(ರಾಜ್ಯಸುದ್ದಿ) ಮಂಗಳೂರಿನಲ್ಲಿ ಲೀಥಿಯಂ ನಿಕ್ಷೇಪ ಪತ್ತೆ

KannadaprabhaNewsNetwork |  
Published : Jul 27, 2024, 12:45 AM IST
ಡಾ. ಬಿ. ಸುಶೀಲಾ, ಜಿಲ್ಲಾಧಿಕಾರಿ, ಯಾದಗಿರಿ. | Kannada Prabha

ಸಾರಾಂಶ

ಶಹಾಪುರದ ಗೋಗಿಯಲ್ಲಿ ಯುರೇನಿಯಂ ಪತ್ತೆಯಾಗಿತ್ತು ಈಗ, ಸುರಪುರದ ಮಂಗಳೂರಿನಲ್ಲಿ ಲೀಥಿಯಂ ನಿಕ್ಷೇಪ

ಕನ್ನಡಪ್ರಭ ವಾರ್ತೆ ಯಾದಗಿರಿ

ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಮಂಗಳೂರಿನಲ್ಲಿ ಲೀಥಿಯಂ ನಿಕ್ಷೇಪ ಪತ್ತೆಯಾಗಿದ್ದು, ಕೇಂದ್ರದ ಸಂಬಂಧಿತ ಇಲಾಖೆಯ ಅಧಿಕಾರಿಗಳು ಈ ಕುರಿತು ಪ್ರಾಥಮಿಕ ಸಮೀಕ್ಷೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ದೊರೆಯುವ ಸಾಧ್ಯತೆಯಿದೆ ಎಂದು ಡಿಸಿ ಡಾ.ಬಿ.ಸುಶೀಲಾ, ತಮ್ಮನ್ನು ಸಂಪರ್ಕಿಸಿದ "ಕನ್ನಡಪ್ರಭ "ಕ್ಕೆ ತಿಳಿಸಿದರು.

ಕರ್ನಾಟಕದ ಮಂಡ್ಯ ಜಿಲ್ಲೆಯ ಮರಳಗಳ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಲೀಥಿಯಂ ನಿಕ್ಷೇಪ ಪತ್ತೆಯಾಗಿರುವ ಬಗ್ಗೆ ಪರಮಾಣು ಶಕ್ತಿ ಇಲಾಖೆಯ ಘಟಕವಾದ, ಆಟೋಮಿಕ್‌ ಮಿನರಲ್ಸ್‌ ಡೈರೆಕ್ಟೋರೇಟ್‌ ಫಾರ್‌ ಎಕ್ಸಪ್ಲೋರೇಶನ್‌ ಆ್ಯಂಡ್‌ ರೀಸರ್ಚ್‌ ತಂಡ ಪತ್ತೆ ಮಾಡಿರುವುದಾಗಿ ಭೂವಿಜ್ಞಾನ ರಾಜ್ಯ ಸಚಿವ(ಸ್ವತಂತ್ರ) ಜಿತೇಂದ್ರ ಸಿಂಗ್‌ ಅವರು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ, ಈ ಕುರಿತು ಕುತೂಹಲ ಕೆರಳಿಸಿದೆ.

ಕಡಿಮೆ ಸಾಂದ್ರತೆಯ ಲೀಥಿಯಂ ಲೋಹ ವಿಷಕಾರಿ ಹಾಗೂ ನೀರಿನೊಂದಿಗೆ ಸಹಜವಾಗಿ ಬೆರೆಯುತ್ತದೆ. ಜಾಗತಿಕ ಮಟ್ಟದಲ್ಲಿ ಇದಕ್ಕೆ ಭಾರಿ ಬೇಡಿಕೆಯಿದ್ದು, ಪರಮಾಣು ಕಾರ್ಯಗಳಲ್ಲಿ ಬಳಕೆಯಾಗುತ್ತದೆ ಎನ್ನಲಾಗಿದೆ.

ಈ ಹಿಂದೆ, ಯುರೇನಿಯಂ ನಿಕ್ಷೇಪದಿಂದಾಗಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ(ಕೆ) ಪ್ರದೇಶ ದೇಶವ್ಯಾಪಿ ಗಮನ ಸೆಳೆದಿತ್ತು. ಆ ಪ್ರದೇಶದ ಜನರ ಆರೋಗ್ಯದ ಮೇಲಾಗುತ್ತಿದ್ದ ವ್ಯತಿರಿಕ್ತ ಪರಿಣಾಮಗಳಿಂದಾಗಿ ಪ್ರತಿರೋಧದ ಕಾರಣಗಳಿಂದ ಯುರೇನಿಯಂ ಉತ್ಖನನ ಕಾರ್ಯ ಸ್ಥಗಿತಗೊಳಿಸಲಾಗಿತ್ತು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಮಂಗಳೂರು ಇದೀಗ ಜಾಗತಿಕ ಮಟ್ಟದಲ್ಲಿ ಗಮನಕ್ಕೆ ಕಾರಣವಾಗಿರುವುದು ಮಹತ್ವದವೆನಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!