ಲಿಟಲ್ ಸ್ಕಾಲರ್ಸ್ ಅಕಾಡೆಮಿ: ಮಕ್ಕಳ ಬೇಸಿಗೆ ಶಿಬಿರ ಸಂಪನ್ನ

KannadaprabhaNewsNetwork |  
Published : May 28, 2026, 02:30 AM IST
ಚಿತ್ರ :  26ಎಂಡಿಕೆ7 : ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಯಶಸ್ವಿಯಾಗಿ ಜರುಗಿದ ಮಕ್ಕಳ ಬೇಸಿಗೆ ಶಿಬಿರ. | Kannada Prabha

ಸಾರಾಂಶ

ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರವು ಯಶಸ್ವಿಯಾಗಿ ಜರುಗಿತು. ಸ್ಲ್ಯಾಶ್ ಅಂಡ್ ಸ್ಪಾರ್ಕ್ 2026 ಎಂಬ ಧ್ಯೇಯದಡಿಯಲ್ಲಿ ಈ ಶಿಬಿರ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ವಿರಾಜಪೇಟೆ

ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರವು ಯಶಸ್ವಿಯಾಗಿ ಜರುಗಿತು. ಸ್ಲ್ಯಾಶ್ ಅಂಡ್ ಸ್ಪಾರ್ಕ್ 2026 ಎಂಬ ಧ್ಯೇಯದಡಿಯಲ್ಲಿ ಈ ಶಿಬಿರ ಆಯೋಜಿಸಲಾಗಿತ್ತು.

ನಾಲ್ಕು ವಾರಗಳ ಕಾಲ ಜರುಗಿದ ಈ ಶಿಬಿರಕ್ಕೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕಿ ಪೂಜಾ ಸಜೇಶ್ ಚಾಲನೆ ನೀಡಿದರು.

ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಸೃಜನಾತ್ಮಕ ಕಲಿಕೆಯ ಜೊತೆಗೆ ಮನರಂಜನೆಯನ್ನು ಒದಗಿಸಲಾಯಿತು. ಕಲೆ, ಕ್ರೀಡೆ ಹಾಗೂ ವಿಜ್ಞಾನದ ಕುರಿತಾದ ಚಟುವಟಿಕೆಗಳ ಕುರಿತು ಪರಿಚಯಿಸಲಾಯಿತು.

ಮಕ್ಕಳಿಗೆ ಕಾರ್ಡ್ ಬೋರ್ಡ್ ಕ್ರಿಯೇಷನ್, ಡೂಡಲ್ ಆರ್ಟ್, ಸ್ಕ್ರಿಬಲ್ ಆರ್ಟ್, ಬಾಟಲ್ ಪೇಂಟಿಂಗ್, ಅಡುಗೆ ತಯಾರಿಸುವ ವಿಧಾನಗಳು, ಪರಿಸರ ವಿಜ್ಞಾನ, ಆಡಿಯೋ ವಿಜುವಲ್ ಕಮ್ಯುನಿಕೇಶನ್, ರೊಬೊಟಿಕ್ಸ್ ಮುಂತಾದ ವಿಷಯದ ಕುರಿತು ತರಬೇತಿಯನ್ನು ನೀಡಲಾಯಿತು. ಮಕ್ಕಳು ಕೂಡ ತಮ್ಮ ಕೈ ಚಳಕದಿಂದ ಅನೇಕ ಸುಂದರ ಕಲಾಕೃತಿಗಳನ್ನು ತಯಾರಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ಒಳಾಂಗಣ ಹಾಗೂ ಹೊರಾಂಗಣ ಕ್ರೀಡೆಗಳಲ್ಲಿ ಭಾಗವಹಿಸಿ ಪರಸ್ಪರ ಸ್ನೇಹ, ಸಹಕಾರ ಹಾಗೂ ತಂಡದ ನಾಯಕತ್ವದ ಮನೋಭಾವವನ್ನು ಬೆಳೆಸಿಕೊಂಡರು. ಶಿಬಿರದ ಎಲ್ಲಾ ತರಬೇತಿಗಳಲ್ಲಿ ಮಕ್ಕಳು ಸಂತಸದಿಂದ ಪಾಲ್ಗೊಂಡು ತುಂಬಾ ಆಸಕ್ತಿಯಿಂದ ವಿವಿಧ ವಿಚಾರಗಳನ್ನು ಅರಿತರು. ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥರಾದ ಪೂಜಾ ಸಜೇಶ್ ರವರು ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಹಾಗೂ ಸೃಜನಾತ್ಮಕ ಕಲಿಕೆಗೆ ಇಂತಹ ಶಿಬಿರಗಳು ಉಪಯುಕ್ತವಾಗಿದ್ದು ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವುದಲ್ಲದೆ ಜ್ಞಾನ ಹಾಗೂ ಜೀವನ ಕೌಶಲ್ಯವನ್ನು ಕಲಿಸುತ್ತದೆ. ಪೋಷಕರು ಮಕ್ಕಳಿಗೆ ಮತ್ತಷ್ಟು ಪ್ರೋತ್ಸಾಹ ನೀಡಿದಲ್ಲಿ ಅವರ ಕಲಿಕೆಯು ಪರಿಣಾಮಕಾರಿಯಾಗುತ್ತದೆ ಎಂದು ಹೇಳಿದರು. ಸ್ಲ್ಯಾಶ್ ಅಂಡ್ ಸ್ಪಾರ್ಕ್ 2026 ರ ಮಕ್ಕಳ ಬೇಸಿಗೆ ಶಿಬಿರವು ವಿನೂತನ ಕಲಿಕೆಗಳೊಂದಿಗೆ ಯಶಸ್ವಿಯಾಗಿ ಜರುಗಿದೆ ಎಂದರು.

ಶಾಲಾ ಕಾರ್ಯದರ್ಶಿ ಪ್ರತಿಮಾ, ಮುಖ್ಯ ಶಿಕ್ಷಕರಾದ ಮೀರಾ ಪೂಣಚ್ಚ, ಕ್ಯಾಂಪಸ್ ನಿರ್ವಹಣೆಗಾರರಾದ ರಿಚರ್ಡ್, ತರಬೇತುದಾರರು ಹಾಗೂ ಅಮ್ಮತ್ತಿ ಯ ಲೈಟ್ ಜೂಮ್ ಆಡ್ಸ್ ನ ಸ್ಥಾಪಕರಾದ ಥೌಸೀಫ್, ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಶಿಕ್ಷಕರು, ಸಿಬ್ಬಂದಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕತಾರ್ ಕರ್ನಾಟಕ ಸಂಘದ ಅಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವಿರೋಧ ಆಯ್ಕೆ
ಕಾಲೇಜು ಅಭಿವೃದ್ಧಿಗೆ ಅಗತ್ಯ ಸಹಕಾರ: ಪ್ರೊ. ಅಶೋಕ್ ಸಂಗಪ್ಪ ಆಲೂರ