ಶಿಕ್ಷಣದ ಮೂಲಕ ಸಂಸ್ಕಾರಯುತ ಸಮಾಜ: ಚಂದ್ರಕಲಾ ನಂದಾವರ

KannadaprabhaNewsNetwork |  
Published : Jul 29, 2026, 03:00 AM IST
ಮಂಗಳೂರು: ಮಿತ್ರ ಮಂಡಳಿ ಪುನಶ್ಚೇತನ ಕಾರ್ಯಕ್ರಮವನ್ನು ಸಾಹಿತಿ ಚಂದ್ರಕಲಾ ನಂದಾವರ ಉದ್ಘಾಟಿಸಿದರು | Kannada Prabha

ಸಾರಾಂಶ

ಸಾಹಿತ್ಯ ಮತ್ತು ಶಿಕ್ಷಣದ ಮೂಲಕ ಸಂಸ್ಕಾರಯುತ ನಾಗರಿಕ ಸಮಾಜ ನಿರ್ಮಾಣ ಸಾಧ್ಯ ಎಂದು ಖ್ಯಾತ ಸಾಹಿತಿ ಚಂದ್ರಕಲಾ ನಂದಾವರ ಹೇಳಿದರು.

ಮಂಗಳೂರು: ಸಾಹಿತ್ಯ ಮತ್ತು ಶಿಕ್ಷಣದ ಮೂಲಕ ಸಂಸ್ಕಾರಯುತ ನಾಗರಿಕ ಸಮಾಜ ನಿರ್ಮಾಣ ಸಾಧ್ಯ ಎಂದು ಖ್ಯಾತ ಸಾಹಿತಿ ಚಂದ್ರಕಲಾ ನಂದಾವರ ಹೇಳಿದರು.ಅವರು ಮಂಗಳೂರಿನ ಡೊಂಗರಕೇರಿಯಲ್ಲಿರುವ ಸುಧೀಂದ್ರ ಸಭಾಂಗಣದಲ್ಲಿ ಮಿತ್ರ ಮಂಡಳಿ 2.0 ಪುನಶ್ಚೇತನದ ಚಾಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಂಗಳೂರಿನ ಕೋರ್ಟ್ ಗುಡ್ಡೆಯ ಆಲದ ಮರದಡಿಯಲ್ಲಿ ಸಮಾನ ಸಾಹಿತ್ಯಾಸಕ್ತರು, ಕನ್ನಡ ಭಾಷಾ ಪಂಡಿತರ ಸಾಹಿತ್ಯ ಚರ್ಚೆಯಲ್ಲಿ ಆರಂಭವಾದ ಮಿತ್ರ ಮಂಡಳಿ ಸಾಹಿತ್ಯ ಲೋಕಕ್ಕೆ ದಿಗ್ಗಜ ಸಾಹಿತಿಗಳನ್ನು ನೀಡಿದೆ. ಮಿತ್ರ ಮಂಡಳಿಯಿಂದ ಬಿಡುಗಡೆಯಾದ ಪುಸ್ತಕಗಳು ಚರಿತ್ರೆಯ ಪುಟಗಳಲ್ಲಿ ಶ್ರೇಷ್ಟ ಸಾಹಿತ್ಯ ಪ್ರಕಾರಗಳಾಗಿ ದಾಖಲಾಗಿವೆ. ಇದರಲ್ಲಿ ಕೆನರಾ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕರ, ವಿದ್ಯಾರ್ಥಿಗಳ ಕೊಡುಗೆ ದೊಡ್ಡದಿದೆ. ಆ ನಿಟ್ಟಿನಲ್ಲಿ ಮಿತ್ರ ಮಂಡಳಿಯನ್ನು ಮತ್ತೆ ಪುನರುಜ್ಜೀನವನಗೊಳಿಸುವ ಕಾರ್ಯವನ್ನು ಕೆನರಾ ಶಿಕ್ಷಣ ಸಂಸ್ಥೆ ಮಾಡಿರುವುದು ಉತ್ತಮ ಹೆಜ್ಜೆ ಎಂದರು.

ಮಿತ್ರ ಮಂಡಳಿಯ ಆಧಾರ ಸ್ತಂಭಗಳಾಗಿದ್ದ ಜೋಡುಮಠ ವಾಮನ ಭಟ್, ಎಂ.ಎನ್.ಕಾಮತ್, ಪೇಜಾವರ ಸದಾಶಿವ ರಾವ್, ಕಣಂದೂರು ತಿಮ್ಮಯಾಚಾರ್, ಕಣಂದೂರು ರಾಘವಾಚಾರ್ ಸಹಿತ ಅನೇಕ ಹೆಸರುಗಳನ್ನು ಉದಾಹರಿಸಿದ ಅವರು ಎಲ್ಲರ ಪ್ರಯತ್ನದಿಂದ ಕನ್ನಡ ಸಾಹಿತ್ಯ ಲೋಕ ಶ್ರೀಮಂತವಾಯಿತು. ಅಂದು ಸ್ವಾತಂತ್ರ್ಯ ಹೋರಾಟದ ಭಾಗವಾಗಿ ಅನೇಕ ಶಿಕ್ಷಕರು, ವಕೀಲರು ಸಾಹಿತ್ಯದ ಕೃಷಿಗಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ ಇಂದಿನ ಶಿಕ್ಷಣ ಯುಗದಲ್ಲಿ ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಕಡಿಮೆಯಾಗುತ್ತಿದೆ. ಆದರೆ ಕೆನರಾ ಶಿಕ್ಷಣ ಸಂಸ್ಥೆಯ ಹೊಸ ಪ್ರಯತ್ನ ಮಿತ್ರ ಮಂಡಳಿ 2.0 ಮೂಲಕ ಹೊಸ ಸೃಜನಶೀಲ ಸಮಾಜ ನಿರ್ಮಾಣವಾಗಲಿ. ಸಂಸ್ಕಾರಯುತ ಸಮಾಜಕ್ಕೆ ಈ ಹೆಜ್ಜೆ ದೊಡ್ಡ ಕೊಡುಗೆ ನೀಡಲಿ ಎಂದರು. ಕೆನರಾ ಕಾಲೇಜಿನ ಪ್ರಾಧ್ಯಾಪಕಿ ದೀಪ್ತಿ ನಾಯಕ್, ಕೆನರಾ ಕಲ್ಚರಲ್ ಅಕಾಡೆಮಿ ಸಂಚಾಲಕ ಮಂಗಲ್ಪಾಡಿ ನರೇಶ್ ಶೆಣೈ, ಸಾರ್ವಜನಿಕ ಸಂಪರ್ಕಾಧಿಕಾರಿ ಉಜ್ವಲ್ ಮಲ್ಯ, ಮಿತ್ರ ಮಂಡಳಿಯ ರೂಪುರೇಶೆ ಪ್ರಮುಖರಾದ ಗುರು ಬಂಟ್ವಾಳಕಾರ್, ವಿಕ್ರಮ್ ರಾಜ್ ಮತ್ತಿತರರು ಇದ್ದರು.

ಕೆನರಾ ಹೈಸ್ಕೂಲ್ ಅಸೋಸಿಯೇಶನ್ ಸಿಎ ಗಿರಿಧರ್ ಕಾಮತ್ ಪ್ರಾಸ್ತಾವಿಕ ಮಾತನಾಡಿದರು.

ಪ್ರಾಧ್ಯಾಪಕ ಪ್ರದೀಪ್ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿಕ್ಕಬಳ್ಳಾಪುರದಲ್ಲಿ ಐತಿಹಾಸಿಕ ರಕ್ತದಾನ ಶಿಬಿರ
ಹಿಪ್ಪರಗಿ ಕಾರು ಸ್ಫೋಟ ಪ್ರಕರಣ: ಐಜಿಪಿ ಭೇಟಿ