ಸಂವಿಧಾನದ ಆಶಯಕ್ಕೆ ತಕ್ಕಂತೆ ಬದುಕಿ: ಕಲ್ಯಾಣಿ ವೆಂಕಟೇಶ ಕಾಂಬ್ಳೆ

KannadaprabhaNewsNetwork |  
Published : Jan 27, 2025, 12:46 AM IST
ಫೋಟೋ : ೨೬ಕೆಎಂಟಿ_ಜೆಎಎನ್_ಕೆಪಿ೧ : ಮಣಕಿ ಮೈದಾನದಲ್ಲಿ ತಾಲೂಕಾಡಳಿತದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು. ಪಿಎಸ್‌ಐ ಮಂಜುನಾಥ ಗೌಡರ ಇದ್ದರು.  | Kannada Prabha

ಸಾರಾಂಶ

ಕುಮಟಾದ ಮಣಕಿ ಮೈದಾನದಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದ ೭೬ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನಡೆಸಿ, ಪಥಸಂಚಲನವನ್ನುಉಪವಿಭಾಗಾಧಿಕಾರಿ ಕಲ್ಯಾಣಿ ವೆಂಕಟೇಶ ಕಾಂಬ್ಳೆ ವೀಕ್ಷಿಸಿದರು.

ಕುಮಟಾ: ದೇಶದಲ್ಲಿ ಪ್ರಜೆಗಳ ಪ್ರಭುತ್ವದಲ್ಲಿ ಸಮಗ್ರತೆ, ಸಮಾನತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದೇ ಸಂವಿಧಾನದ ಧ್ಯೇಯವಾಗಿದ್ದು, ಪ್ರತಿಯೊಬ್ಬರೂ ದೇಶಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಡಬೇಕು. ಸಂವಿಧಾನದ ಆಶಯಗಳಿಗೆ ಧಕ್ಕೆ ಬರದಂತೆ ಬದುಕಿ ಪ್ರಗತಿ ಸಾಧಿಸಬೇಕು ಎಂದು ಉಪವಿಭಾಗಾಧಿಕಾರಿ ಕಲ್ಯಾಣಿ ವೆಂಕಟೇಶ ಕಾಂಬ್ಳೆ ತಿಳಿಸಿದರು.

ಪಟ್ಟಣದ ಮಣಕಿ ಮೈದಾನದಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದ ೭೬ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನಡೆಸಿ, ಪಥಸಂಚಲನ ವೀಕ್ಷಿಸಿ, ಗೌರವವಂದನೆ ಸ್ವೀಕರಿಸಿ ಸಾರ್ವಜನಿಕ ಸಂದೇಶ ನೀಡಿದರು. ಪುರಸಭೆ ಸದಸ್ಯರಾದ ಅನಿಲ ಹರ್ಮಲಕರ, ಗೀತಾ ಮುಕ್ರಿ, ಮುಖ್ಯಾಧಿಕಾರಿ ವಿದ್ಯಾಧರ ಕಲಾದಗಿ, ತಾಪಂ ಇಒ ರಾಜೇಂದ್ರ ಭಟ್, ಆರೋಗ್ಯಾಧಿಕಾರಿ ಡಾ. ಆಜ್ಞಾ ನಾಯಕ, ವಿವಿಧ ಇಲಾಖಾ ಅಧಿಕಾರಿಗಳಾದ ಎಂ.ಪಿ. ನಾಯ್ಕ, ರಾಘವೇಂದ್ರ ನಾಯ್ಕ, ಸಿಡಿಪಿಒ ಶೀಲಾ ಪಟೇಲ, ವಿನಾಯಕ ವೈದ್ಯ, ಭಾರತಿ ಆಚಾರಿ, ರೇಖಾ ನಾಯ್ಕ ಇತರರು ಇದ್ದರು.ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧಾ ವಿಜೇತರು, ಸಾಧಕ ವಿದ್ಯಾರ್ಥಿಗಳಾದ ಭೂಮಿಕಾ ಹೆಗಡೆ, ಸಿಂಚನಾ ಭಟ್, ದೇವಕಿ ಗೌಡ, ಸಚಿನ್ ಗೌಡ, ಅನಮೋಲ್ ನಾಯ್ಕ, ಹರ್ಷಿತ ಭಟ್, ಕೃತಿಕಾ ಭಟ್, ಸಂಭ್ರಮ ನಾಯ್ಕ, ಸ್ನೇಹಾ ನಾಯ್ಕ, ರಾಹುಲ ಭಟ್ನಮನ ಹರಿಕಾಂತ, ವಿಕಾಸ ಶಾನಭಾಗ, ಪಾಯಲ್ ದಾಹಿಯಾ, ರಾಜೇಶ ಮಡಿವಾಳ, ಲಿಖಿತ ನಾಯ್ಕ ಇತರರನ್ನು ಸನ್ಮಾನಿಸಲಾಯಿತು. ತಹಸೀಲ್ದಾರ್ ಸತೀಶ ಗೌಡ ಸ್ವಾಗತಿಸಿದರು. ಶಿಕ್ಷಕ ಮಂಜುನಾಥ ನಾಯ್ಕ ನಿರ್ವಹಿಸಿದರು. ಬಳಿಕ ವಿವಿಧ ಶಾಲಾ ಮಕ್ಕಳಿಂದ ದೇಶಭಕ್ತಿಯ ಸಾಂಸ್ಕೃತಿಕ ಕಾರ್ಯಕ್ರಮ ರಂಜಿಸಿತು. ಶಾಲಾ- ಕಾಲೇಜುಗಳ ಸಹಿತ, ತಾಲೂಕಿನೆಲ್ಲೆಡೆ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗಿದ್ದು, ಸರ್ಕಾರಿ ಕಚೇರಿಗಳು, ಬ್ಯಾಂಕ್ ಇನ್ನಿತರ ಹಣಕಾಸು ಸಂಸ್ಥೆಗಳು, ಇತರ ಸಂಘ- ಸಂಸ್ಥೆಗಳಲ್ಲೂ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರಧ್ವಜ ರಾರಾಜಿಸಿದೆ.

ಪ್ರವಾಸೋದ್ಯಮ ಅಭಿವೃದ್ಧಿಗೆ ಯೋಜನೆ: ಅಷ್ಪಾಕ್‌ ಶೇಖ್‌

ದಾಂಡೇಲಿ: ನಗರದ ಹಳೆ ಸಿಎಂಸಿ ಕಟ್ಟಡದ ಮೈದಾನದಲ್ಲಿ ೭೬ನೇ ಗಣರಾಜ್ಯೋತ್ಸವದ ಪ್ರಯುಕ್ತ ನಗರಸಭೆಯ ಅಧ್ಯಕ್ಷ ಅಷ್ಪಾಕ್ ಶೇಖ ಧ್ವಜಾರೋಹಣ ನೆರವೇರಿಸಿದರು.ನಗರಸಭೆಯ ಅಧ್ಯಕ್ಷ ಅಷ್ಪಾಕ್ ಶೇಖ್ ಮಾತನಾಡಿ, ನಗರವನ್ನು ಪ್ರವಾಸೋದ್ಯಮ ಪೂರಕವಾಗಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ನಿರಂತರ ಕುಡಿಯುವ ನೀರಿನ ಯೋಜನೆ ಪ್ರಗತಿಯಲ್ಲಿ ಇದ್ದು, ತೆರಿಗೆ ಸಂಗ್ರಹ, ಮೂಲ ಸೌಕರ್ಯ ನೀಡುವಲ್ಲಿ ನಗರಾಡಳಿತ ಉತ್ತಮ ಪ್ರಗತಿ ಕಾಣುತ್ತಿದೆ. ನಗರದ ನೈರ್ಮಲ್ಯಕ್ಕೆ ನಾಗರಿಕರು ಸಹಕರಿಸಬೇಕು. ಕಂಡ ಕಂಡಲ್ಲಿ ಕಸ ಎಸೆಯುವುದನ್ನು ತಡೆಯಲು ಸಿಸಿ ಕ್ಯಾಮೆರಾ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ ಎಂದರು.

ಈ ಸಂದರ್ಭದಲ್ಲಿ ಪೌರಾಯುಕ್ತ ರಾಜಾರಾಮ ಪವಾರ, ತಹಸೀಲ್ದಾರ್ ಶೈಲೇಶ ಪರಮಾನಂದ ನಗರಸಭೆಯ ಉಪಾಧ್ಯಕ್ಷೆ ಶಿಲ್ಪಾ ಕೊಡೆ, ಸ್ಥಾಯಿ ಸಮಿತಿ ಅಧ್ಯಕ್ಷ ಸುಧಾ ರಾಮಲಿಂಗ ಜಾಧವ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರು, ಡಿಎಸ್‌ಪಿ ಶಿವಾನಂದ ಮದರಕಂಡಿ ಹಾಗೂ ನಗರಸಭೆಯ ಸದಸ್ಯರು, ಅಧಿಕಾರಿಗಳು, ತಾಲೂಕಾಡಳಿತ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

ರೋಟರಿ ಶಾಲೆ, ಸೆಂಟ್‌ ಮೈಕಲ್ ಶಾಲೆ, ಸೊರಗಾವಿ ಶಾಲೆ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ನೃತ್ಯ, ದೇಶಭಕ್ತಿಗೀತೆ ಕಾರ್ಯಕ್ರಮ ನಡೆಯಿತು.

ನಗರದ ವಿವಿಧೆಡೆ, ಸರ್ಕಾರಿ ಪದವಿಪೂರ್ವ ಕಾಲೇಜು ಹಳೆದಾಂಡೇಲಿ, ಆಶಾಕಿರಣ ಐಟಿಐ, ಸರ್ಕಾರಿ ಡಿಗ್ರಿ ಕಾಲೇಜು, ಬಂಗೂರನಗರ ಡಿಗ್ರಿ ಕಾಲೇಜು, ಬಂಗೂರನಗರ ಪಿಯು ಕಾಲೇಜು, ಜನತಾ ವಿದ್ಯಾಲಯ, ಕನ್ಯಾವಿದ್ಯಾಲಯ, ತೌಹಿದ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಶಾಲಾ- ಕಾಲೇಜುಗಳಲ್ಲಿ ಧ್ವಜಾರೋಹನವನ್ನು ನೆರವೇರಿಸಿ ೭೬ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ