್ನ, ಪೊನ್ನ, ಜನ್ನ ಮೊದಲಾದ ಕವಿಗಳು ತಮ್ಮ ಕಾವ್ಯಗಳಲ್ಲಿ ಸಾಮಾಜಿಕ, ಧಾರ್ಮಿಕ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ. ಇಂತಹ ಎಲ್ಲ ದಾರ್ಶನಿಕ ಕವಿಗಳ ಕಾವ್ಯಗಳು ಸುಲಭವಾಗಿ ಅಂತರ್‌ಜಾಲದಲ್ಲಿ ದೊರೆಯುತ್ತಿದ್ದು, ಅವುಗಳ ಪ್ರಯೋಜನ ಪಡೆದು ನಮ್ಮ ಜ್ಞಾನ ಇಮ್ಮಡಿಗೊಳಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಚೇರಮನ್ ಬಸಗೌಡ ಶಿ. ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಶೃದ್ಧೆ ಪ್ರಾಮಾಣಿಕತೆಯಿಂದ ಅಧ್ಯಯನ, ಅಧ್ಯಾಪನದಲ್ಲಿ ತೊಡಗಬೇಕು. ಬುದ್ಧಿ ಜೀವಿಗಳ ಮಾರ್ಗದರ್ಶನ ಪಡೆದು, ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸುಂದರ ಬದುಕು ಕಟ್ಟಿಕೊಳ್ಳಬೇಕು ಎಂದರು. ಪ್ರಾಚಾರ್ಯ ಡಾ. ಸುರೇಶ ಹನಗಂಡಿ ಮಾತನಾಡಿ, ಹಳಗನ್ನಡ ಸಾಹಿತ್ಯದ ಓದು - ಬರಹ ನಿರಂತರವಾಗಿ ಸಾಗಬೇಕು. ಆಧುನಿಕ ಸಾಹಿತ್ಯದ ಭರಾಟೆಯಲ್ಲಿ ಹಳನ್ನಡ ಸಾಹಿತ್ಯ ಅಧ್ಯಯನ ಮರೆಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಾಪಕ ಎಂ.ಬಿ.ಕುಲಮೂರ, ಆರ್‌.ಎಸ್.ಪಂಡಿತ, ವಿ.ವೈ.ಕಾಳೆ, ಬಿ.ಸಿ.ಮಾಳಿ, ಸಾಗರ ಐದಮನಿ, ವಿಲಾಸ ಕೆಳಗಡೆ, ಸಂತೋಷ ಜೊಡಕುರಳಿ, ಸಂತೋಷ ಬಂದಿ, ಬಿ.ಬಿ.ವಾಲಿ, ಬಿ.ಕೆ.ಸೊಂಟನವರ ಮುಂತಾದವರು ಇದ್ದರು. ಡಾ. ಕೆ. ಎಸ್. ಪರವ್ವಗೊಳ ನಿರೂಪಸಿದರು. ಪ್ರೊ. ರಾಜಶ್ರೀ ತೋಟಗಿ ಸ್ವಾಗತಿಸಿದರು. ಪ್ರೊ. ಶಂಕರ ನಿಂಗನೂರ ಪರಿಚಯಿಸಿದರು. ಸಿಂಧು ನಾಯಿಕವಾಡಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಪ್ರೊ. ಮುಸ್ತಪ್ಪಾ ಜಾಗಾರ ವಂದಿಸಿದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ