ವಚನಗಳಲ್ಲಿನ ಜೀವನ ಮೌಲ್ಯ ಅರಿತು ಬಾಳಿ: ಶಾಂತ

KannadaprabhaNewsNetwork |  
Published : Jan 14, 2026, 02:30 AM IST
ಹೊನ್ನಾಳಿ ಫೋಟೋ 11ಎಚ್.ಎಲ್.ಐ1 ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಶ್ರೀಚನ್ನೇಶ್ವರ ಗ್ರಾಮಾಂತರ ಪದವಿ ಪೂರ್ವ ಕಾಲೇಜು ಇವರ ಸಹಯೋಗದಲ್ಲಿ ಶ್ರೀ ಚನ್ನೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ-ಕಾಲೇಜು ಅಂಗಳದಲ್ಲಿ ಸಾಹಿತ್ಯೋತ್ಸವ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರದಲ್ಲಿ ಪಿ.ಎಂ.ಸಿದ್ದಯ್ಯ ರಚಿಸಿದ “ಬದುಕಿನ ಪ್ರಜ್ಞೆ ಕೃತಿ ಲೋಕಾರ್ಪಣೆ”ಗೊಳಿಸಿ ಮಾತನಾಡಿದರು | Kannada Prabha

ಸಾರಾಂಶ

ಶರಣರು, ವಚನಕಾರರು ರಚಿಸಿದ ವಚನಗಳ ಸಾಹಿತ್ಯದಲ್ಲಿ ಮನುಷ್ಯನ ಜೀವನ ಮೌಲ್ಯಗಳು ಅಡಗಿವೆ. ಕಾಲೇಜು ವಿದ್ಯಾರ್ಥಿಗಳು ವಚನ ಸಾಹಿತ್ಯದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ. ಎಸ್.ಟಿ. ಶಾಂತ ಗಂಗಾಧರ ದಾವಣಗೆರೆ ಹೇಳಿದ್ದಾರೆ.

- ಶಾಲಾ- ಕಾಲೇಜು ಅಂಗಳದಲ್ಲಿ ಸಾಹಿತ್ಯೋತ್ಸವ- ದತ್ತಿ ಉಪನ್ಯಾಸ ಕಾರ್ಯಕ್ರಮ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಶರಣರು, ವಚನಕಾರರು ರಚಿಸಿದ ವಚನಗಳ ಸಾಹಿತ್ಯದಲ್ಲಿ ಮನುಷ್ಯನ ಜೀವನ ಮೌಲ್ಯಗಳು ಅಡಗಿವೆ. ಕಾಲೇಜು ವಿದ್ಯಾರ್ಥಿಗಳು ವಚನ ಸಾಹಿತ್ಯದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ. ಎಸ್.ಟಿ. ಶಾಂತ ಗಂಗಾಧರ ದಾವಣಗೆರೆ ಹೇಳಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಶ್ರೀಚನ್ನೇಶ್ವರ ಗ್ರಾಮಾಂತರ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಶ್ರೀ ಚನ್ನೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಶಾಲಾ- ಕಾಲೇಜು ಅಂಗಳದಲ್ಲಿ ಸಾಹಿತ್ಯೋತ್ಸವ ಮತ್ತು ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು ಕುರಿತು ಅವರು ಉಪನ್ಯಾಸ ನೀಡಿದರು.

ವಚನಕಾರರು ಅಂದು ಮೌಲ್ಯಗಳನ್ನು ಸರಳವಾಗಿ ಆಚರಿಸುತ್ತ ಕಾಯಕವೇ ಕೈಲಾಸ ಎಂದು ಜೀವನ ನಡೆಸುತ್ತಿದ್ದರು. ಆದರೆ ಆಧುನಿಕತೆ ಬೆಳೆದಂತೆ ವಚನಕಾರರ ಮೌಲ್ಯಗಳನ್ನು ಇಂದಿನ ಯುವಜನತೆ ಅಳವಡಿಸಿಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಶ್ರೀ ಚನ್ನೇಶ್ವರ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಕವಿರಾಜ್ ಮಾತನಾಡಿ, ಪಿ.ಎಂ. ಸಿದ್ದಯ್ಯನವರ ಬದುಕಿನ ಪ್ರಜ್ಞೆ ಎಂಬ ಕೃತಿಯಲ್ಲಿ ಬರುವ ಆಂಶಗಳು ಇಂದಿನ ಯುವಪೀಳಿಗೆಗೆ ನೀತಿ ಮತ್ತು ಅರಿವು ಮೂಡಿಸಲು ಅತ್ಯಂತ ಸಹಕಾರಿಯಾಗಿದೆ ಎಂದರು.

ಸಾಹಿತ್ಯ, ಸಂಸ್ಕೃತಿ, ಮಾನವಧರ್ಮ ಪರಂಪರೆಗಳ ಬಗ್ಗೆ ತುಂಬಾ ಗೌರವವಿದೆ. ಇಂದಿನ ಸಮಾಜದಲ್ಲಿ ಬದುಕಿನ ಪ್ರಜ್ಞೆಯೊಂದಿಗೆ ಯುವಜನತೆ ಪ್ರತಿಯೊಬ್ಬರ ವಿಚಾರಧಾರೆಗಳನ್ನು ಮನನ ಮಾಡಿಕೊಂಡು ಅದರಂತೆ ನಡೆಯಲು ಮುಂದಾದರೆ ಅವರು ತಮ್ಮ ಜೀವನದಲ್ಲಿ ಯಶಸ್ಸು ಕಾಣುತ್ತಾರೆ ಎಂದರು.

ಈ ಸಂದರ್ಭ ಸಾಹಿತಿ ಪಿ.ಎಂ. ಸಿದ್ದಯ್ಯ ಅವರು ತಮ್ಮ ಕೃತಿ ಬದುಕಿನಪ್ರಜ್ಞೆ ಕೃತಿಯನ್ನು ಲೋಕಾರ್ಪಣೆಗೊಳಿಸಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಯು.ಬಿ. ಜಯಪ್ಪ ಅವರಿಗೆ ತಾಲೂಕು ಕಸಾಪ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಶ್ರೀಚನ್ನೇಶ್ವರ ಗ್ರಾಮಾಂತರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಟಿ.ಎಂ. ಉಮಾಕಾಂತ ಮಾತನಾಡಿದರು.

ಕಸಾಪ ತಾಲೂಕು ಅಧ್ಯಕ್ಷ ಜಿ.ಮುರುಗೆಪ್ಪ ಗೌಡ ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿ ಬಗ್ಗೆ ಮಾತನಾಡಿದರು. ಕಸಾಪ ಮಾಜಿ ಅಧ್ಯಕ್ಷ ಎಂ.ಎಸ್. ರೇವಣಪ್ಪ,ಕಸಾಪ ಉಪಾಧ್ಯಕ್ಷ ಗೋವಿಂದಪ್ಪ, ಗೌರವ ಕಾರ್ಯದರ್ಶಿ ಕೆ.ಶೇಖರಪ್ಪ, ಕಾರ್ಯದರ್ಶಿ ಬಿ.ವಿ. ಬಸವರಾಜ, ಸದಸ್ಯರಾದ ಶಾರದ ಕಣಗೊಟಗಿ, ನಿಜಲಿಂಗಪ್ಪ ಇದ್ದರು.

ದತ್ತಿ ದಾನಿಗಳಾದ ಕೋಟೆಹಾಳ ಎಚ್.ಎಸ್. ಬಸವರಾಜ ಅವರು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕಸಾಪ ಪದಾಧಿಕಾರಿಗಳು, ಉಪನ್ಯಾಸಕರು, ಕಾಲೇಜು ವಿದ್ಯಾರ್ಥಿಗಳು ಇದ್ದರು.

- - -

-11ಎಚ್.ಎಲ್.ಐ1:

ಶಾಲಾ-ಕಾಲೇಜು ಅಂಗಳದಲ್ಲಿ ಸಾಹಿತ್ಯೋತ್ಸವ, ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಪಿ.ಎಂ.ಸಿದ್ದಯ್ಯ ಅವರು “ಬದುಕಿನ ಪ್ರಜ್ಞೆ” ಕೃತಿ ಲೋಕಾರ್ಪಣೆಗೊಳಿಸಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಕೆಲಸವನ್ನು ತಲೆಮೇಲೆ ಹೊತ್ತು ಮಾಡುವೆ
ಜಾತಿ ವೈಷಮ್ಯಕ್ಕೆ ಅವಕಾಶವಿಲ್ಲ:ಡಾ. ತೌಫೀಕ್‌ ಪಾರ್ಥನಳ್ಳಿ